Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

ಮಾಡಿದ ಪಾಪ ತಟ್ಟದಂತೆ ದೇವರಿಗೆ ತಪ್ಪು ಕಾಣಿಕೆ!... ರಾಷ್ಟ್ರಮಟ್ಟದ ಬೈಕ್‌ ರೈಡರ್‌!

Team Udayavani, Nov 6, 2024, 10:48 AM IST

1-poli

ಬೆಂಗಳೂರು: ಒಂದು ಕಾಲದಲ್ಲಿ 70 ಲಾರಿಗಳ ಮಾಲಿಕನಾಗಿದ್ದ ಉದ್ಯಮಿಯೊಬ್ಬ ಶೋಕಿ ಜೀವನದಿಂದ ನಷ್ಟ ಹೊಂದಿ, ಸರಗಳ್ಳತನಕ್ಕಿಳಿದು ಇದೀಗ ಜೈಲು ಸೇರಿದ್ದಾನೆ.

ಹುಬ್ಬಳ್ಳಿಯ ಕೋಳಿ ವಾಡ ಮೂಲದ ವಿಶ್ವನಾಥ್‌(40) ಬಂಧಿತ. ಆರೋಪಿಯಿಂದ 24.15 ಲಕ್ಷ ರೂ. ಮೌಲ್ಯದ 310 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ಧ ಬೆಂಗಳೂರು, ಧಾರ ವಾಡ, ಹೈದ್ರಾಬಾದ್‌ ಸೇರಿ ರಾಜ್ಯ ಹಾಗೂ ಹೊರ ರಾಜ್ಯದಲ್ಲಿ 150ಕ್ಕೂ ಅಧಿಕ ಸರಗಳ್ಳತನ ಪ್ರಕರಣ ಗಳು ದಾಖಲಾಗಿದ್ದು, 8-10 ವರ್ಷಗಳಿಂದ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಮಾಹಿತಿ ನೀಡಿದರು.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಬನಶಂಕರಿ 3ನೇ ಹಂತದಲ್ಲಿ ವಾಸವಾಗಿದ್ದ ರಾಜಶೇಖರ್‌ ಎಂಬವರ ಮನೆ ಬಳಿ ಆ.19ರಂದು ರಾತ್ರಿ 8 ಗಂಟೆ ಸುಮಾರಿಗೆ ಹೋಗಿದ್ದು, ಅವರ ಪತ್ನಿಗೆ ರಾಜಶೇಖರ್‌ ಬಗ್ಗೆ ವಿಚಾರಿಸಿದ್ದಾನೆ. ಆಗ ಮಹಿಳೆ, ಪತಿ ಮೈಸೂರಿನಲ್ಲಿದ್ದಾರೆ ಎಂದಿದ್ದಾರೆ. ನಂತರ ಆರೋಪಿ ಮೈಸೂರಿನ ವಿಳಾಸ ಕೊಡಿ ಎಂದು ಕೇಳಿದ್ದಾನೆ. ಯಾರೋ ಪರಿಚಯಸ್ಥ ಇರಬೇಕೆಂದು ಮಹಿಳೆ ಮನೆಯೊಳಗೆ ಬನ್ನಿ ಎಂದು ಕರೆದೊಯ್ಯುತ್ತಿದ್ದಂತೆ, 40 ಗ್ರಾಂ ತೂಕದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಆದರೆ, ಆರೋಪಿ ಸುಳಿವು ಸಿಕ್ಕಿರಲಿಲ್ಲ. ಅ.11ರಂದು ಆರೋಪಿಯನ್ನು ತೆಲಂಗಾಣದ ಹೈದ್ರಾಬಾದ್‌ನ ಚೈತನ್ಯಪುರಿ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಂಧಿಸಿರುವ ಮಾಹಿತಿ ಸಿಕ್ಕಿತ್ತು. ಬಳಿಕ ಬಾಡಿ ವಾರೆಂಟ್‌ ಪಡೆದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರ ಕಳವು ಬಗ್ಗೆ ತಪ್ಪೊಪ್ಪಿ ಕೊಂಡಿದ್ದಾನೆ. ಬಳಿಕ ಆರೋಪಿ ಬೆಂಗಳೂರು ರಾಜ್ಯದ ವಿವಿಧೆಡೆ ಜ್ಯುವೆಲ್ಲರಿ ಶಾಪ್‌ಗಳಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಸ್ನೇಹಿತನ ಮನೆಯಲ್ಲೂ ಚಿನ್ನಾಭರಣ ಇಟ್ಟಿದ್ದ
ಸರಗಳ್ಳತನ ಮಾಡಿದ್ದ ಚಿನ್ನಾಭರಣವನ್ನು ಹೊಸೂರು ರಸ್ತೆಯ ಗಾರ್ವೆಭಾವಿ ಪಾಳ್ಯದಲ್ಲಿ ನೆಲೆಸಿದ್ದ ಸ್ನೇಹಿತನ ಮನೆಯಲ್ಲಿ, ಸ್ನೇಹಿತನಿಗೆ ತಿಳಿಯದಂತೆ ಅಡಗಿಸಿಟ್ಟಿದ್ದ. ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ತೆರಳಿ 80 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಯಿತು. ಪೊಲೀಸರ ಕಂಡ ಆತನ ಸ್ನೇಹಿತ ವಿಚಾರ ತಿಳಿದುಕೊಂಡು ಅಚ್ಚರಿಗೊಳಗಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.

