ಸ್ವಚ್ಛತೆಯಲ್ಲಿ ವಾಣಿ ವಿಲಾಸ ರಾಜ್ಯಕ್ಕೆ ನಂ.3


Team Udayavani, Jan 23, 2017, 11:38 AM IST

vani-vilas-hospital.jpg

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆಯ ಬಗ್ಗೆ ಮೂಗು ಮುರಿಯುವವರೇ ಹೆಚ್ಚು. ಆದರೆ, ಅಂಥವರ ಸೊಲ್ಲಡಗಿಸುವ ಸುದ್ದಿಯೊಂದು ಇಲ್ಲಿದೆ. ನಗರದ ವಾಣಿವಿಲಾಸ ಆಸ್ಪತ್ರೆಯು ಸ್ವಚ್ಛತೆ ವಿಚಾರದಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ವಿಜಯಪುರ ಜಿಲ್ಲಾಸ್ಪತ್ರೆ ಪ್ರಥಮ ಸ್ಥಾನದಲ್ಲಿದ್ದರೆ, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಎರಡನೇ ಸ್ಥಾನ ಸಿಕ್ಕಿದೆ. 

ಕೇಂದ್ರ ಸರ್ಕಾರದ “ಸ್ವಚ್ಛ ಭಾರತ ಅಭಿಯಾನ’ದಡಿ “ಸ್ವಚ್ಛತೆ ಕಾಪಾಡುವ ಆಸ್ಪತ್ರೆಗಳಿಗೆ ನೀಡುವ ಕಾಯಕಲ್ಪ ಪ್ರಶಸ್ತಿಗೆ ರಾಜ್ಯ ಸರ್ಕಾರ 2016-17ನೇ ಸಾಲಿಗೆ 35 ಆಸ್ಪತ್ರೆಗಳನ್ನು ಆಯ್ಕೆ ಮಾಡಿದ್ದು, ವಾಣಿ ವಿಲಾಸ ಆಸ್ಪತ್ರೆಯು ಶೇ. 96.5 ಅಂಕ ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದುಕೊಂಡಿದೆ.  ವಾಣಿವಿಲಾಸ ಆಸ್ಪತ್ರೆಯು ಸುಮಾರು 80 ವರ್ಷ ಹಳೆಯ ಆಸ್ಪತ್ರೆಯಾಗಿದ್ದು, ನಿತ್ಯ ಸಾವಿರಾರು ಮಂದಿ ಚಿಕಿತ್ಸೆಗೆ ಆಗಮಿಸುತ್ತಾರೆ.

ಸ್ವಚ್ಛತೆ ಕೊರತೆ ಜತೆಗೆ ಮೆಟ್ರೋ ಕಾಮಗಾರಿಯಿಂದ ಆಸ್ಪತ್ರೆ ಆವರಣ ಹದಗೆಟ್ಟಿತ್ತು. ಆದರೆ, ಈಗ ಆಸ್ಪತ್ರೆಯ ವಾತಾವರಣ ಸಂಪೂರ್ಣ ಬದಲಾಗಿದೆ. ಸ್ವಚ್ಛ ಆಸ್ಪತ್ರೆ ಅಭಿಯಾನದಿಂದ ಹೊಸ ರೂಪ ಪಡೆದುಕೊಂಡು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಿದೆ. ಶಸ್ತ್ರಚಿಕಿತ್ಸೆಯ ಕೊಠಡಿಗಳನ್ನು ನವೀಕರಿಸಲಾಗಿದೆ. ಹೀಗಾಗಿ ಪ್ರಶಸ್ತಿಯ ಪಟ್ಟಿಯಲ್ಲಿ ವಾಣಿವಿಲಾಸ ಆಸ್ಪತ್ರೆಯನ್ನೂ ಸೇರಿಸಲಾಗಿತ್ತು. 

ಆಸ್ಪತ್ರೆಯಲ್ಲಿ ಸುಧಾರಣೆಗಳನ್ನು ಕಂಡ ಯೋಜನೆಯ ಪದಾಧಿಕಾರಿಗಳ ವರದಿಯಿಂದ ಇದೀಗ ಮೂರನೇ ಸ್ಥಾನ ಪಡೆಯಲು ಸಾಧ್ಯವಾಗಿದೆ ಎನ್ನುತ್ತಾರೆ ಆಸ್ಪತ್ರೆಯ ಹಿರಿಯ ವೈದ್ಯರು. ರ್‍ಯಾಂಕ್‌ನ ಆಸ್ಪತ್ರೆಗೆ 50 ಲಕ್ಷ ರೂ. ಬಹುಮಾನ: ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸ್ವಚ್ಛತೆಯ ಜತೆಗೆ ಗುಣಮಟ್ಟದ ಹಾಗೂ ಸೋಂಕು ರಹಿತ ಸೇವೆ ನೀಡುವ ಆಸ್ಪತ್ರೆಗಳನ್ನು ಗುರುತಿಸಿ ಪ್ರಶಸ್ತಿ ನೀಡುವುದು ಯೋಜನೆಯ ಪ್ರಮುಖ ಉದ್ದೇಶ. 

ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ವಿಜಯಪುರ ಜಿಲ್ಲಾ ಆಸ್ಪತ್ರೆಯು ಮೊದಲ ಸ್ಥಾನ ಮತ್ತು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಎರಡನೇ ಸ್ಥಾನ ಪಡೆದುಕೊಂಡಿದೆ. ಮೊದಲ ಸ್ಥಾನ ಪಡೆದ ಆಸ್ಪತ್ರೆಗೆ 50 ಲಕ್ಷ ರೂಪಾಯಿ, ದ್ವಿತೀಯ ಸ್ಥಾನ ಪಡೆದ ಆಸ್ಪತ್ರೆಗೆ 20 ಲಕ್ಷ ರೂ. ಮತ್ತು ಮೂರನೇ ಸ್ಥಾನ ಪಡೆದ ಆಸ್ಪತ್ರೆಗೆ 10 ಲಕ್ಷ ರೂ. ಮತ್ತು ಸಮಾಧಾನಕರ ಬಹುಮಾನ ಪಡೆದ ನಾಲ್ಕು ಆಸ್ಪತ್ರೆಗಳಿಗೆ ತಲಾ ಮೂರು ಲಕ್ಷ ರೂ. ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಸ್ವಚ್ಛತೆ ಮಾತ್ರವಲ್ಲ, ಆಸ್ಪತ್ರೆ ವ್ಯವಸ್ಥಿತ 
ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳ ಆರೈಕೆ ಮಾಡುವ ಬಗೆ ಮತ್ತು ಯಾವ ಚುಚ್ಚುಮದ್ದುಗಳನ್ನು ಯಾವಾಗ ಹಾಕಿಸಿಕೊಳ್ಳಬೇಕು? ಆಹಾರ ಪದ್ಧತಿ, ಜೀವನ ಶೈಲಿ ಸೇರಿ ಇತರೆ ಮಾಹಿತಿ ನೀಡಲು ಆಸ್ಪತ್ರೆಯ 15 ಸ್ಥಳಗಳಲ್ಲಿ ಟಿ.ವಿ. ಹಾಕಲಾಗಿದೆ. ಮಕ್ಕಳ ಅಪಹರಣ, ಕಳ್ಳತನ ತಡೆಯಲು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ, ವೈದ್ಯರು ಸೇರಿ ಆಸ್ಪತ್ರೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ರೋಗಿಗಳ ಜತೆ ಮತ್ತು ಅವರ ಕುಟುಂಬದ ಸದಸ್ಯರೊಂದಿಗಿನ ವರ್ತನೆ ಹೇಗಿರಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗಿದೆ. ಸ್ವಚ್ಛತೆ ಕಾಪಾಡುವ ಬಗೆಯೂ ಅರಿವು ಮೂಡಿಸಲಾಗಿದೆ ಎಂದು ಹೇಳಲಾಗಿದೆ. 

ಆಸ್ಪತ್ರೆಗೆ ಬರುವ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಆಸ್ಪತ್ರೆ ಸಾಧನೆ ಸಂತಸ ತಂದಿದೆ. ಮುಂದೆಯೂ ಸ್ವಚ್ಛತೆ ಜತೆಗೆ ಉತ್ತಮ ಆರೋಗ್ಯ ಸೇವೆಗೆ ಒತ್ತು ನೀಡಲಾಗುವುದು. ಹಾಳಾಗಿದ್ದ ಆಸ್ಪತ್ರೆಯ ಆವರಣವನ್ನು ಉದ್ಯಾನವನ್ನಾಗಿ ಮಾಡಲಾಗಿದ್ದು, ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ನೆಡಲಾಗಿದೆ. 
-ಡಾ. ಪಿ.ಕೆ. ದೇವ್‌ದಾಸ್‌, ಡೀನ್‌, ಬೆಂಗಳೂರು ವೈದ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ

* ಪ್ರಭುಸ್ವಾಮಿ ನಟೇಕರ್‌

ಟಾಪ್ ನ್ಯೂಸ್

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

12

Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.