![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 11, 2024, 9:41 PM IST
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಭಾಷಣದ ಮಧ್ಯೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಹಲವೆಡೆಯಿಂದ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಸಮರ್ಥನೆ ನೀಡಿದ್ದಾರೆ.
ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ “ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯ ಸಮರ್ಥಿಸಿಕೊಂಡಿದ್ದಾರೆ.
“ಕುಮಾರಸ್ವಾಮಿಯವರು ನನ್ನನ್ನು ಕುಳ್ಳ ಅಂತಾರೆ, ನಾನು ಪ್ರೀತಿಯಿಂದ ಅವರನ್ನು ಕರಿಯಣ್ಣ ಅಂತಾನೇ ಕರೆಯುತ್ತಿದ್ದೆ”. ಕುಳ್ಳಗಿರುವ ನನ್ನನ್ನು ಅವರು ಯಾವಾಗಲೂ ಕುಳ್ಳ ಅಂತ ಕರೆಯುತ್ತಾರೆ. ಭಾಷಣ ಮಾಡುವಾಗ ಅವರನ್ನು ಕರಿಯಣ್ಣ ಎಂದಿದ್ದೇನೆಯೇ ಹೊರತು ಬಣ್ಣದ ಆಧಾರದ ಮೇಲೆ ಜನಾಂಗೀಯ ನಿಂದನೆ ಮಾಡಿಲ್ಲ ಎಂದು ಜಮೀರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯ ಗುರು ಅಂದ್ರೆ ದೇವೇಗೌಡರು. ಆದರೆ 93ನೇ ವಯಸ್ಸಿನಲ್ಲೂ ಕುಮಾರಸ್ವಾಮಿಯವರು, ದೇವೇಗೌಡರರಿಂದ ಪ್ರಚಾರ ಮಾಡಿಸುತ್ತಿದ್ದಾರೆ. ಇದು ನನಗೆ ನೋವು ತಂದಿದೆ ಅಂತ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಇದನ್ನೂ ಓದಿ: By Election: ಎಚ್ಡಿಕೆ ವಿರುದ್ಧ ಸಚಿವ ಜಮೀರ್ ಅವಹೇಳನಕಾರಿ ಹೇಳಿಕೆ; ಜೆಡಿಎಸ್ ಆಕ್ರೋಶ
ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ವೇಳೆ ಜಮೀರ್ ಅಹ್ಮದ್ ಖಾನ್ ನೀಡಿರುವ ಈ ವಿವಾದಾತ್ಮಕ ಹೇಳಿಕೆ ಇದೀಗ ಚುನಾವಣಾ ಅಸ್ತ್ರವಾಗಿದೆ. ಚನ್ನಪಟ್ಟಣದಲ್ಲಿ ಜಮೀರ್ ಹೇಳಿಕೆಯ ಮುಂದಿಟ್ಟು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದರು. ಇತ್ತ ಕಡೆ ಸಚಿವ ಜಮೀರ್ ಹೇಳಿಕೆ ಕಾಂಗ್ರೆಸ್ ನಾಯಕರಿಗೂ ಮುಜುಗರ ಉಂಟು ಮಾಡಿರುವುದರಿಂದ ಸಮರ್ಥನೆ ನೀಡಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.