ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ


Team Udayavani, Jan 4, 2017, 12:03 PM IST

4peop;es-prashastio.jpg

ಬೆಂಗಳೂರು: ರಾಜ್ಯ ಲಲಿತಕಲಾ ಅಕಾಡೆಮಿಯ 2016ನೇ ಸಾಲಿನ ಸುವರ್ಣ ಗೌರವ ಫೆಲೋಶಿಪ್‌ಗೆ ಹಿರಿಯ ಕಲಾವಿದ ಎಸ್‌.ಜಿ.ವಾಸುದೇವ್‌ ಹಾಗೂ ಜೀವಮಾನ ಸಾಧನೆಯ ವಾರ್ಷಿಕ ಗೌರವ ಪ್ರಶಸ್ತಿಗೆ ಮಾರ್ಥ ಝಕಿಮೋವಿಜ್‌ ಸೇರಿದಂತೆ ಮೂವರನ್ನು ಆಯ್ಕೆ ಮಾಡಲಾಗಿದೆ. 

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಕಾಡೆಮಿ ಅಧ್ಯಕ್ಷ ಎಂ.ಎಸ್‌.ಮೂರ್ತಿ, ಜ.23ರಂದು ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಭವನದಲ್ಲಿ ನಡೆಯಲಿರುವ 45ನೇ ವಾರ್ಷಿಕ ಕಲಾ ಪ್ರದರ್ಶನ ಮತ್ತು 2016ನೇ ಸಾಲಿನ “ಗೌರವ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಗೌರವ ಫೆಲೋಶಿಪ್‌ ನೀಡಲಾಗುವುದು ಎಂದು ಹೇಳಿದರು.

ವಾರ್ಷಿಕ ಗೌರವ ಪ್ರಶಸ್ತಿಗೆ ಹಿರಿಯ ಕಲಾವಿದರಾದ ಮಾರ್ಥ ಝಕಿಮೋವಿಜ್‌ (ಬೆಂಗಳೂರು), ಬಾಬುರಾವ್‌ ವಿ.ನಡೋಣಿ (ಬೆಳಗಾವಿ), ಕೆ.ಕೆ.ಮಕಾಳಿ (ಬಳ್ಳಾರಿ) ಅವರನ್ನು ಆಯ್ಕೆ ಮಾಡಲಾಗಿದೆ.  ಈ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ 50 ಸಾವಿರ ನಗದು, ಪ್ರಶಸ್ತಿ ಫ‌ಲಕ ನೀಡಿ ಗೌರವಿಸಲಾಗುವುದು.

ಗೌರವ ಫೆಲೋಶಿಪ್‌ಗೆ ಆಯ್ಕೆಯಾದ ಹಿರಿಯ ಕಲಾವಿದರಿಗೆ 2 ಲಕ್ಷ ನಗದು, ಪ್ರಶಸ್ತಿ ಫ‌ಲಕ ನೀಡಲಾಗುವುದು. ಆ ಕಲಾವಿದರು 2 ಕಲಾಕೃತಿಗಳನ್ನು ಅಕಾಡೆಮಿಗೆ ಕೊಡುವಂತೆ ಮನವಿ ಮಾಡಿದ್ದು, ಆ ಕಲಾಕೃತಿಗಳನ್ನು ಅಕಾಡೆಮಿಯಲ್ಲಿ ಸಂಗ್ರಹಿಸಿಡಲಾಗುವುದು. ಅಂತೆಯೇ ಫೆಲೋಶಿಪ್‌ ಪಡೆದ ವಿದ್ಯಾರ್ಥಿಗಳು ಕೂಡ ತಲಾ ಒಂದೊಂದು ಕಲಾಕೃತಿಗಳನ್ನು ಅಕಾಡೆಮಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು. 

