ಕಾಟಾಚಾರಕ್ಕೆ ಸಭೆಗೆ ಬರುವ ಅಧಿಕಾರಿಗಳು


Team Udayavani, Feb 7, 2017, 12:50 PM IST

dvg2.jpg

ದಾವಣಗೆರೆ: ನಮ್ಮ ತಾಲೂಕಿನ ಅಧಿಕಾರಿಗಳಿಗೆ  ತಾಪಂ ಸದಸ್ಯರೆಂದರೆ ಗೌರವ ಇಲ್ಲದಂತಾಗಿದೆ. ಸಭೆಗೆ ಕಾಟಾಚಾರಕ್ಕೆ ಹಾಜರಾಗುತ್ತಾರೆ ಎಂದು ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ, ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಈ ಬಗ್ಗೆ ಪ್ರಸ್ತಾಪಿಸಿದ ಅವರು, ಎಲ್ಲಾ ಇಲಾಖೆ ಅಧಿಕಾರಿಗಳು ತಾಪಂ ಸದಸ್ಯರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ.

ಯಾವುದೇ ಕಾರ್ಯಕ್ರಮದ ಮಾಹಿತಿ ನೀಡುವುದಿಲ್ಲ. ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನವಾದಾಗ ಅಲ್ಲಿನ ಸದಸ್ಯರಿಗೆ ಮಾಹಿತಿಯೇ ಇರುವುದಿಲ್ಲ. ತೀರಾ ಅಸಡ್ಡೆಯಿಂದ ಅಧಿಕಾರಿಗಳು ವರ್ತಿಸುತ್ತಾರೆ ಎಂದರು. ಸಭೆಗೆ ಬರುವಾಗ ಯಾವ ಯೋಜನೆ, ಎಷ್ಟು ಅನುದಾನ ಎಂದಷ್ಟೇ ಹೇಳುತ್ತಾರೆ. ಕಾಮಗಾರಿ  ಎಲ್ಲಿ ನಡೆಯುತ್ತಿದೆ? ಕಾಮಗಾರಿಯ ಪ್ರಗತಿ ಏನು? ಗುಣಮಟ್ಟ ಹೇಗಿದೆ? ಎಂಬ ಯಾವುದೇ ಮಾಹಿತಿ ಕೊಡುವುದಿಲ್ಲ.

ಇಂತಹ ಸಭೆಯಿಂದ ನಮಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಬದಲಿಗೆ ಜನರಿಗಾಗಿ ಏನೂ ಮಾಡದ ಸ್ಥಿತಿ ನಿರ್ಮಾಣವಾಗುತ್ತದೆ. ಇತರೆ ತಾಲೂಕುಗಳಲ್ಲಿ ಇಂತಹ ಸ್ಥಿತಿ ಇಲ್ಲ. ನಾನು ಪತ್ರಿಕೆಗಳಲ್ಲಿ ಓದಿದಂತೆ ಅಕ್ಕಪಕ್ಕದ ತಾಲೂಕಿನ ಅಧಿಕಾರಿಗಳು ತಾಪಂ ಸದಸ್ಯರಿಗೆ ಸಂಪೂರ್ಣ ಮಾಹಿತಿ ನೀಡುತ್ತಾರೆ. ಸರ್ಕಾರಿ ಕಾರ್ಯಕ್ರಮಗಳಿಗೆ ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂದು ಅವರು ಹೇಳಿದರು.  

ಈ ವೇಳೆ ಮಧ್ಯ ಪ್ರವೇಶಿಸಿದ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಲ್‌.ಎಸ್‌. ಪ್ರಭುದೇವ್‌, ಜನಪ್ರತಿನಿಧಿಗಳ ಕಡೆಗಣನೆ ಕುರಿತು ಪದೇ ಪದೇ  ದೂರು ಕೇಳಿ ಬರುತ್ತಲೇ ಇವೆ. ಯಾವುದೇ ಕಾರ್ಯಕ್ರಮ ಆದಾಗಲೂ ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತನ್ನಿ. ಇನ್ನು ಮುಂದೆ ಜನಪ್ರತಿನಿಧಿಗಳನ್ನು ಆಹ್ವಾನಿಸದ ಅಧಿಕಾರಿಗೆ ನೋಟೀಸ್‌ ಜಾರಿ ಮಾಡಿ, ಮೇಲಾಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ಹೇಳುವ ಮೂಲಕ ಚರ್ಚೆಗೆ ಅಂತ್ಯ ಹಾಡಿದರು. 

ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಹಾಲಿ ಹಿಂಗಾರು ಹಂಗಾಮಿನಲ್ಲಿ ಶೇ.25ರಷ್ಟು ಮಾತ್ರ ಬಿತ್ತನೆ ಆಗಿದೆ. ಭದ್ರಾ ಜಲಾಶಯದಲ್ಲಿ ನೀರಿಲ್ಲದೇ ಇರುವುದರಿಂದ ಭತ್ತ ನಾಟಿ ಪ್ರಮಾಣ ಸಂಪೂರ್ಣ ನಿಂತಿದೆ. ಬೋರ್‌ವೆಲ್‌ ಇದ್ದವರು ಮಾತ್ರ ಭತ್ತ ನಾಟಿಮಾಡಿದ್ದಾರೆ. ಉಳಿದಂತೆ ದ್ವಿದಳ ಧಾನ್ಯ, ಗೋವಿನ ಜೋಳ ಇತರೆ ಬೆಳೆ ಬೆಳೆಯಲಾಗುತ್ತಿದೆ ಎಂದು ಇಲಾಖೆಯ ತಾಲೂಕು ಅಧಿಕಾರಿ ಉಮೇಶ್‌ ಸಭೆಗೆ ತಿಳಿಸಿದರು. 

ಶಿಕ್ಷಣ ಇಲಾಖೆಯ ಚರ್ಚೆ ವೇಳೆ ಉಪಾಧ್ಯಕ್ಷ ಕೆ.ಜಿ. ಪರಮೇಶ್ವರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಕೆ. ಅಶೋಕ್‌, ಶಿಕ್ಷಕರ ಕಾರ್ಯವೈಖರಿ ಬಗ್ಗೆ ಹರಿಹಾಯ್ದರು. ಸರ್ಕಾರಿ ಶಾಲಾ ಶಿಕ್ಷಕರು ಸರಿಯಾಗಿ ಕೆಲಸಮಾಡುತ್ತಿಲ್ಲ. ಖಾಸಗಿ ಶಾಲಾ ಶಿಕ್ಷಕರು ಕಡಿಮೆ ಸಂಬಳ ಪಡೆದರೂ ಉತ್ತಮವಾಗಿ ಪಾಠ ಮಾಡುತ್ತಾರೆ. ಆದರೆ, ಅವರಿಗಿಂತ ಹೆಚ್ಚು ಸಂಬಳ ತೆಗೆದುಕೊಳ್ಳುವ ಸರ್ಕಾರಿ ಶಿಕ್ಷಕರು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ.

ಅಧಿಕಾರಿಗಳು ಅವರ ವಿರುದ್ಧ ಕ್ರಮ ವಹಿಸುವುದಿಲ್ಲವೇಕೆ? ಎಂದು ಪ್ರಶ್ನಿಸಿದರು. ಅನೇಕ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ ಎಲ್‌ಸಿ ಪಾಸಾದವರು ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಶಿಕ್ಷಕರಿಂದ ಮಕ್ಕಳು ಏನು ಕಲಿಯಲು ಸಾಧ್ಯ. ಅನೇಕ ವಿದ್ಯಾರ್ಥಿಗಳು 8ನೇ ತರಗತಿ ಮುಗಿಸಿದರೂ ತಮ್ಮದೇ ಹೆಸರನ್ನು ಸರಿಯಾಗಿ ಬರೆಯಲು ಬರುವುದಿಲ್ಲ. ಮೊದಲೆಲ್ಲಾ ವಿಷಯ ನಿರೀಕ್ಷಕರು ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸುತ್ತಿದ್ದರು.

ಈಗ ಅದೆಲ್ಲಾ ಇಲ್ಲವಾಗಿದೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಇಒ ಪ್ರಭುದೇವ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಸವರಾಜಪ್ಪ, ಸಿದ್ಧಪ್ಪ, ಎಲ್ಲಾ ಕಡೆ ಅಂತಹ ಪರಿಸ್ಥಿತಿ ಇಲ್ಲ. ಅಲ್ಲದೆ, ಈಗ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಬದಲಾಗಿದೆ. ಮೊದಲಿನಂತಿಲ್ಲ. ಬಿಎ, ಬಿಇಡಿ ಮಾಡಿದ ನಂತರ ಟಿಇಟಿ ಪರೀಕ್ಷೆ ಪಾಸಾದವರು ಮಾತ್ರ ಶಾಲಾ ಶಿಕ್ಷಕರಾಗಿ ನೇಮಕಗೊಳ್ಳುತ್ತಾರೆ ಎಂದು ಸಭೆ ಗಮನಕ್ಕೆ ತಂದರು.

ಇದರಿಂದ ತೃಪ್ತರಾಗ ಪರಮೇಶ್ವರಪ್ಪ, ಈ ಹಿಂದೆ ನೇಮಕಗೊಂಡ ಶಿಕ್ಷಕರು ಮಾಡುವ ಪಾಠದ ಬಗ್ಗೆ ನಾನು ಹೇಳುತ್ತಿದ್ದೇನೆ. ಅಲ್ಲದೆ, ಈಗ ಬರುತ್ತಿರುವ ಹೊಸ ಶಿಕ್ಷಕರಲ್ಲಿ ಕಲಿಸುವ ಆಸಕ್ತಿ ಇಲ್ಲವಾಗಿದೆ ಎಂದು ಮತ್ತೆ ಜರಿದರು. ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

ಪ್ರಧಾನಿ ಮೋದಿ ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.