![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Nov 8, 2024, 11:38 PM IST
ಸುಳ್ಯ: ಕೆಎಸ್ಆರ್ಟಿಸಿ ಬಸ್ ಹಾಗೂ ಸ್ಕೂಟಿ ನಡುವಿನ ಅಪಘಾತದಲ್ಲಿ ಸ್ಕೂಟಿ ಸವಾರೆ, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಅವರ ಸಹೋದರಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎನ್ನುವಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಮೃತರು. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯಾ (16) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ರಚನಾ ಅವರು ತಮ್ಮ ಸ್ಕೂಟಿಯಲ್ಲಿ ಸಹೋದರಿ ಅನನ್ಯಾ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಸೂಂತೋಡು ಎನ್ನುವಲ್ಲಿ ಮುಖಾಮುಖೀ ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಚನಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನನ್ಯಾ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.