![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Nov 12, 2024, 10:12 AM IST
ಬೆಂಗಳೂರು: ನಗರದ ಪಂಚ ತಾರಾ ಹೋಟೆಲ್ಗಳಿಗೆ ಬೆದರಿಕೆ ಸಂದೇಶಗಳು ಹೆಚ್ಚಾಗುತ್ತಿದ್ದು, ಸೋಮವಾರ ಸಂಪಂಗಿ ರಾಮನಗರದ ಐಬಿಸ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಕೆಲ ಕಾಲ ಹೋಟೆಲ್ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಹೋಟೆಲ್ನ ಇ-ಮೇಲ್ ವಿಳಾಸಕ್ಕೆ ಅಪರಿಚಿತ ವಿಳಾಸದಿಂದ ಬೆದರಿಕೆ ಸಂದೇಶ ಬಂದಿದ್ದು, ಹೋಟೆಲ್ ಆವರಣದಲ್ಲಿ ಬಾಂಬ್ ಇಟ್ಟಿದ್ದೇವೆ. ಕೆಲ ಗಂಟೆಗಳಲ್ಲೇ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ಅದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಹೋಟೆಲ್ನಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂದಿಯನ್ನು ಹೊರಗಡೆ ಕಳುಹಿಸಿ ತಪಾಸಣೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳಾಗಲಿ, ಅನುಮಾನಾಸ್ಪದ ವಸ್ತುಗಳಾಗಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ತಿಳಿದು ಬಂದಿದೆ. ಇ-ಮೇಲ್ ಕಳುಹಿಸಿರುವ ವಿಳಾಸವೂ ಅಸ್ಪಷ್ಟವಾಗಿದೆ.
ಸೈಬರ್ ಪೊಲೀಸರ ನೆರವು ಪಡೆದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು. ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.