ಕಳೆದ ವರ್ಷ ಕೇವಲ 12 ಕಲಾವಿದರಿಗೆ ಫೆಲೋಶಿಪ್‌ ನೀಡಲಾಗಿತ್ತು. 2016-17ನೇ ಸಾಲಿನ ಫೆಲೋಶಿಪ್‌ಗಾಗಿ ಈ ಬಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದವರು ಸೇರಿದಂತೆ 22 ಮಂದಿ ಸಂಶೋಧನಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಸಂಶೋಧನಾ ಅಭ್ಯರ್ಥಿಗಳಿಗೆ ಒಂದೇ ಬಾರಿಗೆ ಹಣ ಕೊಡುತ್ತಿದ್ದುದರಿಂದ ದುರ್ಬಳಕೆಯಾ ಗುತ್ತಿತ್ತು. ಈ ಹಿನ್ನೆಲೆಯಲ್ಲಿ ಒಂದು ಲಕ್ಷ ರೂ.ಗಳನ್ನು ಮೂರು ಹಂತಗಳಲ್ಲಿ ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸುವರ್ಣ ಕಲಾ ಸಂಚಾರ್‌: ರಾಜ್ಯ, ದೇಶದ ಚಾರಿತ್ರಿಕ ಕಲೆಯ ಅಧ್ಯಯನದ ಆಸಕ್ತಿ ಬೆಳೆಸುವ ಸಲುವಾಗಿ ಅಕಾಡೆಮಿಯು ಹೊಸ ಯೋಜನೆ ರೂಪಿಸಿದೆ. “ಸುವರ್ಣ ಕಲಾ ಸಂಚಾರ್‌’ ಎಂಬ ಈ ವಿಶಿಷ್ಟ ಕಲ್ಪನೆಯಲ್ಲಿ 32 ಯುವ ಕಲಾವಿದರಿಗೆ ತಲಾ 25 ಸಾವಿರ ರೂ. ಧನ ಸಹಾಯ ನೀಡಿ, ಅಜಂತಾ, ಎಲ್ಲೋರಾ, ಖಜುರಾಹೋ, ದಕ್ಷಿಣ ಭಾರತದ ಕಲಾ ದೇಗುಲಗಳು ಮತ್ತು ರಾಜ್ಯದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಹಂಪಿ, ಬಾದಾಮಿ, ಪಟ್ಟದಕಲ್ಲು, ಸನ್ನತಿ (ಚಿತ್ತಾಪುರ), ಸೋಮನಾಥಪುರ ಇತ್ಯಾದಿ ಪ್ರಮುಖ ಕಲಾಕ್ಷೇತ್ರಗಳಿಗೆ ಪ್ರವಾಸ ಮಾಡಿ ಕಲಾಕೃತಿಗಳ ರಚನೆ ಮಾಡುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಜತೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಗ್ರಾಫಿಕ್‌ ಕಲಾಕೇಂದ್ರವನ್ನು ಸದ್ಯದಲ್ಲೇ ಪ್ರಾರಂಭಿಸುವ ಮೂಲಕ ರಾಜ್ಯದ ಅನೇಕ ಗ್ರಾಫಿಕ್‌ ಕಲಾವಿದರು ಗ್ರಾಫಿಕ್‌ ಕೃತಿ ರಚನೆಗೆ ತೊಡಗಲು ಅಕಾಡೆಮಿ ಸಹಕಾರ ನೀಡಲಿದೆ ಎಂದು ಹೇಳಿದರು.

ರಾಷ್ಟ್ರೀಯ ಕಲಾ ಪ್ರದರ್ಶನ
ಅಕಾಡೆಮಿಯು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಕಲಾಪ್ರದರ್ಶನ ಮತ್ತು ಸಂಕ್ರಾಂತಿ ಕಲಾ ಪುರಸ್ಕಾರ-2016 ಕಾರ್ಯ ಕ್ರಮವನ್ನು ಫೆಬ್ರವರಿಯಲ್ಲಿ ಆಯೋಜಿ ಸಲಿದೆ ಎಂದು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಎಂ.ಎಸ್‌.ಮೂರ್ತಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಾಕೃತಿಗಳನ್ನು ಆಹ್ವಾನಿಸಲಾಗಿದ್ದು, ಜ.25 ಕಲಾಕೃತಿ ಸಲ್ಲಿಕೆಗೆ ಕೊನೆಯ ದಿನ. ಆಯ್ಕೆಯಾದ 16 ಕಲಾಕೃತಿಗಳಿಗೆ ಸುವರ್ಣ ಕಲಾ ಸಂಕ್ರಾಂತಿ ಪುರಸ್ಕಾರ ನೀಡಲಾಗುವುದು.

ರಾಷ್ಟ್ರ ಮಟ್ಟದ ಕಲಾ ಸಾಹಿತ್ಯಕ್ಕೆ ಒಂದು ಲಕ್ಷ ರೂ.ನಗದು ಬಹುಮಾನ ಮತ್ತು ಕನ್ನಡ ಕಲಾ ಸಾಹಿತ್ಯ ಪ್ರೋತ್ಸಾಹಿಸಲು ಅದಕ್ಕೂ ಒಂದು ಲಕ್ಷ ನಗದು ಬಹುಮಾನ ನೀಡಲಾಗುವುದು. ಪ್ರಶಸ್ತಿ ಪಡೆದ ಈ ಸಾಹಿತ್ಯಗಳನ್ನು ಅಕಾಡೆಮಿ ಪ್ರಕಟಿಸಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.