ಟ್ರಾಫಿಕ್ ಜಾಮ್: ಬೈಕ್ ಏರಿದ ಸಚಿವ ಖಾದರ್
Team Udayavani, Jan 28, 2017, 3:45 AM IST
ಬೆಳಗಾವಿ: ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಬಂದಾಗ ಸಂಚಾರ ಅಸ್ತವ್ಯಸ್ತವಾಗಿ ಪ್ರಯಾಣಿಕರು ಪರದಾಡುವುದು ಹೊಸದೇನಲ್ಲ. ಆದರೆ, ಸ್ವತಃ ಸಚಿವರಿಗೇ ಈ ಸ್ಥಿತಿ ಒದಗಿದರೆ?
ಶುಕ್ರವಾರ ನಗರಕ್ಕೆ ಮುಖ್ಯಮಂತ್ರಿಗಳ ಭೇಟಿಗೂ ಮುನ್ನ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ್ದರು. ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ನಿಭಾಯಿಸಲು ಯತ್ನಿಸಿದರು. ಆದರೆ ಅದು ಸಾಧ್ಯವಾಗದಿದ್ದಾಗ ಅಪರಿಚಿತರೊಬ್ಬರ ಬೈಕ್ ಏರಿ ವಿಮಾನ ನಿಲ್ದಾಣ ತಲುಪಿದರು.
ಸಿಎಂ ಸಿದ್ದರಾಮಯ್ಯ ಬೈಲಹೊಂಗಲದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದಿದ್ದರು. ಈ ವೇಳೆ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಬೈಲಹೊಂಗಲಕ್ಕೆ ಸಿಎಂ ತೆರಳುವಾಗ ಪೊಲೀಸರು ಸಾಂಬ್ರಾ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರು.
ಇದೇ ವೇಳೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಡುವ ವಿಮಾನವೇರಲು ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಸಚಿವ ಯು.ಟಿ. ಖಾದರ್, ಬೆಳಗಾವಿ ಸಮೀಪ ವಾಹನಗಳ ಸಾಲಿನಲ್ಲಿ ಸಿಲುಕಿದ್ದರು. ಬಳಿಕ ಬೈಕ್ ಸವಾರನಿಂದ ಡ್ರಾಪ್ ಪಡೆದು ವಿಮಾನ ನಿಲ್ದಾಣ ತಲುಪಿ ಬೆಂಗಳೂರಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ
ಜೈಲಿನಲ್ಲಿ ಮೊಬೈಲ್ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
Congress: ಸಂವಿಧಾನ ವಿರೋಧಿ ಸಾವರ್ಕರ್ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ
MUST WATCH
ಹೊಸ ಸೇರ್ಪಡೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.