![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Nov 6, 2024, 11:33 PM IST
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಸಾಧ್ಯವಿಲ್ಲ. ಸಿಎಂ ತಾನು ಸಾಚ ಎಂದು ತೋರಿಸಿಕೊಳ್ಳುವ ಪ್ರಯತ್ನ ಅಷ್ಟೇ. ಅವರಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ, ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.
ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.
ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ. ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ಇಬ್ಬರೂ ರಾಜೀನಾಮೆ ಕೊಡಬೇಕು. ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ. ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.
ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೆ, ವಕ್ಫ್ ಮಂಡಳಿ ನೀಡುತ್ತಿರುವ ನೋಟಿಸ್ ಬಗ್ಗೆಯೂ ಸಮಗ್ರ ತನಿಖೆ ಆಗಬೇಕು. ಅಲ್ಲಿಯವರೆಗೆ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.