ಬೆಂಗಳೂರು-ಹಾಸನ ರೈಲು ಮಾರ್ಗ ಪರಿಶೀಲನೆ


Team Udayavani, Feb 7, 2017, 12:25 PM IST

banh-hassan-railway.jpg

ಕುಣಿಗಲ್‌: ಬಹು ನಿರೀಕ್ಷಿತ ಬೆಂಗಳೂರು-ಹಾಸನ ನಡುವಿನ ರೈಲು ಸಂಚಾರಕ್ಕೆ ದಿನಗಣನೆ ಆರಂಭ ವಾಗಿದೆ. ಈ ಸಂಬಂಧ ರೈಲು ಸಂಚಾರಕ್ಕೆ ಪೂರ್ವ ಭಾವಿಯಾಗಿ ಕೇಂದ್ರ ರೈಲ್ವೆ ಇಲಾಖೆ ಸುರಕ್ಷತಾ ಆಯುಕ್ತ ಮನೋಹರ್‌ ನೇತೃತ್ವದಲ್ಲಿ ಮಂಗಳವಾರ ಕುಣಿಗಲ್‌, ತಿಪ್ಪಸಂದ್ರ ಮತ್ತು ಯಡಿಯೂರುಗಳಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಲಿದ್ದಾರೆ ಎಂದು ರೈಲ್ವೆ ಮೂಲಗಳು ಖಚಿತಪಡಿಸಿವೆ.

ಹೀಗಾಗಿ ಮಾಜಿ ಪ್ರಧಾನಿ ಅವರ ಕನಸಿನ ಕೂಸಾದ ಈ ಮಾರ್ಗದ ರೈಲು ಸಂಚಾರಕ್ಕೆ ಕೊನೆಗೂ ಕಾಲ ಕೂಡಿಬಂತಾಗಿದೆ. ಈಗಾಗಲೇ ತಿಪ್ಪಸಂದ್ರ, ಸೋಲೂರು, ಕುಣಿಗಲ್‌, ಯಡಿಯೂರು, ಬೆಳ್ಳೂರು ಕ್ರಾಸ್‌ ಮತ್ತಿತರ ಕಡೆ ಸ್ಟೇಷನ್‌ ಮಾಸ್ಟರ್‌ಗಳನ್ನು ನಿಯೋಜಿಸಲಾಗಿದೆ. ನಿಲ್ದಾಣಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.  ಫೆ.11ರಂದು ಪರೀಶಿಲನಾ ವರದಿ ಸಲ್ಲಿಕೆಯಾದ ಬಳಿಕ ಫೆಬ್ರವರಿ ಅಂತ್ಯದಲ್ಲಿ ರೈಲು ಓಡಾಟ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ.

ಕೇಂದ್ರ ನೈರುತ್ಯ ರೈಲ್ವೆ ಇಲಾಖೆ ಅಧಿಕಾರಿಗಳ ಪರಿಶೀಲನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗುವ ನಿರೀಕ್ಷೆ ಇದೆ. ಕುಂಟುತ್ತಾ ಸಾಗಿದ್ದ ಯೋಜನೆ ಈಡೇರಲು 19 ವರ್ಷಗಳೇ ತೆಗೆದು ಕೊಂಡಿದ್ದು ವಿಪರ್ಯಾಸ.  ದೇವೇಗೌಡರು ಪ್ರಧಾನಿ ಯಾಗಿದ್ದ ವೇಳೆ ಬೆಂಗಳೂರಿನಿಂದ ಹಾಸನ ಮಾರ್ಗದ ಮೂಲಕ ಮಂಗಳೂರಿಗೆ ತಲುಪಲು ಪ್ರಸ್ತಾವನೆ ಮುಂದಿಟ್ಟಿದ್ದರು. ಆದರೆ, ಸುದೀರ್ಘ‌ ಕಾಲದ ಬಳಿಕ ಗೌಡರ ಕನಸು ನನಸಾಗುವ ಕಾಲ ಕೂಡಿ ಬರು ತ್ತಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿದೆ.

ರೈಲು ಯೋಜನೆಗೆ 1110 ಕೋಟಿ ವ್ಯಯ
ಏಕಕಾಲಕ್ಕೆ ಕೊಂಕಣ ರೈಲು ಮಾರ್ಗವನ್ನು ಕಡಿಮೆ ಅವಧಿಯಲ್ಲಿ ಸಂಪರ್ಕಿಸಬಲ್ಲ ಈ ಮಾರ್ಗ ಕಳೆದ 19 ವರ್ಷಗಳಿಂದಲೂ ಒಂದಲ್ಲ ಒಂದು ವಿಘ್ನಗಳನ್ನು ಎದುರಿಸುತ್ತಲೇ ಬರುತ್ತಿತ್ತು. ಸೋಲೂರು ಬಳಿ 630 ಮೀಟರ್‌ ಸುರಂಗ ಮಾರ್ಗ ಕೊರೆಯುವ ಕೆಲಸ ಪೂರ್ಣಗೊಂಡಿದೆ. ಬಜೆಟ್‌ನಲ್ಲಿ ನಿಗದಿಪಡಿಸಿದ್ದ ಮೊತ್ತಕ್ಕಿಂತ ಸುಮಾರು 1110ಕೋಟಿ ರೂಗಳನ್ನು ಈವರೆಗೂ ವ್ಯಯಿಸಲಾಗಿದೆ.

* ಎಸ್‌.ಎನ್‌.ನರಸಿಂಹಮೂರ್ತಿ

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.