![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jan 5, 2017, 12:15 PM IST
ಹೊಸದಿಲ್ಲಿ : ಎಐಎಡಿಎಂಕೆ ಪಕ್ಷದ ಬಂಡುಕೋರ ಸಂಸದೆ ಶಶಿಕಲಾ ಪುಷ್ಪಾ ಮತ್ತು ಯುವ ಸಂಘಟನೆಯೊಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ| ಜೆ ಜಯಲಲಿತಾ ಅವರ ಶಂಕಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ; ಮಾತ್ರವಲ್ಲ ಈ ವಿಷಯವನ್ನು ಇನ್ನು ಮುಂದೆ ಆಗ್ರಹಿಸಕೂಡದೆಂಬ ಎಚ್ಚರಿಕೆಯನ್ನು ನೀಡಿದೆ.
“ನಾವಿಲ್ಲಿ ಏನು ಮಾಡಬೇಕೆಂದು ನೀವು ಬಯಸುತ್ತೀರಿ ? ಸಂವಿಧಾನದ 32ನೇ ವಿಧಿ (ಸರಕಾರದಿಂದ ಆಗುವ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯನ್ನು ಪ್ರಶ್ನಿಸುವ ವಿಧಿ) ಯಡಿ ನೀವು ಅರ್ಜಿ ಸಲ್ಲಿಸಿದ್ದೀರಿ. ನಾವು ನಿಮ್ಮ ಈ ಅರ್ಜಿಗಳನ್ನು ವಜಾ ಮಾಡುತ್ತಿದ್ದೇವೆ; ಮಾತ್ರವಲ್ಲ ಈ ವಿಷಯವನ್ನು ನೀವು ಇನ್ನು ಮುಂದೆ ಮತ್ತೆ ಆಗ್ರಹಿಸಿದಲ್ಲಿ ನಿಮ್ಮ ಮೇಲೆ ಕಾನೂನು ವೆಚ್ಚವನ್ನು ಹೇರುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಪಿ ಸಿ ಘೋಷ್ ಮತ್ತು ರೋಹಿನ್ಟನ್ ಎಫ್ ನಾರಿಮನ್ ಅವರನ್ನು ಒಳಗೊಂಡ ಪೀಠವು ಎಚ್ಚರಿಕೆ ನೀಡಿತು.
ಜಯಲಲಿತಾ ಅವರ ಸಾವು ನಿಗೂಢ ಸನ್ನಿವೇಶದಲ್ಲಿ ಸಂಭವಿಸಿರುವುದರಿಂದ ಆ ಬಗ್ಗೆ ಸಿಬಿಐ ತನಿಖೆ ಆಗಬೇಕೆಂದು ಒತ್ತಾಯಿಸುವ ತಮಿಳುನಾಡು ತೆಲುಗು ಯವ ಶಕ್ತಿ ಸಂಘಟನೆಯ ಪರವಾಗಿ ವಕೀಲರು ವಾದ ಮಂಡಿಸುವುದರೊಂದಿಗೆ ವಿಚಾರಣೆ ಆರಂಭಗೊಂಡಿತ್ತು. ಎಐಎಡಿಎಂಕೆ ಬಂಡುಕೋರ ಸಂಸದೆ ಶಶಿಕಲಾ ಪುಷ್ಪಾ ಅವರ ವಕೀಲರು ಇದೇ ವೇಳೆ ತಮ್ಮ ವಾದವನ್ನು ಮಂಡಿಸಿ ಜಯಲಲಿತಾ ಅವರ ಶಂಕಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯನ್ನು ಆಗ್ರಹಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.