ವಿಜ್ಞಾನಕ್ಕೆ ಆದ್ಯತೆ ಸಿಗಲಿ: ಲಲಿತಾ ನಾಯಕ್‌


Team Udayavani, Jan 2, 2017, 11:31 AM IST

honorable-prashadsti.jpg

ಬೆಂಗಳೂರು: ಮೌಡ್ಯಚಾರಣೆ, ಮೂಢನಂಬಿಕೆ ತೊಲಗಿಸಬೇಕೆಂಬ ಚಿಂತನೆಯ ದಿನಗಳಲ್ಲಿ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕಾದ ಅಗತ್ಯವಿದೆ ಎಂದು ಮಾಜಿ ಸಚಿವೆ ಲಲಿತಾ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿದ್ದ 2015ನೇ ಪ್ರಶಸ್ತಿ ಬಹುಮಾನ ಪ್ರದಾನ ಸಮಾರಂಭದಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ದೇಶದಲ್ಲಿ ಜಗತ್ತಿನಲ್ಲಿ ಮೌಡ್ಯಚಾರಣೆ ವಿಜೃಂಭಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕರು ಅತ್ಯಂತ ಎಚ್ಚರಿಕೆ ಯಿಂದ ತಮ್ಮ ಕಾರ್ಯಚಟುವಟಿಕೆಗಳನ್ನು ನಡೆಸಬೇಕು ಎಂದರು.

ಬರಹಗಾರನಿಗೆ ಚೊಚ್ಚಲ ಪುಸ್ತಕ ಎನ್ನುವುದು ತಾಯಿಗೆ ಮೊದಲ ಹೆರಿಗೆಯಂತೆ. ಅಂತಹ ಸಂತೋಷವನ್ನು ಕನ್ನಡ ಪುಸ್ತಕ ಪ್ರಾಧಿಕಾರವು ಯುವ ಬರಹಗಾರರಿಗೆ ಉಂಟು ಮಾಡಿದ್ದಾರೆ. ಪುಸ್ತಕ ಎನ್ನುವುದು ಜ್ಞಾನ ಕೊಡುವ ತೊಟ್ಟಿಲು ಎಂದು ಭಾವಿಸುವ ಓದುಗ ಉತ್ತಮ ಜ್ಞಾನ ಪಡೆದು, ಮಾನವೀಯತೆ ಹಾಗೂ ಅಭಿವೃದ್ಧಿಯ ಪಥದಲ್ಲಿ ಸಾಗಬಲ್ಲ. ಬರಹಗಾರ ಜನತೆಗೆ ಏನು ಸಂದೇಶ ಕೊಡುತ್ತಿದ್ದೇವೆ. ಏನು ಬರೆದಿ ದ್ದೇವೆ, ನಾವು ಏನನ್ನು ಅಳವಡಿಸಿಕೊಂಡಿದ್ದೇವೆ ಎಂಬುದು ಮುಖ್ಯವಾಗುತ್ತದೆ ಎಂದರು.

ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, ಯುವ ಜನತೆಯನ್ನು ಬರಹಗಾರರನ್ನಾಗಿ ಮಾಡಿ, ಸಾಹಿತ್ಯ ಕ್ಷೇತ್ರಕ್ಕೆ ಮತ್ತಷ್ಟು ಜೀವಂತಿಕೆಯನ್ನು ತರುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಪರಿಷತ್‌ನ ಜೊತೆಗೂಡಿ ರಾಜ್ಯದ 4 ಭಾಗಗಳಲ್ಲಿ ವಿಚಾರ ಸಂಕಿರಣಗಳನ್ನು ಆಯೋಜಿಸಲು ಕಾರ್ಯಯೋಜನೆಗಳನ್ನು ರೂಪಿಸ ಲಾಗುತ್ತಿದೆ ಎಂದು ಅವರು ಹೇಳಿದರು.

ಇಡೀ ದೇಶದಲ್ಲಿ ಮೊದಲ ಬಾರಿಗೆ ದಲಿತ ಮಹಿಳಾ ಸಾಹಿತ್ಯ ಸಮ್ಮೇಳವನ್ನು ಆಯೋಜಿ ಸಿದ್ದ ಕೀರ್ತಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಸಲ್ಲುತ್ತದೆ. ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿಯನ್ನು ಮೂಡಿಸುವ ಸಲುವಾಗಿ “ನನ್ನ ಮೆಚ್ಚಿನ ಪುಸ್ತಕ’ ಹಾಗೂ “ಪುಸ್ತಕ ಪ್ರೀತಿ ವಿದ್ಯಾರ್ಥಿ ಬಳಗ’ವನ್ನು ಎಂಬ ವಿನೂತನವಾದ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಯಾಗಿ ಮುನ್ನಡೆಸಿದ್ದೇವೆ ಎಂದರು.

