
ಕಮಲ ಹಾಸನ್ ಆಯ್ತು; ಈಗ ಜಲ್ಲಿಕಟ್ಟು ಪರ ರಜನೀಕಾಂತ್ ಬ್ಯಾಟಿಂಗ್
Team Udayavani, Jan 14, 2017, 11:11 AM IST

ಹೊಸದಿಲ್ಲಿ : ತಮಿಳು ನಾಡಿನ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕ್ರೀಡೆ ಜಲ್ಲಿಕಟ್ಟು ಪರವಾಗಿ ಸೂಪರ್ ಸ್ಟಾರ್ ಕಮಲ ಹಾಸನ್ ಬೆಂಬಲ ವ್ಯಕ್ತಪಡಿಸಿದ ಬಳಿಕ ಇದೀಗ ಇನ್ನೋರ್ವ ಸೂಪರ್ ಸ್ಟಾರ್ ತಲೈವ ರಜನೀಕಾಂತ್ ಅವರು ಜಲ್ಲಿಕಟ್ಟು ಪರ ಬ್ಯಾಟಿಂಗ್ ನಡೆಸಿದ್ದಾರೆ.
“ಯಾವುದೇ ಕಾನೂನು, ನಿಯಮಗಳನ್ನು ತಂದರೂ ಜಲ್ಲಿಕಟ್ಟು ಕ್ರೀಡೆಯನ್ನು ನಡೆಸಲೇಬೇಕು. ಏಕೆಂದರೆ ಅದು ತಮಿಳರ ಪ್ರಾಚೀನ ಸಂಸ್ಕೃತಿಯ ದ್ಯೋತಕವಾಗಿದೆ; ನಾವದನ್ನು ಕೈಬಿಡಲಾರೆವು’ ಎಂದು ರಜನೀಕಾಂತ್ ಹೇಳಿದ್ದಾರೆ.
ವಿಕಟನ್ ಫಿಲಂ ಅವಾರ್ಡ್ ಸಮಾರಂಭದ ಪಾರ್ಶ್ವದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಲ್ಲಿಕಟ್ಟು ಕುರಿತಾದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈ ಮೊದಲು ಇಂಡಿಯಾ ಟುಡೇ ಕಾನ್ಕ್ಲೇವ್ ನಲ್ಲಿ ಮಾತನಾಡುತ್ತಾ ನಟ ಕಮಲ ಹಾಸನ್ ಅವರು “ನೀವು ಜಲ್ಲಿಕಟ್ಟನ್ನು ನಿಷೇಧಿಸುವುದಾದರೆ ನಾವು ಬಿರಿಯಾನಿಯನ್ನು ಕೂಡ ಬ್ಯಾನ್ ಮಾಡೋಣ’ ಎಂದು ಹೇಳಿದ್ದರು. “ನಾನು ಜಲ್ಲಿಕಟ್ಟು ಕ್ರೀಡೆಯ ದೊಡ್ಡ ಫ್ಯಾನ್. ಬಹುಷಃ ಜಲ್ಲಿಕಟ್ಟು ಕ್ರೀಡೆ ಆಡಿರುವ ಕೆಲವೇ ಕೆಲವು ಚಿತ್ರ ನಟರಲ್ಲಿ ನಾನೊಬ್ಬ; ಹಾಗಾಗಿ ನಾನು ತಮಿಳನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ; ಏಕೆಂದರೆ ಅದು ನಮ್ಮ ಸಂಸ್ಕೃತಿಯಾಗಿದೆ’ ಎಂದು ಕಮಲ ಹಾಸನ್ ಹೇಳಿದ್ದರು.
ಇದೇ ವೇಳೆ ಸಿನಿಮಾ ರಂಗದ ಇತರ ಕಲಾವಿದರಲ್ಲಿ ಧನುಷ್ ಮತ್ತು ಗೌತಮಿ ಕೂಡ ಜಲ್ಲಿಕಟ್ಟು ಬೆಂಬಲಿಸಿ ಮಾತನಾಡಿದ್ದಾರೆ.
ಸುಪ್ರೀಂ ಕೋರ್ಟ್ 2014ರ ಮೇ ತಿಂಗಳಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಾಣಿ ದಯಾ ಹಿತಾಸಕ್ತಿಯಲ್ಲಿ ನಿಷೇಧಿಸಿತ್ತು. ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳು ನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ನಡೆಸುವುದು ಲಾಗಾಯ್ತಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.