ಮಾಧ್ಯಮಗಳ ಬಗ್ಗೆ ಎಚ್ಚರ ವಹಿಸಿ: ಯಡಿಯೂರಪ್ಪ


Team Udayavani, Jan 31, 2017, 11:55 AM IST

media-warnimng.jpg

ಬೆಂಗಳೂರು: ರಾಜಕೀಯ ಪಕ್ಷಗಳ ಮುಖಂಡರ ಮೇಲೆ ಮಾಧ್ಯಮಗಳ ಕಣ್ಣು ಸದಾ ಇರುವುದರಿಂದ ಹೇಳಿಕೆ ಗಳನ್ನು ನೀಡುವ ವೇಳೆ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ಪಕ್ಷದ ವಕ್ತಾರರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿ ಯೂರಪ್ಪ ಕಿವಿಮಾತು ಹೇಳಿದರು. ನಗರದ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 

ಮಾಧ್ಯಮಗಳಿಂದ ಪಕ್ಷಗಳ ಪ್ರತಿಷ್ಠೆ ಹೆಚ್ಚಿಸಲು ಅಥವಾ ಕುಗ್ಗಿಸಲು ಸಾಧ್ಯ. ಸುದ್ದಿಯ ಪೈಪೋಟಿಯಲ್ಲಿರುವ ಮಾಧ್ಯಮಗಳು ನಮ್ಮ ಲೋಪದೋ ಷಗಳನ್ನು ಪತ್ತೆ ಹಚ್ಚಿ ಬಹುಬೇಗ ಜನರಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿವೆ. ಹೀಗಾಗಿ ಜನಪ್ರಿಯತೆಗೆ ಕಟ್ಟುಬಿದ್ದು ಮಾಧ್ಯಮಗಳಿಗೆ ಆಹಾರವಾಗದಂತೆ ಎಚ್ಚರವಹಿಸುವುದರ ಜತೆಗೆ ಸಾರ್ವಜ ನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡುವಾಗ ಮೈಯೆಲ್ಲಾ ಕಣ್ಣಾಗಿಸಿ ಕೊಂಡಿರಬೇಕು ಎಂದರು.

ಮಾಧ್ಯಮಗಳಲ್ಲಿ ಪಕ್ಷದ ಬಗ್ಗೆ ನಕಾರಾತ್ಮಕ ವಿಚಾರಗಳು ಬರದಂತೆ ಎಚ್ಚರ ವಹಿಸಬೇಕು. ಒಂದು ಬಾರಿ ನಕರಾತ್ಮಕ ವಿಚಾರ ಬಂದಲ್ಲಿ ಅದನ್ನು ಸರಿಪಡಿಸಲು ಹರಸಾಹಸ ಮಾಡಬೇಕಾಗುತ್ತದೆ. ಇದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ಮಾಧ್ಯಮಗಳಿಗೆ ಆಹಾರವಾಗದಂತೆ ಕಾರ್ಯ ನಿರ್ವಹಿಸಬೇಕಾಗಿದ್ದು, ಪಕ್ಷದ ಹೊಣೆಗಾರಿಕೆಗಳನ್ನು ಜವಾ ಬ್ದಾರಿಯುತವಾಗಿ ನಿಭಾಯಿಸಬೇಕು ಎಂದು ಹೇಳಿದರು. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವು ನಾಲ್ಕನೆ ಅಂಗವಾಗಿದ್ದು, ಯಾರೊಬ್ಬರೂ ಅದರ ಬಗ್ಗೆ ಉದಾಸೀನ ತೋರಬಾರದು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಕಣ್ಣಿಟ್ಟು ಸದಾ ಜಾಗೃತರಾಗಬೇಕು. ಕಾರ್ಯಕರ್ತರು, ಮುಖಂಡರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವ ಮುನ್ನ ಕೇಂದ್ರ ಕಚೇರಿಗೆ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.

ಮಾಜಿ ಸಚಿವ ಸುರೇಶ್‌ ಕುಮಾರ್‌ ಮಾತನಾಡಿ, ಚುನಾವಣೆಗೆ 400 ದಿನಗಳ ಮಾತ್ರ ಇದೆ. ಈ ಹಂತದಲ್ಲಿ ನಾವಾಡುವ ಪ್ರತಿಮಾತು, ಹೇಳಿಕೆಗಳು ಪಕ್ಷದ ಬಲವರ್ಧನೆಗೆ ಪೂರಕ ವಾಗಿರಬೇಕು. ಯಾರೂ, ಯಾವುದೇ ಕಾರಣಕ್ಕೂ ಬಹಿರಂಗವಾಗಿ ಪಕ್ಷದ ವಿರುದ್ಧ ಮಾತನಾಡಬಾರದು.

ಮಾಧ್ಯಮಗಳ ಮುಂದೆ ಯಾವ ರೀತಿ ಹೇಳಿಕೆಗಳನ್ನು ನೀಡಬೇಕು ಎಂಬುದರ ಬಗ್ಗೆ ತಿಳಿಸಿಕೊಡುವುದಕ್ಕಾಗಿಯೇ ಮಾಧ್ಯಮ ಕಾರ್ಯಾಗಾರ ಆಯೋಜಿ ಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಎನ್‌.ರವಿಕುಮಾರ್‌, ಬಿಜೆಪಿ ರಾಜ್ಯ ವಕ್ತಾರ ಗೋ.ಮಧುಸೂದನ್‌, ಶಾಸಕ ಅರವಿಂದ ಲಿಂಬಾವಳಿ ಇದ್ದರು.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.