ಮುಂಬಯಿ ಗೆಲುವಿಗೆ 251 ರನ್‌ ಗುರಿ


Team Udayavani, Jan 5, 2017, 3:45 AM IST

mumbai.jpg

ರಾಜ್‌ಕೋಟ್‌: ತಮಿಳುನಾಡು ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಸೆಮಿಫೈನಲ್‌ ಪಂದ್ಯದಲ್ಲಿ ಸ್ಪಷ್ಟ ಗೆಲುವು ದಾಖಲಿಸಲು ಮುಂಬಯಿ ತಂಡಕ್ಕೆ 251 ರನ್‌ ಗಳಿಸುವ ಗುರಿ ಪಡೆದಿದೆ. ಇದಕ್ಕುತ್ತರವಾಗಿ ಮುಂಬಯಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 5 ರನ್‌ ಗಳಿಸಿದೆ.

ಅಂತಿಮ ದಿನದ ಆಟ ಬಾಕಿ ಉಳಿದಿದ್ದು ಮುಂಬಯಿ ಜಯ ಸಾಧಿಸಲು ಇನ್ನು 246 ರನ್‌ ಗಳಿಸಬೇಕಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿರುವ ಮುಂಬಯಿಗೆ ಈ ಸವಾಲು ಕಠಿನವಲ್ಲದಿದ್ದರೂ ಗೆಲ್ಲುವ ಆತುರದಲ್ಲಿ ವಿಕೆಟ್‌ ಕಳೆದುಕೊಳ್ಳುವುದನ್ನು ನೋಡಬೇಕಾಗಿದೆ. ಪಂದ್ಯವನ್ನು ಡ್ರಾಮಾಡಿಕೊಂಡರೂ ಮುಂಬಯಿ ಫೈನಲಿಗೇರಲಿದೆ.

ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಸ್ಪಷ್ಟ ಜಯ ಸಾಧಿಸರಷ್ಟೇ ತಮಿಳುನಾಡು ಫೈನಲಿಗೇರುವ ಅವಕಾಶವಿದೆ. ಇದಕ್ಕಾಗಿ ನಾಲ್ಕನೇ ದಿನ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಿರುಸಿನ ಆಟವಾಡಿದ ತಮಿಳುನಾಡು 6 ವಿಕೆಟಿಗೆ 356 ರನ್‌  ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಳ್ಳಲು ನಿರ್ಧರಿಸಿತಲ್ಲದೇ ಮುಂಬಯಿ ಗೆಲುವಿಗೆ 251 ರನ್‌ ಗುರಿ ನಿಗದಿಪಡಿಸಿತು.

ಮುಂಬಯಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಹಳ ಎಚ್ಚರಿಕೆಯಿಂದ ಆಡಿತು. ನಾಲ್ಕನೇ ದಿನ ಉಳಿದ ಐದು ಓವರನ್ನು ಜಾಗ್ರತೆ ವಹಿಸಿ ಆಡಿದ ಮುಂಬಯಿಯ ಆರಂಭಿಕರು ಕೇವಲ 5 ರನ್‌ ಗಳಿಸಿದರು. ಅಂತಿಮ ದಿನವಾದ ಗುರುವಾರ ಮುಂಬಯಿ ದಿನವಿಡೀ ಆಡಿ ಗೆಲ್ಲಲು 246 ರನ್‌ ಗಳಿಸಬೇಕಾಗಿದೆ. ಪಂದ್ಯ ಡ್ರಾ ಮಾಡಿಕೊಂಡರೆ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಆಧಾರದಲ್ಲಿ ಮುಂಬಯಿ ಫೈನಲಿಗೇರಲಿದೆ.

ಈ ಮೊದಲು ಬೆಳಗ್ಗೆ ತನ್ನ ದ್ವಿತೀಯ ಇನ್ನಿಂಗ್ಸ್‌ ಆಡಿದ ತಮಿಳುನಾಡು ಬಿರುಸಿನ ಆಟವಾಡಿತು. ಮೊದಲ ವಿಕೆಟಿಗೆ ಗಂಗ ಶ್ರೀಧರ್‌ ರಾಜು ಮತ್ತು ಅಭಿನವ್‌ ಮುಕುಂದ್‌ 64 ರನ್‌ ಪೇರಿಸಿದರು. ರಾಜು ಔಟಾದ ಬಳಿಕ ಅಭಿನವ್‌ ಅವರನ್ನು ಸೇರಿಕೊಂಡ ಬಾಬಾ ಇಂದ್ರಜಿತ್‌ ರನ್‌ವೇಗವನ್ನು ಹೆಚ್ಚಿಸಿದರು. ಮುಂಬಯಿ ತಂಡವನ್ನು ದಿಟ್ಟವಾಗಿ ಎದುರಿಸಿದ ಅವರಿಬ್ಬರು ದ್ವಿತೀಯ ವಿಕೆಟಿಗೆ 185 ರನ್‌ ಪೇರಿಸಿದರು. ಇಬ್ಬರೂ ಶತಕ ಸಿಡಿಸಿ ಸಂಭ್ರಮಿಸಿದರು. ಮುಕುಂದ್‌ 122 ರನ್‌ ಗಳಿಸಿದರೆ ಇಂದ್ರಜಿತ್‌ 138 ರನ್‌ ಗಳಿಸಿದರು. ಅಂತಿಮವಾಗಿ ತಂಡ 356 ರನ್‌ ತಲುಪಿದಾಗ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತು.

ಸಂಕ್ಷಿಪ್ತ ಸ್ಕೋರು: ತಮಿಳುನಾಡು 305 ಮತ್ತು 6 ವಿಕೆಟಿಗೆ 356 ಡಿಕ್ಲೇರ್‌x (ಗಂಗ ಶ್ರೀಧರ್‌ ರಾಜು 28, ಅಭಿನವ್‌ ಮುಕುಂದ್‌ 122, ಬಾಬಾ ಇಂದ್ರಜಿತ್‌ 138, ದಿನೇಶ್‌ ಕಾರ್ತಿಕ್‌ 24, ವಿಜಯ್‌ ಶಂಕರ್‌ 24, ಬಲ್ವಿಂದರ್‌ ಸಂಧು 67ಕ್ಕೆ 2, ವಿಜಯ್‌ ಗೋಹಿಲ್‌ 110ಕ್ಕೆ 2); ಮುಂಬಯಿ 411 ಮತ್ತು ವಿಕೆಟ್‌ ನಷ್ಟವಿಲ್ಲದೇ 5.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.