
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
Team Udayavani, Dec 19, 2024, 12:57 AM IST

ಬೆಂಗಳೂರು: ಡಿ.14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 38,80,881 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ತಿಳಿಸಿದ್ದಾರೆ.
ಹೈಕೋರ್ಟ್ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ. 14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 38,80,881 ಪ್ರಕರಣ ಇತ್ಯರ್ಥಪಡಿಸಲಾಗಿದ್ದು, ಒಟ್ಟು ಪರಿಹಾರ ಮೊತ್ತ 2,248 ಕೋಟಿ ರೂ. ಆಗಿದೆ. ಎಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವೈವಾಹಿಕ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಪಡಿಸುವಂತೆ ಉತ್ತೇಜಿಸಲಾಗಿತ್ತು. ಹೀಗಾಗಿ ಒಟ್ಟು 1,581 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿ, 307 ದಂಪತಿ ರಾಜಿ ಸಂಧಾನದಿಂದ ಪುನಃ ಒಂದಾಗಿ ಜೀವನ ನಡೆಸಲು ತೀರ್ಮಾನಿಸಿ ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದರು.
ಎಸಿಎಂಎಂ-29 ಕೋರ್ಟ್ನಲ್ಲಿ ಐ.ಪಿ.ಸಿ. ಕಲಂ. 379 ರಡಿಯಲ್ಲಿ ಶಿûಾರ್ಹ ಅಪರಾಧಕ್ಕಾಗಿ ದಾಖಲಾಗಿದ್ದ 26 ವರ್ಷಗಳ ಹಳೆಯ ಪ್ರಕರಣ ಅಶೋಕನಗರ ಪೊಲೀಸ್ ವಿರುದ್ಧ, ಖಾಜಾ ಮತ್ತು ಇತರರು ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ.
ವಿಭಾಗ ದಾವೆಯಲ್ಲಿ 3,311 ಪ್ರಕರಣ, ಮೋಟಾರು ವಾಹನ ಅಪರಾಧ ಪರಿಹಾರ ಸಂಬಂಧ 5,168 ಪ್ರಕರಣ ಹಾಗೂ 260 ಕೋಟಿಗಳಷ್ಟು ಪರಿಹಾರ ಮೊತಕ್ಕೆ ಇತ್ಯರ್ಥಪಡಿಸಲಾಗಿದೆ. 11,262 ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥವಾಗಿದೆ. ಎಲ್ಎಸಿ ಎಕ್ಸಿಕ್ಯೂಷನ್ಗೆ ಸಂಬಂಧ 597 ಪ್ರಕರಣ, 73 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥವಾಗಿದೆ. ಎಂವಿಸಿ ಎಕ್ಸಿಕ್ಯೂಷನ್ಗೆ ಸಂಬಂಧ 1,004 ಪ್ರಕರಣಗಳನ್ನು 82 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥವಾಗಿದೆ . 3,432 ಇತರೆ ಅಮಲ್ಜಾರಿ ಪ್ರಕರಣ ಇತ್ಯರ್ಥವಾಗಿದೆ. 132 ಕೋಟಿ ರೂ. ಇತ್ಯರ್ಥದ ಮೊತ್ತವಾಗ್ತಿದೆ. ಒಟ್ಟು 82 ರೇರಾ ಕೇಸುಗಳು ಇತ್ಯರ್ಥಪಡಿಸಲಾಗಿದೆ. 5.28 ಕೋಟಿ ರೂ. ಇತ್ಯರ್ಥವಾಗಿದೆ. 611 ಗ್ರಾಹಕರ ವ್ಯಾಜ್ಯಗಳು ಬಗೆಹರಿದು 3.53 ಕೋಟಿ ರೂ. ಮೊತ್ತಕ್ಕೆ ಇತ್ಯರ್ಥವಾಗಿದೆ ಎಂದರು.
ಈ ಬಾರಿಯ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ 5 ವರ್ಷ ಮತ್ತು ಅದಕ್ಕೂ ಹಳೆಯ ವರ್ಷಗಳ 2,259 ಪ್ರಕರಣಗಳು, 10 ವರ್ಷ ಮತು ¤ ಅದಕ್ಕೂ ಹಳೆಯ ವರ್ಷಗಳ 261 ಪ್ರಕರಣಗಳು ಹಾಗೂ 15 ವರ್ಷ ಮತ್ತು ಅದಕ್ಕೂ ಹಳೆಯ ವರ್ಷಗಳ 68 ಪ್ರಕರಣಗಳು ಸೇರಿ ಒಟ್ಟು 2,588 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 1,921 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ.
2025 ಮಾ.8ಕ್ಕೆ ಮುಂದಿನ ಲೋಕ್ ಅದಾಲತ್:
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 2025ನೇ ಸಾಲಿನ ಮೊದಲನೇ ರಾಷ್ಟ್ರೀಯ ಲೋಕ್ ಅದಾಲತನ್ನು 2025 ಮಾ. 8ರಂದು ನಿಗದಿಪಡಿಸಲಾಗಿದೆ. ಕಕ್ಷಿದಾರರು ವ್ಯಾಜ್ಯ ಪೂರ್ವ ಪ್ರಕರಣಗಳ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.