ಪ್ರಶಸ್ತಿ ಪ್ರದಾನ: ಅನ್ವೇಷಣೆ ಪ್ರಕಾಶನ (ಅತ್ಯುತ್ತಮ ಪ್ರಕಾಶನ ಪ್ರಶಸ್ತಿ), ಡಾ.ಬಿ. ಶೇಷಾದ್ರಿ (ಡಾ.ಎಂ.ಎಂ.ಕಲಬರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ), ಶಶಿಕಲಾ ಬೆಳಗಲಿ (ಡಾ. 
ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ), ಡಾ.ಎಸ್‌.ಪಿ. ಯೋಗಣ್ಣ (ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ), ಎಂ.ಎಂ. ಪಬ್ಲಿಕೇಷನ್‌ (ಕನ್ನಡ ಪುಸ್ತಕ ಸೊಗಸು ಪ್ರಥಮ ಬಹುಮಾನ),

ಪಲ್ಲವ ಪ್ರಕಾಶನ (ದ್ವಿತೀಯ), ಅನಿಕೇತನ (ತೃತೀಯ ಬಹುಮಾನ) ಹಾಗೂ ಅನನ್ಯ ಪ್ರಕಾಶನದ ಮತ್ತೂಂದು ಮಹಾಭಾರತ ಕೃತಿಗೆ (ಮಕ್ಕಳ ಪುಸ್ತಕ) ಬಹುಮಾನ ನೀಡಲಾಯಿತು. ಬಿಡಿಮುತ್ತು ಕೃತಿಯ ಪುಟ ವಿನ್ಯಾಸಕ್ಕೆ ಯು.ಟಿ. ಸುರೇಶ್‌ ಅವರಿಗೆ ಪ್ರಥಮ ಹಾಗೂ “ಪೇಶಂಟ್‌ ಪಾರ್ಕಿಂಗ್‌’ ಕೃತಿಯ ಪುಟ ವಿನ್ಯಾಸಕ್ಕೆ ಸುಧಾಕರ್‌ ದರ್ಬೆ ಅವರಿಗೆ ದ್ವಿತೀಯ ಬಹುಮಾನ ದೊರಕಿದೆ.24 ಮಂದಿ ಯುವ ಬರಹಗಾರರ ಚೊಚ್ಚಲ ಕೃತಿಗಳಿಗೆ 2015ನೇ ಸಾಲಿನ ಪ್ರೋತ್ಸಾಹಧನ ನೀಡಲಾಯಿತು.

ಹಿರಿಯ ಸಂಶೋಧಕ ಡಾ.ಎಂ. ಕಲಬುರ್ಗಿ ಅವರು ಸಂಶೋಧನೆಗಳ ಮೂಲಕ ಸತ್ಯ ಶೋಧನೆಯಲ್ಲಿ ತೊಡಗಿದ್ದ ಮಹಾನ್‌ ಸಂತ. ಸತ್ಯದ ದಾರಿ ತೋರಲೆಂದೇ ತಮ್ಮ ಬದುಕನ್ನು ಮುಡುಪಾಗಿಟ್ಟ ಮಹಾನ್‌ ಸಾಧಕ. ಅವರ ಹೆಸರಿನ ಈ “ಡಾ.ಎಂ.ಎಂ. ಕಲಬುರ್ಗಿ’ ಪ್ರಶಸ್ತಿ ಬಂದಿರುವುದು “ನೊಬೆಲ್‌’ ಪ್ರಶಸ್ತಿ ಬಂದಷ್ಟೇ ಸಂತಸವಾಗಿದೆ.
-ಬಿ.ಶೇಷಾದ್ರಿ, ಅರ್ಥಶಾಸ್ತ್ರಜ್ಞ, ಬಳ್ಳಾರಿ

ಟಾಪ್ ನ್ಯೂಸ್

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

15-bng

Bengaluru: 3 ಅಂತಸ್ತಿನ ಅನಧಿಕೃತ ಮನೆ ಸಂಪೂರ್ಣ ಧ್ವಂಸ

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.