2018ರಲ್ಲಿ ಕಾಲಿಗೆ ಗುಂಡೇಟು
ಆರೋಪಿ ವಿಶ್ವನಾಥ್‌ ವಿರುದ್ಧ ರಾಜ್ಯ ಹಾಗೂ ಹೊರರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2018ರಲ್ಲಿ ಜ್ಞಾನಭಾರತಿ ಪೊಲೀಸರು ಈತನ ಕಾಲಿಗೆ ಗುಂಡು ಹೊಡೆದಿದ್ದರು. ನಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಶೋಕಿಗಾಗಿ ಆಸ್ತಿಪಾಸ್ತಿಕಳಕೊಂಡು  ಬೀದಿಗೆ ಬಿದ್ದ ಕೋಟ್ಯಧಿಪತಿ!
ಒಂದು ಕಾಲದಲ್ಲಿ ಕೋಳಿವಾಡದಲ್ಲಿ 70 ಲಾರಿಗಳ ಮಾಲಿಕನಾಗಿದ್ದ ವಿಶ್ವನಾಥ್‌, ಗಣಿಗಾರಿಕೆ ವ್ಯವಹಾರವನ್ನು ಮಾಡುತ್ತಿದ್ದ. ಆದರೆ, ಶೋಕಿ ಜೀವನ ಹಾಗೂ ಹೆಣ್ಣಿನ ವ್ಯಾಮೋಹಕ್ಕೆ ಬಲಿಯಾಗಿ ಕೋಟ್ಯಂತರ ರೂ. ಆಸ್ತಿ-ಪಾಸ್ತಿ ಯನ್ನು ಕಳೆದುಕೊಂಡಿದ್ದಾನೆ. ಬಳಿಕ ಕುಟುಂಬದಿಂದ ದೂರವಾಗಿ, ಜೀವನ ನಿರ್ವಹಣೆ ಹಾಗೂ ತನ್ನ ಶೋಕಿ ಜೀವನಕ್ಕಾಗಿ ಸರ ಕಳವು ಮಾಡುವುದನ್ನೇ ವೃತ್ತಿಯನ್ನಾಗಿಸಿ ಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ರಾಷ್ಟ್ರಮಟ್ಟದ ಬೈಕ್‌ ರೈಡರ್‌!
ಬಂಧಿತ ಆರೋಪಿ ವಿಶ್ವನಾಥ್‌ ಅವರ ವಿಚಾರಣೆಯಲ್ಲಿ ಮತ್ತೂಂದು ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಬಂಧಿತ ವಿಶ್ವನಾಥ್‌ ಕೋಟ್ಯಧಿಪತಿ ಮಾತ್ರವಲ್ಲ. ರಾಷ್ಟ್ರೀಯ ಮಟ್ಟದ ಬೈಕ್‌ ರೈಡರ್‌ ಕೂಡ ಆಗಿದ್ದ. ರಾಷ್ಟ್ರಿಯ ಮಟ್ಟದ ಹತ್ತಾರು ಬೈಕ್‌ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾನೆ ಎಂಬುದು ಗೊತ್ತಾಗಿದೆ. ಹೀಗಾಗಿ ಸರ ಕಳವು ಮಾಡುವ
ಮೊದಲು ಪ್ರವೇಶ ಮತ್ತು ನಿರ್ಗಮನ ರಸ್ತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತಿದ್ದ. ಪ್ರಮುಖವಾಗಿ ಸಂಚಾರ ದಟ್ಟಣೆ ಬಗ್ಗೆ ಎಚ್ಚವಹಿಸುತ್ತಿದ್ದ. ಬಳಿಕ ಸರ ಕಳವು ಮಾಡಿ, ಕ್ಷಣಾರ್ಧದಲ್ಲೇ ಬೈಕ್‌ ಅತಿ ವೇಗವಾಗಿ ಚಾಲನೆ ಮಾಡಿಕೊಂಡು ನಗರದಿಂದ ಹೊರ ಹೋಗುತ್ತಿದ್ದ. ಈತನ ಬೈಕ್‌ ಚಾಲನೆ ವೇಗಕ್ಕೆ ಯಾರು ಹಿಂಬಾಲಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸರು ಅವರು ಮಾಹಿತಿ ನೀಡಿದರು.

