ಆರೋಗ್ಯ ತಪಾಸಣೆ ಶಿಬಿರದಲ್ಲಿ 667 ಜನರಿಗೆ ಔಷಧ ವಿತರಣೆ


Team Udayavani, Jan 27, 2017, 11:57 AM IST

hub1.jpg

ಧಾರವಾಡ: ದ್ವಿಚಕ್ರ ವಾಹನ ದುರಸ್ತಿ ಮಾಡುವ ಮೇಸ್ತ್ರಿಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಬರುವ ದಿನಗಳಲ್ಲಿ ಹೊಸ ಯೋಜನೆ ಜಾರಿಗೆ ತರಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಶಿವಾಜಿ ವೃತ್ತದಲ್ಲಿರುವ ಭಾರತ ಹೈಸ್ಕೂಲ್‌ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೃಹತ್‌ ಉಚಿತ ಆರೋಗ್ಯ ತಪಾಸಣೆಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಅವರ ಮನವೊಲಿಸಿ ಶೀಘ್ರದಲ್ಲಿಯೇ  ಹೊಸ ಯೋಜನೆ ಜಾರಿಗೆ ತರಲು ಶ್ರಮಿಸಲಾಗುವುದು ಎಂದರು.

ಇಎಸ್‌ಐ ಆಸ್ಪತ್ರೆಯಲ್ಲಿ ಮೇಸ್ತ್ರಿಗಳ ಆರೋಗ್ಯ ತಪಾಸಣೆ, ಜೀವವಿಮೆ ಹಾಗೂ ಅಪಘಾತ ವಿಮೆ ಮತ್ತು  ಮೇಸ್ತ್ರಿಗಳ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸೌಲಭ್ಯ ಕಲ್ಪಿಸಲು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೇಸ್ತ್ರಿಗಳು ಗುಟ್ಕಾ, ಮದ್ಯಪಾನ ಸೇವನೆಯಂತಹ ದುಶ್ಚಟಗಳಿಂದ ದೂರ ಉಳಿದು, ಆರೋಗ್ಯ ಕಾಳಜಿ ಹೊಂದಬೇಕು. ಆ ಮೂಲಕ ಇತರರಿಗೆ ಮಾದರಿಯಾಗುವಂತಹ ಜೀವನ ಸಾಗಿಸಬೇಕು. ಕಡಿಮೆ ದರದಲ್ಲಿ ಸಮಾಜಮುಖೀ ಸೇವೆ ನೀಡಬೇಕು ಎಂದು ಸಲಹೆ ನೀಡಿದರು. ಮಂಜುನಾಥ ಕದಂ ಮಾತನಾಡಿದರು.

ಈ ಶಿಬಿರದಲ್ಲಿ ಒಟ್ಟು 667 ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಇದೇ ವೇಳೆ 35 ಜನರು ರಕ್ತದಾನ ಮಾಡಿದರು. ಒಟ್ಟು 116 ಜನರ ರಕ್ತ ತಪಾಸಣೆ ಮಾಡಲಾಯಿತು. ಅಲ್ಲದೆ, 24 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆಗೆ ಒಳಪಡಿಸಲು ನಿರ್ಧರಿಸಲಾಯಿತು.

ರಾಷ್ಟ್ರಮಟ್ಟದ ಟಚ್‌ರಬ್ಬಿ ಕ್ರೀಡೆಯಲ್ಲಿ ಪಾಲ್ಗೊಂಡ ಮರಾಠ ವಿದ್ಯಾ ಪ್ರಸಾರಕ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲಾಮಟ್ಟದ ಥ್ರೋ ಬಾಲ್‌ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಕಾಲೇಜ್‌ ವಿದ್ಯಾರ್ಥಿಗಳಿಗೆ ಟ್ರೋಫಿ, ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ಸಚಿವ ವಿನಯ ಕುಲಕರ್ಣಿ ವಿತರಿಸಿದರು. ಶಿವಲೀಲಾ ಕುಲಕರ್ಣಿ, ಇಸ್ಲಾಯಿಲ್‌ ತಮಟಗಾರ, ಮನೋಜ ಕರ್ಜಗಿ, ಯಾಶೀನ್‌ ಹಾವೇರಿಪೇಟ, ನವೀನ್‌ ಕದಂ, ಡಾ| ವಿ.ಡಿ. ಕರ್ಪೂರಿಮಠ ಇದ್ದರು. 

ಟಾಪ್ ನ್ಯೂಸ್

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

15

Kota: ಟೋಲ್‌ ತಪ್ಪಿಸಲು ನಕಲಿ ಆರ್‌ಸಿ ಸೃಷ್ಟಿ

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.