
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Team Udayavani, Jan 5, 2025, 7:45 PM IST

ಹೈದರಾಬಾದ್: ಇತ್ತೀಚಿನ ಚಿತ್ರ ”ಪುಷ್ಪ 2 ” ಪ್ರಥಮ ಪ್ರದರ್ಶನದಲ್ಲಿ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆಯೊಬ್ಬರು ದುರಂತ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿರುವ ನಟ ಅಲ್ಲು ಅರ್ಜುನ್ ಅವರು ಜಾಮೀನು ಷರತ್ತುಗಳ ಭಾಗವಾಗಿ ರವಿವಾರ(ಜ5) ಪೊಲೀಸರ ಮುಂದೆ ಹಾಜರಾದರು.
ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಮುಂದೆ ಹಾಜರಾಗಿ, ನ್ಯಾಯಾಲಯದ ವಿಧಿವಿಧಾನಗಳನ್ನು ಪೂರ್ಣಗೊಳಿಸಿ ಮರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಸಂಖ್ಯೆ 11 ಅಲ್ಲು ಅರ್ಜುನ್ ಅವರಿಗೆ ನಗರ ನ್ಯಾಯಾಲಯವು ಜನವರಿ 3 ರಂದು ಸಾಮಾನ್ಯ ಜಾಮೀನು ನೀಡಿತ್ತು. ನ್ಯಾಯಾಲಯದ ನಿರ್ದೇಶನದಂತೆ, ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ನಡುವೆ ಎಸ್ಎಚ್ಒ, ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಮುಂದೆ ಹಾಜರಾಗಬೇಕಾಗುತ್ತದೆ. ಎರಡು ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ ಈ ರೀತಿ ಮಾಡಬೇಕಾಗುತ್ತದೆ.
ಪ್ರಾಣ ಕಳೆದುಕೊಂಡ ಮಹಿಳೆಯ ಎಂಟು ವರ್ಷದ ಪುತ್ರ ಗಾಯಗೊಂಡಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಲು ಉದ್ದೇಶಿಸಿದ್ದರು ಆದರೆ, ಆಸ್ಪತ್ರೆಯ ಶಾಂತಿಯುತ ಪರಿಸರಕ್ಕೆ ಭಂಗ ತರುವಂತಹ ಸಾಧ್ಯತೆಗಳಿದ್ದು, ಭೇಟಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವಂತೆ ಪೊಲೀಸರು ಅವರಿಗೆ ಸಲಹೆ ನೀಡಿದ ಕಾರಣ ಭೇಟಿ ರದ್ದು ಪಡಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್ನಲ್ಲಿ ಮಿಂಚಿದ ರಾಕಿಭಾಯ್.!

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್

Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!

ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.