ಅವಾಚ್ಯ ಶಬ್ದದಿಂದ ನಿಂದಿಸಿದ್ದಕ್ಕೆ ಇರಿದು ಕೊಂದ ಯುವಕ
Team Udayavani, Jan 31, 2017, 11:44 AM IST
ಬೆಂಗಳೂರು: ಅವಾಚ್ಯ ಶಬ್ದದಿಂದ ನಿಂದಿಸಿದ ಎಂಬ ಕಾರಣಕ್ಕೆ ಕುಡಿದ ಅಮಲಿನಲ್ಲಿದ್ದ ಯುವಕನೋರ್ವ ಬೇಕರಿ ನೌಕರನನ್ನು ಹತ್ಯೆ ಮಾಡಿರುವ ಘಟನೆ ಹಳೇ ಬೈಯಪ್ಪನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಂಬೇಡ್ಕರ್ ನಗರ ನಿವಾಸಿ ಮುರಳಿ (48) ಕೊಲೆಯಾದ ವ್ಯಕ್ತಿ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಪ್ರದೇಶದ ನಿವಾಸಿ ಜೈರಾಜ್ (26) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರಳಿ ಮತ್ತು ಜೈರಾಜ್ ಅಂಬೇಡ್ಕರ್ ನಗರ ನಿವಾಸಿಗಳಾಗಿದ್ದು, ಪರಿಚಯಸ್ಥರಾಗಿದ್ದರು. ಮುರುಳಿ ಅಂಬೇಡ್ಕರ್ ನಗರದ ವಿ.ಬಿ.ಬೇಕರಿಯಲ್ಲಿ ನೌಕರನಾಗಿದ್ದು, ಜೈರಾಜ್ ಪೈಂಟರ್ ಆಗಿದ್ದ.
ಪರಿಚಯಸ್ಥರಾದ ಕಾರಣ ಜೈರಾಜ್ ತಾಯಿ ಮುರಳಿ ಬಳಿ ಸಾಲ ಪಡೆದಿದ್ದರು. ಆದರೆ, ಸಾಲ ಹಿಂದಿರುಗಿಸದೆ ಜೈರಾಜ್ ತಾಯಿ ನೆಪ ಹೇಳುತ್ತಿದ್ದರು. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುರಳಿ ಕೆಲಸ ಮಾಡುತ್ತಿದ್ದ ಬೇಕರಿಗೆ ಬಂದಿದ್ದ ಜೈರಾಜ್ ಸಿಗರೇಟ್ ಪಡೆದಿದ್ದ. ಆ ವೇಳೆ ತಾಯಿ ಪಡೆದಿದ್ದ ಸಾಲದ ಕುರಿತು ಜೈರಾಜ್ನಲ್ಲಿ ಮುರುಳಿ ಪ್ರಶ್ನಿಸಿದ್ದು, ಈ ವಿಚಾರವಾಗಿ ಇಬ್ಬರು ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಬೇಕರಿ ಮಾಲೀಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ.
ಆದರೆ, ಜಗಳದ ವೇಳೆ ಮುರಳಿ ತನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಕಾರಣಕ್ಕೆ ಕೋಪಗೊಂಡಿದ್ದ ಜೈರಾಜ್ ಅತನ ಕೊಲೆಗೆ ಸಂಚು ರೂಪಿಸಿದ್ದ. ಅದರಂತೆ ಭಾನುವಾರ ತಡರಾತ್ರಿ ಮುರುಳಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದುದನ್ನೇ ಕಾದು ಕುಳಿತಿದ್ದ ಜೈರಾಜ್ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಎರಡು ಬಾರಿ ಹೊಟ್ಟೆಗೆ ಇರಿದಿದ್ದ. ಇದರಿಂದ ತೀವ್ರ ರಕ್ತಸ್ರಾವವಾಗಿ ಕೆಳಗೆ ಬಿದ್ದಿದ್ದ ಮುರುಳಿಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹಾಯಕ್ಕೆ ಬಂದವರ ಮೇಲೂ ಹಲ್ಲೆಗೆ ಯತ್ನ: ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುರಳಿಯ ಸಹಾಯಕ್ಕೆ ಧಾವಿಸಿದ ಸುರೇಶ್ ಮತ್ತು ಅಮಿತ್ ಎಂಬುವರ ಮೇಲೂ ಜೈರಾಜ್ ಕುಡಿದ ಅಮಲಿನಲ್ಲಿ ಹಲ್ಲೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬೈಯ್ಯಪ್ಪನ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.