ವಿಜ್ಞಾನ ಶಿಕ್ಷಣದಲ್ಲಿ ಇನ್ನೂ ಗುರಿ ತಲುಪಿಲ್ಲ: ಪ್ರೊ.ಸಿದ್ದಪ್ಪ


Team Udayavani, Jan 12, 2017, 12:14 PM IST

science.jpg

ಬೆಂಗಳೂರು: ವಿಜ್ಞಾನ ಶಿಕ್ಷಣದಲ್ಲಿ ಭಾರತ ಇನ್ನೂ ತನ್ನ ನಿರ್ದಿಷ್ಟ ಗುರಿ ತಲುಪಿಲ್ಲ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ. ಸಿದ್ದಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಬುಧವಾರ ಜ್ಞಾನಜ್ಯೋತಿ ಸಭಾಂಗಣ ಸೆನೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ “ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಆಧಾರಿತ ಬೋಧನೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಸಾಧನೆ ಮಾಡಿದ್ದರೂ ವಿಜ್ಞಾನ ಶಿಕ್ಷಣದಲ್ಲಿ ನಿರ್ಧಿಷ್ಟ ಗುರಿಯನ್ನು ಇನ್ನೂ ತಲುಪಿಲ್ಲ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಹಳ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿರುವುದು ಅಮೆರಿಕದಲ್ಲಿ. ಆ ದೇಶ ಶಾಲಾ, ಕಾಲೇಜುಗಳ ಬೋಧನಾ ಪದ್ಧತಿ ಸೇರಿದಂತೆ ಎಲ್ಲೆಡೆಯೂ ಐಸಿಟಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಆದರೆ, ಭಾರತ ಇನ್ನೂ ಶಿಕ್ಷಣ ವ್ಯವಸ್ಥೆಯಲ್ಲಿ ಐಟಿಸಿಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಲು ಸಾಧ್ಯವಾಗಿಲ್ಲ ಎಂದರು. 

ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಬಿಇಡಿ ಕಾಲೇಜುಗಳು ತಕ್ಕ ಮಟ್ಟಿನ ಐಸಿಟಿ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡಿದ್ದರೂ, ಶಿಕ್ಷಕರ ತರಬೇತಿ ವಿಚಾರದಲ್ಲಿ ಹಿಂದೆ ಬಿದ್ದಿವೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಸರಿಪಡಿಸಕೊಳ್ಳಬೇಕು. ಶಿಕ್ಷಕರು ಕೇವಲ ಸೀಮಿತ ಪುಸ್ತಕದಲ್ಲಿ ಪಠ್ಯ ಬೋಧಿಸುವುದಲ್ಲ. ಇ-ಬುಕ್‌, ಇಂಟರ್‌ನೆಟ್‌ ಸೇರಿದಂತೆ ತಂತ್ರಜ್ಞಾನ ಆಧಾರಿತ ಸೌಲಭ್ಯಗಳನ್ನು ಬಳಸುವ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು. 

ಇಂದಿನ ಶಿಕ್ಷಕರು ಕೇವಲ ಪಠ್ಯಕ್ರಮ ಪೂರ್ಣಗೊಳಿಸುವ ತರಾತುರಿಯಲ್ಲಿರುತ್ತಾರೆ. ಮಕ್ಕಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ವ್ಯಾಸಂಗಕ್ಕೆ ಆಯ್ಕೆ ಮಾಡುತ್ತಿಲ್ಲ. ಪೋಷಕರ ಒತ್ತಡಕ್ಕೆ ಅವರು ಸೂಚಿಸಿದ ವಿಷಯವನ್ನು ಅಧ್ಯಯನ ಮಾಡುತ್ತಿದ್ದಾರೆ. ವಿಜ್ಞಾನ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರು ವಿಫ‌ಲರಾಗುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಕುಸಿಯುತ್ತಿದೆ. ವಿಜ್ಞಾನ ಶಿಕ್ಷಣ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ವೈದ್ಯಕೀಯ ಇಲ್ಲವೇ ಇಂಜಿನಿಯರಿಂಗ್‌ ಪ್ರವೇಶ ಪಡೆಯಲು ಮಾತ್ರ ಎನ್ನುವಂತಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

2 ವರ್ಷಕ್ಕೆ ಹೆಚ್ಚಳ: ಬೆಂಗಳೂರು ವಿವಿ ಕುಲಪತಿ ಡಾ.ಬಿ. ತಿಮ್ಮೇಗೌಡ ಮಾತನಾಡಿ, ಬಿಇಡಿ ವ್ಯಾಸಂಗಕ್ಕೆ ಇದ್ದ ಕಾಲ ಮಿತಿಯನ್ನು ಸರ್ಕಾರ ಕಳೆದ ವರ್ಷದಿಂದ ಎರಡು ವರ್ಷಕ್ಕೆ ಹೆಚ್ಚಿಸಿದೆ. ಹಾಗಾಗಿ ಬಿ.ಇಡಿ ವ್ಯಾಸಂಗದಲ್ಲಿ ಹೆಚ್ಚಾಗಿ ವಿಜ್ಞಾನ ವಿಷಯಗಳನ್ನು ಪರಿಚಯಿಸುವ ಕೆಲಸವಾಗಬೇಕು. ಇದರಿಂದ ಬಿಇಡಿ ವ್ಯಾಸಂಗ ಇನ್ನಷ್ಟು ಪರಿಣಾಮಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಎನ್‌ಸಿಇಆರ್‌ಟಿ ಮಾಜಿ ನಿರ್ದೇಶಕ ಡಾ. ರವೀಂದ್ರ, ಬೆಂಗಳೂರು ವಿವಿ ಐಕ್ಯುಎಸಿ ನಿರ್ದೇಶಕ ಪ್ರೊ.ಬಿ.ಸಿ. ಪ್ರಭಾಕರ್‌, ಶಿಕ್ಷಣ ನಿಖಾಯದ ಡೀನ್‌ ಪ್ರೊ. ಸುಂದರರಾಜ್‌ ಅರಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

9-bng

Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ

8-bng

Bengaluru: ಚರ್ಚ್‌ ಸ್ಟ್ರೀಟ್‌ ನಲ್ಲಿದ್ದ 50 ಅನಧಿಕೃತ ಅಂಗಡಿ ತೆರವು

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

9-bng

Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.