ಅಲಮ್ಲ ಬಿಡುಗಡೆ ಮಾಡದಂತೆ ಪ್ರತಿಭಟನೆ
Team Udayavani, Jan 26, 2017, 12:36 PM IST
ಧಾರವಾಡ: ಬಸವಾದಿ ಶರಣರ ಸಂಸ್ಕೃತಿ ಹಾಗೂ ಇತಿಹಾಸಕ್ಕೆ ಅಪಚಾರ ಎಸಗಿರುವ ಟಿ.ಎಸ್. ನಾಗಾಭರಣ ಅವರ ನಿರ್ದೇಶನದ “ಅಲ್ಲಮ’ ಚಲನಚಿತ್ರ ಬಿಡುಗಡೆ ಮಾಡದಂತೆ ಆಗ್ರಹಿಸಿ ರಾಷ್ಟ್ರೀಯ ಬಸವದಳ, ಜಗನ್ಮಾತಾಅಕ್ಕಮಹಾದೇವಿ ಅನುಭಾವ ಪೀಠ ಸೇರಿದಂತೆ ಬಸವಪರ ಸಂಸ್ಥೆಗಳ ಸಹಯೋಗದಲ್ಲಿ ನಗರದ ಡಿಸಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ದೆಹಲಿಯ ಬಸವ ಮಂಟಪದ ಶ್ರೀಚನ್ನಬಸವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡ ಬಳಿಕ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಬಸವಣ್ಣ, ಅಲ್ಲಮಪ್ರಭುದೇವರ ಹಾಗೂ ಎಲ್ಲ ಶರಣರ ವ್ಯಕ್ತಿತ್ವಕ್ಕೆ ಚ್ಯುತಿ ಬರುವಂತಹ ಅಂಶಗಳು ಅಲ್ಲಮ ಚಿತ್ರದಲ್ಲಿವೆ. ಲೋಪ-ದೋಷಗಳಿಂದ ಕೂಡಿರುವ ಈ ಚಿತ್ರದ ಬಿಡುಗಡೆಗೆ ಸರಕಾರ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸವಾನಂದ ಸ್ವಾಮೀಜಿ, ಟಿ.ಎಸ್. ನಾಗಾಭರಣ ಅವರ ನಿರ್ದೇಶನದ “ಅಲ್ಲಮ’ ಚಲನಚಿತ್ರದಲ್ಲಿ ಲಿಂಗಾಯತ ಧರ್ಮ ಹಾಗೂ ಶರಣ ಚಳವಳಿಯ ಇತಿಹಾಸವನ್ನು ಮರೆಮಾಚಿ ಚಿತ್ರ ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಬಸವ ಭಕ್ತರು ಹಾಗೂ ಅಲ್ಲಮ ಪ್ರಭು ದೇವರ ಅನುಯಾಯಿಗಳಿಗೆ ಚಲನಚಿತ್ರ ನೋವುಂಟು ಮಾಡಿದೆ.
ಹೀಗಾಗಿ ಚಲನಚಿತ್ರ ಪ್ರದರ್ಶನಕ್ಕೆ ಮುಖ್ಯಮಂತ್ರಿ ಅವರು ತಡೆ ನೀಡಬೇಕು. ಒಂದು ವೇಳೆ ಚಲಚಿತ್ರ ಪ್ರದರ್ಶನಗೊಂಡಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಇತಿಹಾಸ ಮರೆ ಮಾಚಿದ್ದಾರೆ. ಎಲ್ಲ ಲೋಪಗಳನ್ನು ಸರಿಪಡಿಸಿ ಚಿತ್ರ ಬಿಡುಗಡೆ ಮಾಡಬೇಕು. ಇಲ್ಲವೇ ಈ ಚಿತ್ರಕ್ಕೆ ಸರ್ಕಾರ ತಡೆ ನೀಡಬೇಕು. ಇಲ್ಲವಾದರೇ ಹೋರಾಟ ಅನಿವಾರ್ಯ ಆಗಲಿದೆಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ
Udupi: ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಚುರುಕು
Kulai: ಬೃಹತ್ ಟ್ರಕ್ ಓಡಾಟದಿಂದ ರಸ್ತೆಗೆ ಹಾನಿ
Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.