Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

ಕೆನಡಾದ ಭದ್ರತಾ ವೈಫ‌ಲ್ಯ ಜಗತ್ತಿನ ಮುಂದೆ ಬಯಲು

Team Udayavani, Nov 8, 2024, 7:45 AM IST

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

ಟೊರೊಂಟೊ: ಬ್ರಾಂಪ್ಟನ್‌ ಮತ್ತು ಸರ್ರೆನಲ್ಲಿ ನಡೆಯುತ್ತಿದ್ದ ಭಾರತದ ಕಾನ್ಸುಲರ್‌ ಕ್ಯಾಂಪ್‌ಗ್ಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದರೂ ಕೈಕಟ್ಟಿ ಕುಳಿತಿದ್ದ ಕೆನಡಾ ಸರ್ಕಾರಕ್ಕೆ ಭಾರತ ಈಗ ರಾಜತಾಂತ್ರಿಕವಾಗಿ ತಿರುಗೇಟು ನೀಡಿದೆ.

ಕೆನಡಾದಲ್ಲಿ ನಡೆಯಬೇಕಿದ್ದ ಎಲ್ಲಾ ಕಾನ್ಸುಲರ್‌ ಕ್ಯಾಂಪ್‌ ಗಳನ್ನೂ ರದ್ದು ಮಾಡಿ, ಸಾಮಾನ್ಯ ಭದ್ರತೆಯನ್ನೂ ಒದಗಿಸದ ಕೆನಡಾದ ಪೊಲೀಸ್‌ ವ್ಯವಸ್ಥೆಯೇ ಇದಕ್ಕೆ ಕಾರಣ ಎಂದು ಬೊಟ್ಟು ಮಾಡಿದೆ. ಈ ಮೂಲಕ ಕೆನಡಾವು ವಿದೇಶಗಳ ರಾಯಭಾರಿಗಳಿಗೆ, ವಿದೇಶಿ ಸಮುದಾಯಗಳಿಗೆ ಭದ್ರತೆ ಒದಗಿಸುವಲ್ಲಿ ವಿಫ‌ಲವಾಗಿದೆ ಎಂಬುದನ್ನು ಜಗತ್ತಿನ ಮುಂದೆ ತೆರೆದಿಟ್ಟಂತಾಗಿದೆ.

ಕೆನಡಾದಲ್ಲಿರುವ ಭಾರತೀಯ ಪ್ರಜೆಗಳಿಗೆ ಭಾರತದಲ್ಲಿನ ಪಿಂಚಣಿ, ಜೀವ ವಿಮೆ ಸೇರಿದಂತೆ ಕೆಲ ಸೇವಾ ಸೌಲಭ್ಯಗಳಿಗೆ ಪೂರಕವಾದ ದಾಖಲೆಗಳನ್ನು ಒದಗಿಸುವ, ಅದರ ಬಗ್ಗೆ ಮಾಹಿತಿ ನೀಡುವ ಕೆಲಸಗಳನ್ನು ರಾಯಭಾರ ಕಚೇರಿಗಳು ಕಾನ್ಸುಲರ್‌ ಕ್ಯಾಂಪ್‌ಗ್ಳ ಮೂಲಕ ನಡೆಸುತ್ತಿದ್ದವು. ನ.2 ಮತ್ತು 3ರಂದು ಈ ಕ್ಯಾಂಪ್‌ಗ್ಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರು. ಈ ಬಗ್ಗೆ ಭಾರತ ಆಕ್ಷೇಪ ವ್ಯಕ್ತ ಪಡಿಸಿದಾಗಲೂ ಕೆನಡಾ ಸರ್ಕಾರ ಕೈ ಕಟ್ಟಿ ಕುಳಿತಿತ್ತು. ಈ ಹಿನ್ನೆಲೆಯಲ್ಲಿ ಭಾರತ ಕ್ಯಾಂಪ್‌ಗ್ಳ ನ್ನೇ ರದ್ದುಗೊಳಿಸಿ, ರಾಜತಾಂತ್ರಿಕ ತಿರುಗೇಟು ನೀಡಿದೆ. ವಿದೇಶಾಂಗ ಕಾರ್ಯದರ್ಶಿ ರಣದೀರ್‌ ಜೈಸ್ವಾಲ್‌ ಅವರು ಕ್ಯಾಂಪ್‌ ರದ್ದತಿಯನ್ನು ದೃಢಪಡಿಸಿದ್ದಾರೆ.

ಬ್ರಾಂಪ್ಟನ್‌ ದೇಗುಲದ ಅರ್ಚಕ ವಜಾ
ಖಲಿಸ್ತಾನಿಗಳು ದಾಳಿ ನಡೆಸಿದ ಬ್ರಾಂಪ್ಟನ್‌ನ ಹಿಂದೂ ಸಭಾ ದೇವಾಲಯದ ಅರ್ಚಕನನ್ನೇ ದೇಗುಲ ಆಡಳಿತ ವಜಾಗೊಳಿಸಿದೆ. ದಾಳಿ ಸಂದರ್ಭದಲ್ಲಿ ಹಿಂದೂಗಳನ್ನು ಉದ್ರೇಕಿಸುವಂಥ ದ್ವೇಷ ಭಾಷಣವನ್ನು ಅರ್ಚಕ ಮಾಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದೇವೆ ಎಂದಿದೆ.

ಜೈಶಂಕರ್‌ ಭಾಷಣ ಪ್ರಸಾರ
ಮಾಡಿದ ಮಾಧ್ಯಮಕ್ಕೆ ನಿಷೇಧ
ಭಾರತದ ಮೇಲೆ ನಿರಾಧಾರ ಆರೋಪ ಎಸಗಿ ನುಣುಚಿಕೊಳ್ಳಲು ಯತ್ನಿಸುತ್ತಿರುವ ಕೆನಡಾ ಈಗ ಜಾಗತಿಕ ಮಟ್ಟದಲ್ಲಿ ತನ್ನ ಗುಟ್ಟು ಬಯಲಾಗಿದ್ದಕ್ಕೆ ಸಿಟ್ಟಾಗಿದೆ. ವಿದೇಶಾಂಗ ಸಚಿವ ಜೈಶಂಕರ್‌ ಮಾಡಿದ ಭಾಷಣ ಪ್ರಸಾರ ಮಾಡಿದ “ಆಸ್ಟ್ರೇಲಿಯಾ ಟುಡೇ’ ಮಾಧ್ಯಮವನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ. ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವೋಂಗ್‌ ಮತ್ತು ಜೈಶಂಕರ್‌ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೈ ಶಂಕರ್‌, ಭಾರತದ ವಿರುದ್ಧ ಕೆನಡಾದ ಆಧಾರರಹಿತ ಆರೋಪ, ಭಾರತೀಯ ರಾಯಭಾರಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಹಾಗೂ ಭಾರತ ವಿರೋಧಿ ಕೃತ್ಯಗಳಿಗೆ ಅಲ್ಲಿನ ರಾಜಕೀಯ ಬೆಂಬಲವನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಕೆನಡಾ ನಿರ್ಬಂಧ ವಿಧಿಸಿದೆ. ಇದು ವಾಕ್‌ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ಎಂದು ಭಾರತ ಕಿಡಿಕಾರಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.