Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ


Team Udayavani, Nov 22, 2024, 12:08 PM IST

9-someshwara

ಉಳ್ಳಾಲ: ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಸಾರ್ವಜನಿಕ ಕೋಟಿ ಶಿವ ಪಂಚಾಕ್ಷರಿ ನಾಮಜಪ ಯಜ್ಞ ಸಮಿತಿ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆದ ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಗುರುವಾರ ಸಂಪನ್ನಗೊಂಡಿತು.

5 ದಿನಗಳಲ್ಲಿ ಸುಮಾರು 12 ಸಾವಿರ ಭಕ್ತರು ಯಜ್ಞದಲ್ಲಿ ಪಾಲ್ಗೊಂಡು ಸುಮಾರು 1.40 ಕೋಟಿ ಮಂತ್ರ ಜಪಿಸಿದ್ದು, ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರ್ಯರು ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞದ ಕುರಿತು ಮಾತನಾಡಿ, ಐದು ದಿನಗಳ ಈ ಕಾರ್ಯಕ್ರಮದಲ್ಲಿ ಮೊದಲ ನಾಲ್ಕು ದಿನಗಳಲ್ಲಿ ದಿನವೊಂದಕ್ಕೆ 25 ಲಕ್ಷ ನಾಮ ಜಪ ಮಾಡುವ ಉದ್ದೇಶ ಇಟ್ಟುಕೊಂಡು ಎರಡು ಅವಧಿಯಲ್ಲಿ ಭಕ್ತರಿಗೆ ಅವಕಾಶ ಮಾಡಲಾಗಿತ್ತು. ಆದರೆ ದೇವರು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕರೆಸಿಕೊಳ್ಳುತ್ತಾನೆ ಎನ್ನುವುದು ಸೋಮೇಶ್ವರದಲ್ಲಿ ನಡೆದ ನಾಮಜಪದಲ್ಲಿ ಸಾಬೀತಾಗಿದೆ. ಭಕ್ತರು ತಂಡೋಪತಂಡವಾಗಿ ಭಾಗವಹಿಸಿ ನಾಲ್ಕು ದಿನದ ಕೋಟಿ ನಾಮಜಪವನ್ನು ಮೂರೇ ದಿನಗಳಲ್ಲಿ ಪೂರೈಸಿರುವುದು ವಿಶೇಷವಾಗಿದೆ ಎಂದರು.

ಯಾಗದಲ್ಲಿ ಸಂಸದ ಬ್ರಿಜೇಶ್‌ ಚೌಟ, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಸ್ಪೀಕರ್‌ ಯು.ಟಿ.ಖಾದರ್‌, ಶಾಸಕ ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌, ಹರೀಶ್‌ ಕುಮಾರ್‌, ಆರೆಸ್ಸೆಸ್‌ ಮುಖಂಡರಾದ ಡಾ| ಪ್ರಭಾಕರ ಭಟ್‌ ಕಲ್ಲಡ್ಕ, ಪಿ.ಎಸ್‌. ಪ್ರಕಾಶ್‌ ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

ಶ್ರೀ ಕ್ಷೇತ್ರ ಸೋಮೇಶ್ವರದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ್‌ ರೈ, ಲಕ್ಷ ಬಿಲ್ವಾರ್ಚನೆ ಸಮಿತಿ ಅಧ್ಯಕ್ಷ ದೀಪಕ್‌ ಪಿಲಾರ್‌, ವ್ಯವಸ್ಥಾಪನ ಸಮಿತಿ ಸದಸ್ಯರು, ಕೋಟಿ ಶಿವ ಪಂಚಾಕ್ಷರಿ ನಾಮಜಪ ಯಜ್ಞ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಐದು ದಿನಗಳ ಕಾಲ ನಡೆದ ಸಾರ್ವಜನಿಕ ಕೋಟಿ ಶಿವ ಪಂಚಾಕ್ಷರಿ ನಾಮಜಪ ಯಜ್ಞದಲ್ಲಿ ನಿರೀಕ್ಷೆಗೂ ಮೀರಿ ಭಕ್ತರು ಭಾಗವಹಿಸಿದ್ದು, ಒಂದೂವರೆ ಕೋಟಿವರೆಗೆ ಶಿವ ಪಂಚಾಕ್ಷರಿ ನಾಮಜಪ ಪಠಣೆ ಮೂಲಕ ಸಾರ್ವತ್ರಿಕ ದಾಖಲೆ ಬರೆದಿದೆ. ಯಾಗದ ಯಶಸ್ಸಿಗೆ ಕಾರಣರಾದ ಭಕ್ತರು, ಸ್ವಯಂಸೇವಕರ ಕಾರ್ಯ ಶ್ಲಾಘನೀಯ. ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌ ಅಧ್ಯಕ್ಷರು, ಕೋಟಿ ಶಿವ ಪಂಚಾಕ್ಷರಿ, ನಾಮಜಪ ಯಜ್ಞ ಸಮಿತಿ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.