ಸೂರ್ಯ ಸಕಲ ಸವಲತ್ತು ಕೊಡುವಂತಹ ದೇವರು


Team Udayavani, Feb 6, 2017, 12:24 PM IST

dvg1.jpg

ದಾವಣಗೆರೆ: ಸೂರ್ಯ ಸಕಲ ಸವಲತ್ತು ಕೊಡುವಂತಹ ದೇವರು. ಹಾಗಾಗಿ ಪ್ರತಿಯೊಬ್ಬರು ಪ್ರತಿ ನಿತ್ಯ ಸೂರ್ಯ ನಮಸ್ಕಾರ ಮಾಡಬೇಕು ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ರಥಸಪ್ತಮಿ ಅಂಗವಾಗಿ ಭಾನುವಾರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಾಗನೂರು ಬಸಪ್ಪ ಮೈದಾನದಲ್ಲಿ ಏರ್ಪಡಿಸಿದ್ದ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೂರ್ಯನೇ ಇಲ್ಲದೇ ಹೋದರೆ ಎಲ್ಲಾ ಜೀವಿಗಳು ಕತ್ತಲಲ್ಲೇ ಇರಬೇಕಾಗುತ್ತಿತ್ತು. ಸೂರ್ಯ ಇಡೀ ಜಗತ್ತಿಗೆ ಬೆಳಕನ್ನು ಹಾಗೂ ಸಕಲ ಸವಲತ್ತು ಕೊಡುವಂತಹ ದೇವರು ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರು ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎನ್ನುವುದಾದರೆ ಪ್ರತಿ ದಿನ ಯೋಗ, ಪ್ರಾಣಾಯಾಮ, ಸೂರ್ಯ ನಮಸ್ಕಾರ ಮಾಡಬೇಕು. ಹಣ, ಸಂಪತ್ತು, ಹೆಂಡತಿ, ಮಕ್ಕಳು ಎಲ್ಲ ಇದ್ದರೂ ಆರೋಗ್ಯವೇ ಇರದಿದ್ದರೆ ಏನು ಮಾಡಲಿಕ್ಕೆ ಆಗುವುದಿಲ್ಲ.

ಹಾಗಾಗಿ ಆರೋಗ್ಯವನ್ನ ಚೆನ್ನಾಗಿ ಇಟ್ಟುಕೊಳ್ಳಬೇಕು. ಅದಕ್ಕಾಗಿ ಯೋಗ, ಪ್ರಾಣಾಯಾಮಕ್ಕೆ ಗಮನ ನೀಡಬೇಕು ಎಂದು  ತಿಳಿಸಿದರು. ನಾವೆಲ್ಲರೂ 100 ವರ್ಷ ಬದುಕುವ ಛಲ, ಸಂಕಲ್ಪ ಮಾಡಬೇಕು. ಒಂದೇ ಕಡೆ ಇರುವಂತಹ ಮರ ನೂರಾರು ವರ್ಷ ಬಾಳುವಂತಹ ಚಲನವಲನತೆಯನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿ ದಿನ 10 ನಿಮಿಷ ಪ್ರಾಣಾಯಾಮ, 1 ಗಂಟೆ ಯೋಗ ಮಾಡುವ ಮುಖೇನ ಅಂತಹ ಚಲನವಲನವಂತರಾಗಬೇಕು ಎಂದು ತಿಳಿಸಿದರು. 

ಜಾತಿ, ಮತ, ಪಂಥ ಯಾವುದೇ ಭೇದವೇ ಇಲ್ಲದಂತಹ ಯೋಗ ಭಾರತೀಯರ ಹೆಮ್ಮೆ. ಅಂತಹ ಯೋಗದಿಂದ ಸುಂದರ, ಶ್ರೀಮಂತ ಬದುಕನ್ನು ನಮ್ಮದಾಗಿಸಿಕೊಳ್ಳಬೇಕು. ಯೋಗವನ್ನ ಕ್ಷಣಕ್ಕೆ ಅಲ್ಲದೆ ಜೀವನ ವಿಧಾನ, ಮಾರ್ಗವನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಯಾರ ಮುಖ ಪ್ರಸನ್ನತೆಯಿಂದ ಕೂಡಿರುತ್ತದೆಯೋ ಅವರೇ ನಿಜವಾದ ಯೋಗಿಗಳು. ಅಂತಹ ಯೋಗಿಗಳನ್ನುಸಿದ್ಧಪಡಿಸುವಂತಹ ಶಕ್ತಿ ಯೋಗಕ್ಕಿದೆ.  

ಪ್ರತಿಯೊಬ್ಬರು ಪ್ರತಿ ದಿನ ಯೋಗ ಮಾಡುವ ಮೂಲಕ ಯೋಗಿಗಳಾಗಬೇಕು ಎಂದು ತಿಳಿಸಿದರು. ರಾಜ ಯೋಗೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬಸವಾದಿ ಶರಣರ ವಚನಗಳಲ್ಲಿ ವೈಚಾರಿಕತೆ ಜೊತೆಗೆ ವೈಜ್ಞಾನಿಕ ಚಿಂತನೆ ಹೇಳಿದ್ದಾರೆ ಅದಕ್ಕೆ ಯೋಗವೇ ನಿದರ್ಶನ. ಸದೃಢ ದೇಹ, ಮನಸ್ಸಿಗೆ ಯೋಗ. ಬದುಕು ಸುಂದರವಾಗಿರಲು ಯೋಗ, ಧ್ಯಾನ, ಪ್ರಾಣಾಯಾಮ, ಸೂರ್ಯನಮಸ್ಕಾರ ಮಾಡಬೇಕು. ಭೌತಿಕಸಂಪತ್ತಾದ ಶರೀರವನ್ನು ಉತ್ತಮ ಸಾಧನೆಗೆ ಬಳಸಬೇಕು ಎಂದು ತಿಳಿಸಿದರು. 

ಇಂದಿನ ವಾತಾವರಣದಲ್ಲಿ ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಯಲ್ಲಿನ ವಿಕೃತಿಯನ್ನು ಅನುಸರಣೆ ಮಾಡುವ ಮೂಲಕ ದಾರಿ ತಪ್ಪುತ್ತಿದ್ದಾರೆ. ಗುರು ಹಿರೊಯರು ಅವರ ಮಾನಸಿಕ ದೌರ್ಬಲ್ಯವನ್ನ ತಿಳಿ ಹೇಳಿ, ಸರಿದಾರಿಗೆ ತರುವಂಥಾಗಬೇಕು ಎಂದು ತಿಳಿಸಿದರು. ಮೇಯರ್‌ ರೇಖಾ ನಾಗರಾಜ್‌, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಬಿ.ಸಿ. ಉಮಾಪತಿ, ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ರಾಜನಹಳ್ಳಿ ರಮಾನಂದ್‌, ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಮಂಜುನಾಥ್‌ ಇತರರು ಇದ್ದರು.  

ಟಾಪ್ ನ್ಯೂಸ್

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Oscars 2025: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Oscars: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

chaitra j achar joins Marnami movie team

Chaithra J Achar: ಮಾರ್ನಮಿ ತಂಡ ಸೇರಿದ ಚೈತ್ರಾ

Will discuss about Rayanna Chennamma Brigade: K.S.Eshwarappa

Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

ಪ್ಯಾಸೆಂಜರ್‌ ರೈಲು ಓಡಾಟ ಎಂದು? ರೈಲ್ವೆ ಹೋರಾಟಗಾರರಿಗೆ ಬೇಸರ…

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.