ಬೆಂಗಳೂರು-ಹಾಸನ ರೈಲು ಸಂಚಾರಕ್ಕೆ ದಿನಗಣನೆ
Team Udayavani, Feb 7, 2017, 3:45 AM IST
ಕುಣಿಗಲ್: ಬಹು ನಿರೀಕ್ಷಿತ ಬೆಂಗಳೂರು-ಹಾಸನ ನಡುವಿನ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರೈಲು ಸಂಚಾರಕ್ಕೆ ಪೂರ್ವಭಾವಿಯಾಗಿ ಕೇಂದ್ರ ರೈಲ್ವೆ ಇಲಾಖೆ ಸುರಕ್ಷತಾ ಆಯುಕ್ತ ಮನೋಹರ್ ನೇತೃತ್ವದಲ್ಲಿ ಫೆ.7ರಂದು ಕುಣಿಗಲ್, ತಿಪ್ಪಸಂದ್ರ ಮತ್ತು ಯಡಿಯೂರುಗಳಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್ಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಲಿದ್ದಾರೆ ಎಂದು ರೈಲ್ವೆ ಮೂಲಗಳು ಖಚಿತಪಡಿಸಿವೆ.
ಹೀಗಾಗಿ ಮಾಜಿ ಪ್ರಧಾನಿ ಅವರ ಕನಸಿನ ಕೂಸಾದ ಈ ಮಾರ್ಗದ ರೈಲು ಸಂಚಾರಕ್ಕೆ ಕೊನೆಗೂ ಕಾಲ ಕೂಡಿಬಂತಾಗಿದೆ. ಈಗಾಗಲೇ ತಿಪ್ಪಸಂದ್ರ, ಸೋಲೂರು, ಕುಣಿಗಲ್, ಯಡಿಯೂರು, ಬೆಳ್ಳೂರು ಕ್ರಾಸ್ ಮತ್ತಿತರ ಕಡೆ ಸ್ಟೇಷನ್ ಮಾಸ್ಟರ್ಗಳನ್ನು ನಿಯೋಜಿಸಲಾಗಿದೆ. ನಿಲ್ದಾಣಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಫೆ.11ರಂದು ಪರೀಶಿಲನಾ ವರದಿ ಸಲ್ಲಿಕೆಯಾದ ಬಳಿಕ ಫೆಬ್ರವರಿ ಅಂತ್ಯದಲ್ಲಿ ರೈಲು ಓಡಾಟ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ.
ಕೇಂದ್ರ ನೈರುತ್ಯ ರೈಲ್ವೆ ಇಲಾಖೆ ಅಧಿಕಾರಿಗಳ ಪರಿಶೀಲನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗುವ ನಿರೀಕ್ಷೆ ಇದೆ. ಕುಂಟುತ್ತಾ ಸಾಗಿದ್ದ ಯೋಜನೆ ಈಡೇರಲು 19 ವರ್ಷಗಳೇ ತೆಗೆದುಕೊಂಡಿದ್ದು ವಿಪರ್ಯಾಸ. ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಬೆಂಗಳೂರಿನಿಂದ ಹಾಸನ ಮಾರ್ಗದ ಮೂಲಕ ಮಂಗಳೂರಿಗೆ ತಲುಪಲು ಪ್ರಸ್ತಾವನೆ ಮುಂದಿಟ್ಟಿದ್ದರು. ಆದರೆ, ಸುದೀರ್ಘ ಕಾಲದ ಬಳಿಕ ಗೌಡರ ಕನಸು ನನಸಾಗುವ ಕಾಲ ಕೂಡಿ ಬರುತ್ತಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿದೆ.
ಶ್ರವಣ ಬೆಳಗೊಳದಿಂದ ಸೋಲೂರು ಬಳಿಯ ಮಾಗಡಿ ಗಡಿಯ ತಿಪ್ಪಸಂದ್ರವರೆಗೂ ಪ್ರಾಯೋಗಿಕವಾಗಿ 2-3 ಬಾರಿ ಇಂಜಿನ್ ಓಡಿಸಲಾಗಿದೆ. ಮಂಡ್ಯ ಜಿಲ್ಲೆಯ ಬಿ.ಜಿ.ನಗರದ ರೈಲ್ವೆ ನಿಲ್ದಾಣ, ಕುಣಿಗಲ್ ಬಳಿಯ ಯಡಿಯೂರು, ಕುಣಿಗಲ್ ಹಾಗೂ ಸೋಲೂರು ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿವೆ. ನೆಲಮಂಗಲ ಬಳಿಯ ಚಿಕ್ಕಬಾಣಾವರದವರೆಗೂ ರೈಲ್ವೆ ಸಂಚಾರ ನಡೆಯುತ್ತಿದೆ.
183ಕಿಮೀ ಉದ್ದದ ಈ ಮಾರ್ಗದಲ್ಲಿ ಬ್ರಾಡ್ ಗೇಜ್ ರೈಲುಗಳು ಓಡಾಡಲಿದ್ದು, ಗಂಟೆಗೆ 110ಕಿಮೀ ವೇಗದಲ್ಲಿ ಸಂಚರಿಸಲಿವೆ. ಈ ಮಾರ್ಗದುದ್ದಕ್ಕೂ ಮಾನವ ರಹಿತ ಹಾಗೂ ತಡೆ ರಹಿತ ರೈಲು ಸಂಚರಿಸಲಿವೆ. ಇದರಿಂದ ನೈರುತ್ಯ ರೈಲ್ವೆ ಮಾರ್ಗದ ಇತಿಹಾಸದಲ್ಲೇ ಮಾನವ ರಹಿತ ಲೆವೆಲ್ ಕ್ರಾಸಿಂಗ್ ಮಾರ್ಗ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ. ಕರ್ನಾಟಕದಲ್ಲೇ ಮೊದಲ ಬಾರಿಯ ಪ್ರಯತ್ನ ಇದಾಗಿದೆ.
ರೈಲು ಯೋಜನೆಗೆ 1110 ಕೋಟಿ ವ್ಯಯ
ಏಕಕಾಲಕ್ಕೆ ಕೊಂಕಣ ರೈಲು ಮಾರ್ಗವನ್ನು ಕಡಿಮೆ ಅವಧಿಯಲ್ಲಿ ಸಂಪರ್ಕಿಸಬಲ್ಲ ಈ ಮಾರ್ಗ ಕಳೆದ 19 ವರ್ಷಗಳಿಂದಲೂ ಒಂದಲ್ಲ ಒಂದು ವಿಘ್ನಗಳನ್ನು ಎದುರಿಸುತ್ತಲೇ ಬರುತ್ತಿತ್ತು. ಸೋಲೂರು ಬಳಿ 630 ಮೀಟರ್ ಸುರಂಗ ಮಾರ್ಗ ಕೊರೆಯುವ ಕೆಲಸ ಪೂರ್ಣಗೊಂಡಿದೆ. ಬಜೆಟ್ನಲ್ಲಿ ನಿಗಧಿಪಡಿಸಿದ್ದ ಮೊತ್ತಕ್ಕಿಂತ ಸುಮಾರು 1110ಕೋಟಿ ರೂಗಳನ್ನು ಈವರೆಗೂ ವ್ಯಯಿಸಲಾಗಿದೆ.
– ಎಸ್.ಎನ್.ನರಸಿಂಹಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.