Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

ಕೈಗಾರಿಕಾ ನಿವೇಶನಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 2 ಸೈಟ್‌, ಶೆಡ್‌ಗಳ ತೆರವು

Team Udayavani, Nov 8, 2024, 2:35 PM IST

19-bng

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ರಾಜಾಜಿನಗರ, ಪೀಣ್ಯ ಇಂಡಸ್ಟ್ರಿಯಲ್‌ 2ನೇ ಹಂತ ಬಡಾವಣೆಯಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಉತ್ತರ ತಾಲೂಕು, ಯಶವಂತಪುರ ಹೋಬಳಿ, ಪೀಣ್ಯ ಗ್ರಾಮದ ಸರ್ವೆ ನಂ.79ರ ಕೈಗಾರಿಕಾ ನಿವೇಶನ ಸಂಖ್ಯೆ 14 ಮತ್ತು 15ರ 12 ಸಾವಿರ ಚದರ ಅಡಿಯ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಶೆಡ್‌ಅನ್ನು ತೆರವುಗೊಳಿಸಿ, 12 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ ಎಂದು ಬಿಡಿಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರದೇಶಗಳಲ್ಲಿ ಕೈಗಾರಿಕಾ ನಿವೇಶನಗಳನ್ನು ಒತ್ತುವರಿ ಮಾಡಿಕೊಂಡು 2 ಸೈಟ್‌ ನಿರ್ಮಾಣ ಮಾಡಲಾಗಿತ್ತು. ಬಿಡಿಎ ಅಧಿಕಾರಿಗಳು ಈ ಪ್ರದೇಶದಲ್ಲಿ ಒತ್ತುವರಿ ತೆರವು ಮಾಡಲು ಸೂಚನೆ ನೀಡಿದ ಮೇರೆಗೆ ಬಿಡಿಎ ಆಯುಕ್ತರಿಂದ ಅನುಮತಿ ಪಡೆದು ಗುರುವಾರ ಜೆಸಿಬಿ ಯಂತ್ರದ ಮೂಲಕ ಒತ್ತುವರಿ ತೆರವು ಕಾರ್ಯ ಮಾಡಲಾಗಿದೆ.

ಈ ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ಬಿಡಿಎ ಜಾಗದಲ್ಲಿದ್ದ ಹಲವು ಮನೆ ನೆಲಸಮ ಇನ್ನು ಮತ್ತೂಂದು ಪ್ರಕರಣದಲ್ಲಿ ಗೊರಗುಂಟೆಪಾಳ್ಯ ಬಳಿಯ ಆಶ್ರಯ ನಗರ ಬಡಾವಣೆಯಲ್ಲಿ ಬಿಡಿಎ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಹಲವಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಜಾಗ ಖಾಲಿ ಮಾಡಿ ಎಂದು ಬಿಡಿಎ ಸೂಚನೆ ನೀಡಿತ್ತು. ಆದರೆ, ಜಾಗ ಖಾಲಿ ಮಾಡದ ಹಿನ್ನೆಲೆ ಇಲ್ಲಿದ್ದ ಮನೆಗಳನ್ನು ತೆರವು ಮಾಡಲಾಗಿದೆ. ಮನೆಗಳನ್ನು ಬಿಡಿಎ ನೆಲಸಮ ಮಾಡಿದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.