ಚಂಬಿನೊಂದಿಗೆ ಪ್ರತಿಭಟಿಸಿದ ಮಹಿಳೆಯರು
Team Udayavani, Feb 10, 2017, 12:26 PM IST
ದಾವಣಗೆರೆ: ಒಂದನೇ ವಾರ್ಡ್ ವ್ಯಾಪ್ತಿಯ ಅಶೋಕ ನಗರ, ನೇಕಾರ ಕಾಲೋನಿ, ಶ್ರೀರಾಮ ಬಡಾವಣೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಮಹಾನಗರಪಾಲಿಕೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರಪಾಲಿಕೆ ಎದುರು ಪ್ರತಿಭಟಿಸಿದರು.
1ನೇ ವಾರ್ಡ್ ವ್ಯಾಪ್ತಿಯ ಬಡಾವಣೆಯಲ್ಲಿ ನಾಗರಿಕರು ಹಲವು ವರ್ಷದಿಂದಲೂ ಕುಡಿಯುವ ನೀರು, ಒಳ ಚರಂಡಿ, ಬೀದಿದೀಪ ಒಳಗೊಂಡಂತೆ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಿತರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ದಾವಣಗೆರೆ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗಿ ಒಂದು ವರ್ಷ ಕಳೆದರೂ ಅಶೋಕ ನಗರ, ನೇಕಾರ ಕಾಲೋನಿ, ಶ್ರೀರಾಮ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಬಯಲು ಶೌಚಾಲಯವೇ ಅನಿವಾರ್ಯವಾಗಿದೆ. ಮಹಿಳೆಯರು, ವಯೋವೃದ್ಧರ ಪಾಡಂತೂ ಹೇಳ ತೀರದು. ಸ್ವತ್ಛ ಭಾರತ ಕಲ್ಪನೆ ಈ ಭಾಗದಲ್ಲಿ ಹಾಸ್ಯಾಸ್ಪದಂತಾಗಿದೆ. ಮಹಾನಗರಪಾಲಿಕೆಯ ಮೊದಲ ವಾರ್ಡ್ನಲ್ಲಿನ ದುಸ್ಥಿತಿ ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ದೂರಿದರು.
ಸಂಬಂಧಿತ ಜನಪ್ರತಿನಿಧಿಗಳು, ಆಯುಕ್ತರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಸೌಲಭ್ಯ ಒದಗಿಸಬೇಕು. ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ನಿವಾರಿಸಬೇಕು. ಇಲ್ಲದೇ ಹೋದಲ್ಲಿ ಕರ ನಿರಾಕರಣೆ ಒಳಗೊಂಡಂತೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್, ವಿ.ಎಸ್. ನರಸಿಂಹಮೂರ್ತಿ, ರಾಜನಹಳ್ಳಿ ಶಿವಕುಮಾರ್, ಎನ್. ರಾಜಶೇಖರ್, ಶಿವನಗೌಡ ಪಾಟೀಲ್, ಶಿವಪ್ರಕಾಶ್ ಅಣಬೇರು, ವಿಜಯಲಕ್ಷ್ಮಿ, ಪಾರ್ವತಮ್ಮ, ಜ್ಯೋತಿ, ಪಾರ್ವತಮ್ಮ, ದಾಕ್ಷಾಯಣಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.