ರಸ್ತೆಗೆ ಕಸ ಸುರಿವವರ ಪತ್ತೆಗೆ ಬರಲಿದೆ ಸಾಫ್ಟ್ವೇರ್‌


Team Udayavani, Jan 4, 2017, 11:41 AM IST

kasa.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದರೂ ಸಾರ್ವಜನಿಕರು ರಸ್ತೆಯಲ್ಲಿ ಕಸ ಸುರಿಯುವುದನ್ನು ಮುಂದುವರಿಸುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಬಿಬಿಎಂಬಿ ಮುಂದಾಗಿದೆ. ಪೌರಕಾರ್ಮಿಕರಿಗೆ ಕಸ ನೀಡದೆ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯುವ ನಿವಾಸಿಗಳ ಪತ್ತೆಗೆ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ರಸ್ತೆಗೆ ಕಸ ಎಸೆಯುವವರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಪೌರಕಾರ್ಮಿಕರು ಪ್ರತಿ ನಿತ್ಯ ಮನೆ- ಮನೆಗೆ ಹೋಗಿ ಕಸ ಸಂಗ್ರಹಣೆ ಮಾಡುತ್ತಾರೆ. ಆದರೆ, ಪೌರಕಾರ್ಮಿಕರು ಬಂದ ವೇಳೆ ಕಸ ನೀಡದೆ ಉದಾಸೀನತೆ ತೋರುವ ಸಾರ್ವಜನಿಕರು ಬಳಿಕ ರಸ್ತೆ ಬದಿ ಕಸ ಸುರಿದು ಬ್ಲಾಕ್‌ ಸ್ಪಾಟ್‌ ಸೃಷ್ಟಿ ಮಾಡುತ್ತಾರೆ. ಇದರಿಂದ ಸುತ್ತಮುತ್ತಲಿನ ಪ್ರದೇಶದ ನೈರ್ಮಲ್ಯì ಹಾಳಾಗುವ ಜತೆಗೆ ಸೊಳ್ಳೆ, ಬೀದಿ ನಾಯಿಗಳ ಕಾಟ ಶುರುವಾಗುತ್ತದೆ. ಇದನ್ನು ತಪ್ಪಿಸಲು ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.

ಹೀಗಾಗಿ ಬ್ಲಾಕ್‌ ಸ್ಪಾಟ್‌ ಸೃಷ್ಟಿಯಾಗುವುದನ್ನು ನಿವಾರಿಸಲು ಪಾಲಿಕೆಯ ವ್ಯಾಪ್ತಿಯನ್ನು 750 ಬ್ಲಾಕ್‌ಗಳಾಗಿ ವಿಭಾಗಿಸಿಕೊಂಡು ನಿತ್ಯ ಪ್ರತಿಯೊಬ್ಬರೂ ಕಸ ನೀಡುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಪ್ರತಿ ಬ್ಲಾಕ್‌ಗೆ ಪ್ರತ್ಯೇಕ ಪೌರಕಾರ್ಮಿಕರು, ಆಟೋ ಟಿಪ್ಪರ್‌ ನಿಗದಿ ಮಾಡಲಾಗಿದೆ.  ಇಷ್ಟೆಲ್ಲಾ ಕ್ರಮ ಕೈಗೊಂಡರೂ ಯಾವ ಮನೆಯವರಾದರೂ ಕಸ ನೀಡುತ್ತಿಲ್ಲ ಎಂದಾದರೆ ಆ ಕುರಿತು ಪೌರಕಾರ್ಮಿಕರು ಮಸ್ಟರಿಂಗ್‌ ಕೇಂದ್ರದ ಬಳಿ ಆಯಾ ಬ್ಲಾಕ್‌ನ ನಿರ್ವಹಣೆ ಜವಬ್ದಾರಿ ಹೊತ್ತಿರುವ ಎಂಜಿನಿಯರ್‌ಗೆ ವರದಿ ನೀಡಬೇಕು. ಮನೆಯಲ್ಲಿಯೇ ಇದ್ದರೂ ನಿಯಮಿತವಾಗಿ (2-3 ದಿನ) ಕಸ ನೀಡದಿದ್ದರೆ ಅಂತಹವರ ಬಗ್ಗೆ ವರದಿ ನೀಡಬೇಕು.

ಭಾರೀ ದಂಡ: ಪೌರ ಕಾರ್ಮಿಕರು ನೀಡುವ ವರದಿ ಆಧರಿಸಿ ಸಂಬಂಧಪಟ್ಟ ಮನೆಯ ಪಿಐಡಿ ಸಂಖ್ಯೆ ಆಧಾರದ ಮೇಲೆ 5 ದಿನದ ಬಳಿಕ ಬಿಬಿಎಂಪಿ ಅಧಿಕಾರಿಗಳು ಗಮನ ಹರಿಸಲಿದ್ದಾರೆ. ಅವರು ಪೌರಕಾರ್ಮಿಕರಿಗೆ ಕಸ ನೀಡದೆ ಬಳಿಕ ಕಸವನ್ನು ರಸ್ತೆಗೆ ಎಸೆಯುತ್ತಿರುವುದನ್ನು ಪ್ರತ್ಯಕ್ಷವಾಗಿ ಪತ್ತೆ ಮಾಡಿ 5 ಸಾವಿರ ರೂ.ವರೆಗೂ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗುತ್ತದೆ. ದಂಡ ಪಾವತಿ ಮಾಡದಿದ್ದರೆ ಪಿಐಡಿ ಸಂಖ್ಯೆಗೆ ಜಮೆ ಮಾಡಿ ಆಸ್ತಿ ತೆರಿಗೆಯಲ್ಲಿ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಜತೆ ಮಾತುಕತೆ: ಇನ್ನು ಹೊಸ ತಂತ್ರಾಂಶ ಅಭಿವೃದ್ಧಿ ಕುರಿತು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಗಳು ಬಿಎಸ್‌ಎನ್‌ಎಲ್‌ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿದ್ದಾರೆ. ಸದ್ಯ ಈ ಕುರಿತು ಪ್ರಾಥಮಿಕ ಮಾತುಕತೆ ನಡೆಸಲಾಗಿದ್ದು, ತಂತ್ರಾಂಶ ರೂಪು ರೇಷಗಳು ಇನ್ನೂ ಅಂತಿಮಗೊಂಡಿಲ್ಲ ಎಂದು ಹೇಳಲಾಗಿದೆ.

ಮನೆ ಬಾಗಿಲಿಗೆ ಬರುವ ಪೌರಕಾರ್ಮಿಕರಿಗೆ ಕಸ ನೀಡದೆ ಎಲ್ಲೆಂದರಲ್ಲಿ ಹರಡುವ ನಾಗರೀಕರ ಪತ್ತೆಗೆ ಹೊಸ ತಂತ್ರಾಂಶ ಅಭಿವೃ ದ್ಧಿಪಡಿಸಲಾಗುವುದು. ಈ ಬಗ್ಗೆ ಈಗಾಗಲೇ ಬಿಎಸ್‌ಎನ್‌ಎಲ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆ ಇನ್ನೂ ಆರಂಭಿಕ ಹಂತದಲ್ಲಿದೆ.
-ಸರ್ಫರಾಜ್‌ಖಾನ್‌, ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.