ದಡಾರ-ರುಬೆಲ್ಲಾ ಚುಚ್ಚುಮದ್ದು ಕೊಡಿಸಿ
Team Udayavani, Feb 4, 2017, 12:38 PM IST
ದಾವಣಗೆರೆ: ದಡಾರ- ರುಬೆಲ್ಲಾ ಕಾಯಿಲೆ ತಡೆಗಟ್ಟಲು ಜಿಲ್ಲಾದ್ಯಂತ ಫೆ.7ರಿಂದ 28ರ ವರೆಗೆ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 9ರಿಂದ 15 ವರ್ಷದೊಳಗಿನ ಮಕ್ಕಳಿಗೆ ಈ ಚುಚ್ಚುಮದ್ದು ಹಾಕಿಸಬೇಕೆಂದು ಪೋಷಕರಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಕೋರಿದ್ದಾರೆ.
ತಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ವೈರಸ್ನಿಂದ ಹರಡುವ ದಡಾರ- ರುಬೆಲ್ಲಾ ನಮ್ಮಲ್ಲಿ ಹೆಚ್ಚಾಗಿ ಕಾಡುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ನಮ್ಮ ದೇಶದಲ್ಲಿ ಶೇ.30ರಷ್ಟು ಮಕ್ಕಳಲ್ಲಿ ಈ ಕಾಯಿಲೆ ಇದೆ.
ಅಂಕಿ ಅಂಶಗಳ ಪ್ರಕಾರ ಇದುವರೆಗೆ 4.92ಲಕ್ಷ ಮಕ್ಕಳು ಈ ಕಾಯಿಲೆಗಳಿಂದ ಅಸುನೀಗಿದ್ದಾರೆ. ಇದೊಂದು ಆತಂಕಕಾರಿ ಬೆಳವಣಿಗೆ. ಈ ವೈರಸ್ ತಡೆಗೆ ಸರ್ಕಾರ ಸೂಕ್ತ ಕ್ರಮದ ಮೂಲಕ ಭಾರತವನ್ನು ದಡಾರ-ರುಬೆಲ್ಲಾ ಕಾಯಿಲೆಮುಕ್ತ ದೇಶವನ್ನಾಗಿಸಲು ಮುಂದಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ದೇಶಾದ್ಯಂತ ಈ ಲಸಿಕಾ ಅಭಿಯಾನ ಆಯೋಜಿಸಿದೆ ಎಂದು ಅವರು ಮಾಹಿತಿ ನೀಡಿದರು.
ದಡಾರ ಕಾಯಿಲೆಯು ನ್ಯೂಮೋನಿಯಾ, ಅತಿಸಾರ ಭೇದಿಯಿಂದಾಗಿ ಜೀವಕ್ಕೆ ಅಪಾಯ ತಂದೊಡ್ಡಿದ್ದರೆ, ರುಬೆಲ್ಲಾ ಹುಟ್ಟುವ ಮಗುವಿಗೆ ಕುರುಡು, ಮಾನಸಿಕ ಅಸ್ವಸ್ಥತೆ, ಕಿವುಡುತನ, ಹೃದಯ ಸಂಬಂಧಿ ಸಮಸ್ಯೆಗೆ ಕಾರಣವಾಗುತ್ತದೆ.ಜೊತೆಗೆ ನವಜಾತ ಶಿಶುಮರಣ ಹಾಗೂ ವಿಕಲತೆ ಉಂಟು ಮಾಡುತ್ತದೆ.
ಇದು ಮಾರಾಣಾಂತಿಕ ಕಾಯಿಲೆಯಾಗಿದೆ ಎಂದು ಅವರು ತಿಳಿಸಿದರು. ಮೀಸೆಲ್ಸ್ -ರುಬೆಲ್ಲಾ ಎಂಬ ಲಸಿಕೆ ಈ ಕಾಯಿಲೆ ಎದುರಿಸಲು ಬೇಕಾದ ರೋಗನಿರೋಧಕ ಶಕ್ತಿ ತುಂಬುತ್ತದೆ. ಈ ಲಸಿಕೆ ನೀಡುವುದರಿಂದ ಶೇ.95 ಕ್ಕಿಂತ ಹೆಚ್ಚು ಮಕ್ಕಳಿಗೆ ಜೀವನ ಪರ್ಯಂತ ರಕ್ಷಣೆ ಮಾಡಬಹುದಾಗಿದೆ.
ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ 9 ತಿಂಗಳಿನಿಂದ 15 ವರ್ಷ ವಯಸ್ಸಿನ 4.86 ಲಕ್ಷ ಮಕ್ಕಳಿದ್ದು, ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ನೀಡಬೇಕು ಎಂಬ ಉದ್ದೇಶದಿಂದ 3,554 ಲಸಿಕಾ ಕೇಂದ್ರ ತೆರೆಯಲಾಗಿದೆ.
ಈ ಕಾರ್ಯಕ್ಕಾಗಿ 50 ವಿಶೇಷ ತಂಡ ನಿಯೋಜಿಸಲಾಗಿದೆ. 1609 ಒಟ್ಟು ಲಸಿಕೆ ಹಾಕುವವರನ್ನು ನೇಮಿಸಲಾಗಿದೆ. ಇವರಲ್ಲದೆ 3,230 ಮಂದಿ ಆಶಾ, ಅಂಗನವಾಡಿ ಕಾರ್ಯಕರ್ತರು, ಸ್ವಯಂ ಸೇವಕರು ಕಾರ್ಯನಿರ್ವಹಿಸಲಿದ್ದಾರೆ. ಇಡೀ ಲಸಿಕಾ ಕಾರ್ಯಕ್ರಮದ ಮೇಲ್ವಿಚಾರಣೆಗೆ 369 ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಧಿಧೀಕ್ಷಕಿ ಡಾ| ನೀಲಾಂಬಿಕೆ, ಜಿಲ್ಲಾ ಆರೋಗ್ಯ ಅಧಿಕಾರಿ ತ್ರಿಪುಲಾಂಭ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್.ಎಂ. ಪ್ರೇಮಾ, ಲಯನ್ಸ್ ಅಧ್ಯಕ್ಷ ಡಾ| ನಾಗಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
America: 1951ರಲ್ಲಿ ಕಿಡ್ನಾಪ್ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!
Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.