
ನಾಳೆಯಿಂದ ಮೊದಲ ಮತ ಕದನ ಶುರು
Team Udayavani, Feb 3, 2017, 3:45 AM IST

– ಪಂಜಾಬ್ನ 117, ಗೋವಾದ 40 ಕ್ಷೇತ್ರಗಳಿಗೆ ಫೆ.4ರಂದು ಚುನಾವಣೆ
– ಬಿಜೆಪಿಗೆ ಸತ್ವಪರೀಕ್ಷೆ, ಕೈಗೆ ಅಗ್ನಿಪರೀಕ್ಷೆ, ಆಪ್ಗೆ ಮೊದಲ ಪರೀಕ್ಷೆ
ನವದೆಹಲಿ: ಐದು ರಾಜ್ಯಗಳ ಪೈಕಿ ಪಂಜಾಬ್ ಮತ್ತು ಗೋವಾ ವಿಧಾನಸಭೆಗೆ ಫೆ.4ರಂದು ಮತದಾನ ನಡೆಯಲಿದೆ. ಈ ಮೂಲಕ ಒಂದೂವರೆ ತಿಂಗಳ ಮತದಾನ ಪ್ರಕ್ರಿಯೆ ಶುರುವಾಗಲಿದೆ. ಅದಕ್ಕೆ ಪೂರಕವಾಗಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಆಡಳಿತ ರೂಢ ಬಿಜೆಪಿಗೆ ನೋಟು ಅಪನಗದೀಕರಣದ ಬಳಿಕ ಎರಡು ಪುಟ್ಟ ರಾಜ್ಯಗಳಲ್ಲಿ ಸತ್ವಪರೀಕ್ಷೆ. ಅತ್ತ ಕಾಂಗ್ರೆಸ್ಗೆ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಚುನಾವಣೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿಗೆ ಅಗ್ನಿ ಸವಾಲಾಗಿದ್ದರೆ, ಎರಡೂ ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷ ಮೊದಲ ಬಾರಿಗೆ ಸ್ಪರ್ಧಿಸುತ್ತಿದೆ.
ಮೊದಲ ಹಂತದಲ್ಲಿ ಪಂಜಾಬ್ನ 117, ಗೋವಾದ 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟಿÉ, ಸ್ಮತಿ ಇರಾನಿ, ಮನೋಹರ್ ಪರ್ರಿಕರ್ ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಚಾರ ಮಾಡಿದ್ದಾರೆ. ಹತ್ತಿರ ಒಂದು ದಶಕದಿಂದ ಪಂಜಾಬ್ನಲ್ಲಿ ಅಕಾಲಿ ದಳದ ಜತೆಗೆ ಬಿಜೆಪಿಯ ಮೈತ್ರಿ ಸರ್ಕಾರವಿದ್ದು, ಡ್ರಗ್ ಮಾಫಿಯಾವನ್ನೇ ಸರ್ಕಾರದ ವೈಫಲ್ಯವೆಂದು ಬಿಂಬಿಸುತ್ತಿರುವ ಆಪ್ ಇಲ್ಲಿ ಅಧಿಕಾರದ ಮೇಲೆ ಕಣ್ಣಿಟ್ಟಿದೆ. ಸಿಎಂ ಅಮರಿಂದರ್ ಸಿಂಗ್ ಜೊತೆಗೆ ಬಿಜೆಪಿಯ ಸಿದ್ದು ಸೇರ್ಪಡೆಯೂ ಕೈಪಾಳಯದಲ್ಲಿ ಕೊಂಚ ಬಲ ಹೆಚ್ಚಿಸಿದೆ.
ಇತ್ತ ಗೋವಾದಲ್ಲಿ ಸಿಎಂ ಲಕ್ಷ್ಮೀಕಾಂತ್ ಪರ್ಶೇಕರ್ ಬದಲಾಗಿ ಮನೋಹರ್ ಪರ್ರಿಕರ್ ಅನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿರುವ ಬಿಜೆಪಿಯ ದ್ವಂದ್ವ ನಿಲುವನ್ನು ಕಾಂಗ್ರೆಸ್- ಆಪ್ ಸದುಪಯೋಗ ಪಡಿಸಿಕೊಳ್ಳಲು ಮುಂದಾಗಿವೆ. ಆರೆಸ್ಸೆಸ್ ಮುಖ ಪರ್ಶೇಕರ್ ಅವರನ್ನು ಪಕ್ಕಕ್ಕಿಟ್ಟು ಜನಪ್ರಿಯ ಮುಖ ಆರಿಸಿಕೊಳ್ಳುತ್ತಿರುವ ಬಿಜೆಪಿಯ ನಿಲುವು ಪಕ್ಷದಲ್ಲಿಯೇ ಬಿರುಕು ಮೂಡಿಸಿದರೂ ಅಚ್ಚರಿಯಿಲ್ಲ. ಕಾಂಗ್ರೆಸ್ ಪರ ರಾಹುಲ್ ಗಾಂಧಿ, ಆಪ್ ಪರ ಅರವಿಂದ ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಅವರ ಪ್ರಚಾರದಿಂದ ಗೋವಾದಲ್ಲಿ ರಾಜಕೀಯ ನಶೆ ಉದ್ದೀಪಿಸಿತ್ತು.