ಮಾಡಿದ ಪಾಪ ತಟ್ಟದಂತೆ ದೇವರಿಗೆ ತಪ್ಪು ಕಾಣಿಕೆ!
ಲಾರಿ ವ್ಯವಹಾರದಲ್ಲಿ ನಷ್ಟ ಹೊಂದಿದ ಬಳಿಕ ಆರೋಪಿ ಸರಗಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾನೆ. ಬಳಿಕ ಬೇರೆಯವರ ಹೆಸರಿನಲ್ಲಿ ಆನ್‌ಲೈನ್‌ ಮೂಲಕ ಸೆಕೆಂಡ್‌ ಹ್ಯಾಂಡ್‌ ಬೈಕ್‌ಗಳನ್ನು ಖರೀದಿಸುತ್ತಿದ್ದ. ನಂತರ ಮನೆಯ ಗೇಟ್‌ ಮುಂಭಾಗ, ವಾಯುವಿಹಾರ ಮತ್ತು ಒಂಟಿಯಾಗಿ ನಡೆದು ಹೋಗುವ ಮಹಿಳೆಯರ ಬಳಿ ಮನೆ ವಿಳಾಸ ಹಾಗೂ ಇತರೆ ನೆಪವೊಡ್ಡಿ ಮಾತನಾಡಿಸಿ, ಕ್ಷಣಾರ್ಧದಲ್ಲೇ ಸರ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ. ಕದ್ದ ಚಿನ್ನಾಭರಣಗಳನ್ನು ಜ್ಯುವೆಲ್ಲರಿ ಶಾಪ್‌ಗ್ಳಲ್ಲಿ ಪರಿಚಿತರ ಮೂಲಕ ಮಾರಾಟ ಮಾಡಿ, ಬಂದ ಹಣದಲ್ಲಿ ಗೋವಾ ಕ್ಯಾಸಿನೋ ಜೂಜಾಟ, ಹೆಣ್ಣಿನ ಶೋಕಿಗಾಗಿ ವ್ಯಯಿಸುತ್ತಿದ್ದ. ಹೀಗಾಗಿ ಸರಗಳವು ಮಾಡಿದ ಪಾಪ ಅಂಟಬಾರದೆಂದು, ದೇವಸ್ಥಾನಗಳ ಹುಂಡಿಗೆ ತಪ್ಪು ಕಾಣಿಕೆ ಹಾಕುತ್ತಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.