ಕೇಜ್ರಿ ವಿರುದ್ಧ ರಾಹುಲ್ ವಾಗ್ಧಾಳಿ
ಪಂಜಾಬ್ನ ಸಂಗ್ರೂರ್ನಲ್ಲಿ ಕೊನೆಯ ದಿನದ ಪ್ರಚಾರ ಭಾಷಣ ಮಾಡಿದ ರಾಹುಲ್ ಗಾಂಧಿ, ಮೂರು ದಿನದ ಹಿಂದೆ ನಡೆದ ಮೌರ್ ಮಾಂಡಿ ಕಾರು ಸ್ಫೋಟವನ್ನು ಪುನಃ ನೆನಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹರ್ಮಿಂದರ್ ಸಿಂಗ್ ಜಸ್ಸಿ ಪ್ರಚಾರ ಸಭೆ ಮುಗಿದ ಕೂಡಲೇ ಈ ಸ್ಫೋಟವಾಗಿತ್ತು. “ಪಂಜಾಬಿನ ಶಾಂತಿ ಕದಡು¤ತಿರುವ ಶಕ್ತಿಗಳ ಪರ ಆಪ್ನ ಅರವಿಂದ್ ಕೇಜ್ರಿವಾಲ್ ಧ್ವನಿ ಎತ್ತುತ್ತಿದ್ದಾರೆ’ ಎಂದು ನೇರ ಆರೋಪಿಸಿದರು. “ಆಪ್- ಬಿಜೆಪಿ ಎರಡೂ ಸೈದ್ಧಾಂತಿಕವಾಗಿ ಅತಿರೇಕ ಹೊಂದಿರುವಂಥವು. ಇಂಥ ನಾಯಕರಿಂದಲೇ ಭಯಗ್ರಸ್ಥ ವಾತಾವರಣದಲ್ಲಿ ಪಂಜಾಬಿಗರು ಬದುಕುವಂತಾಗಿದೆ. ಇಲ್ಲಿನವರ ಉದ್ಯೋಗಗಳನ್ನು ಪಕ್ಕದ ಜಾರ್ಖಂಡ್, ಚತ್ತೀಸ್ಗಢ್ ಮಂದಿ ಕಸಿಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳು ನಿವಾರಣೆ ಆಗಲಿವೆ’ ಎಂದರು.
ಚುನಾವಣೆ ಬಂದಾಗ ಬಿಜೆಪಿಗೆ ರಾಮ ಜಪ: ಕಾಂಗ್ರೆಸ್ ಟೀಕೆ
“ಬಿಜೆಪಿ ಚುನಾವಣೆ ವೇಳೆ ಮಾತ್ರವೆ ಏಕೆ ರಾಮ ಮಂದಿರ ನಿರ್ಮಾಣವನ್ನು ಪ್ರಸ್ತಾಪಿಸುತ್ತದೆ? ಅಧಿಕಾರ ಹಿಡಿದ ಈ ಎರಡೂವರೆ ವರ್ಷದಲ್ಲಿ ಯಾಕೆ ಅವರಿಗೆ ರಾಮ ನೆನಪಾಗಲಿಲ್ಲ?’ ಕಾಂಗ್ರೆಸ್ ನೇತಾರ ಪ್ರದೀಪ್ ಮಾಥುರ್ ಹೀಗೊಂದು ಪ್ರಶ್ನೆ ಎಸೆದಿದ್ದಾರೆ. ಮಥುರಾ ಕ್ಷೇತ್ರದ ಅಭ್ಯರ್ಥಿ ಆಗಿರುವ ಮಾಥುರ್, “ಬಿಜೆಪಿಗೆ ರಾಮಮಂದಿರ ವಿವಾದ ಸದಾ ಜೀವಂತ ವಸ್ತುವಾಗಿರಬೇಕು. ಅದಕ್ಕೆ ತಾರ್ಕಿಕ ಅಂತ್ಯ ಕೊಡಲು ಅವರಿಗೆ ಮನಸ್ಸಿಲ್ಲ’ ಎಂದು ಕುಟುಕಿದ್ದಾರೆ.
ಅಸ್ವಸ್ಥರಾದರೂ ಬಾದಲ್ ಪ್ರಚಾರ
ನಿರಂತರ ಚುನಾವಣಾ ಪ್ರಚಾರದಿಂದಾಗಿ ಪಂಜಾಬ್ನ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅಸ್ವಸ್ಥರಾಗಿದ್ದರೂ, ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದಾರೆ. ವೈದ್ಯ ತಂಡ ಬಾದಲ್ ಅವರನ್ನು ಪರೀಕ್ಷಿಸಿ, ವಿಶ್ರಾಂತಿ ತೆಗೆದುಕೊಳ್ಳಲು ಹೇಳಿದ್ದರೂ ಅದನ್ನು ಅವರು ನಿರ್ಲಕ್ಷಿಸಿದ್ದಾರೆ. ಶಿರೋಮಣಿ ಅಕಾಲ ದಳದ ಅಭ್ಯರ್ಥಿಗಳ ಪರ ಸಮ್ರಾಲಾ, ಶಾರ್ದುಲ್ಗಢ್ ಮತ್ತು ಸುನಮ್ನಲ್ಲಿ ಪಾಲ್ಗೊಳ್ಳುವುದಾಗಿ 89 ವರ್ಷದ ಬಾದಲ್ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.