ಕೆ.ಎಚ್‌. ಪಾಟೀಲರ ಕನಸು ನನಸಾಗಿಸಿ


Team Udayavani, Feb 10, 2017, 1:09 PM IST

hub7.jpg

ಹುಬ್ಬಳ್ಳಿ: ಶೋಷಣೆ ಮುಕ್ತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಸಾಲು ಸಾಲಾಗಿ ಸಂಸ್ಥೆಗಳನ್ನು ಕಟ್ಟಿ ಬೆಳೆಸಿರುವ ದಿ| ಕೆ.ಎಚ್‌. ಪಾಟೀಲರಿಗೆ ನುಡಿನಮನ ಬದಲು ಅವರ ಕನಸು ನನಸಾಗಿಸುವ ಕಾರ್ಯ ಮಾಡಬೇಕಾಗಿದೆ ಎಂದು ಮುಳ್ಳಳ್ಳಿ ಮಠದ ಶ್ರೀ ಚೆನ್ನವೀರ ಶಿವಯೋಗಿ ಸ್ವಾಮೀಜಿ ಹೇಳಿದರು. 

ಸಹಕಾರ ರಂಗದ ಭೀಷ್ಮ ದಿ| ಕೆ.ಎಚ್‌. ಪಾಟೀಲರ 25ನೇ ಪುಣ್ಯಸ್ಮರಣೆ ನಿಮಿತ್ತ ಗುರುವಾರ ಮಹಾನಗರ ಪಾಲಿಕೆ ಈಜುಕೊಳದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು. ಕೆ.ಎಚ್‌.ಪಾಟೀಲರು ನೇರ ನಡೆ-ನುಡಿಯ ಮೂಲಕ ಧಿಶ್ರೀಮಂತ ನಾಯಕರಾಗಿದ್ದರು.

ರೈತರ ಬಗ್ಗೆ ಉದಾತ್ತ ಚಿಂತನೆ ಮಾಡಿದ್ದ ಅವರು, ರೈತರು ಬೆಳೆದ ಬೆಳೆಗಳಿಗೆ ತಾವೇ ಬೆಲೆ ನಿರ್ಧರಿಸುವಂತಾದಾಗ ಮಾತ್ರ ರೈತರ ಕಲ್ಯಾಣ ಸಾಧ್ಯವೆಂದು ಪ್ರತಿಪಾದಿಸುತ್ತಿದ್ದರು. ಅಧಿಕಾರ ಇಲ್ಲದಿದ್ದಾಗಲೂ ಸಂಸ್ಥೆಗಳನ್ನು ಕಟ್ಟಿ, ಬೆಳೆಸಿ, ಬಾಳಿ ಬದುಕಿದವರು ಎಂದರು. 

ಕೆ.ಎಚ್‌. ಪಾಟೀಲರ ಪುತ್ರ, ಸಚಿವ ಎಚ್‌.ಕೆ.ಪಾಟೀಲ ಅಧಿಕಾರ ಇಲ್ಲದಿದ್ದಾಗ ಆರಂಭಿಸಿದ ಶುದ್ಧ ಕುಡಿಯುವ ನೀರಿನ ಆಂದೋಲನ ಇಂದು ರಾಜ್ಯಕ್ಕೆ ಅಲ್ಲ ದೇಶಾದ್ಯಂತ ಹರಡಿದೆ ಎಂದರು. ಮುಸ್ಲಿಂ ಧರ್ಮಗುರು ಮೌಲಾನಾ ಮಹ್ಮದ ಅಲಿ ಖಾಜಿ ಮಾತನಾಡಿ, ದಿ| ಕೆ.ಎಚ್‌.ಪಾಟೀಲ ಧೈರ್ಯವಂತ ನಾಯಕರಾಗಿದ್ದರು. 

ಜನಹಿತ ಬಂದಾಗ ಅವರು ಯಾರಿಗೂ ಹೆದರಲಿಲ್ಲ. ಅಂತಹ ನಾಯಕರು ಇಂದಿನ ಸಮಾಜಕ್ಕೆ ಬೇಕು ಎಂದರು. ಕ್ರಿಶ್ಚಿಯನ್‌ ಧರ್ಮಗುರು ರೆವರೆಂಡ ಫಾದರ ಎಸ್‌.ಎಚ್‌. ಉಳ್ಳಾಗಡ್ಡಿ ಮಾತನಾಡಿ, ಕೆ.ಎಚ್‌ .ಪಾಟೀಲರು ಸಮಾಜ ಸೇವೆಗೆ ಮಾದರಿಯಾಗಿದ್ದವರು ಎಂದು ಬಣ್ಣಿಸಿದರು. ಕೆ.ಎಚ್‌. ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಎ.ಎಂ. ಹಿಂಡಸಗೇರಿ ಅಧ್ಯಕ್ಷತೆ ವಹಿಸಿದ್ದರು. 

ಬಾಲವಿಕಾಸ ಅಕಾಡಮಿ ಅಧ್ಯಕ್ಷ ವೇದವ್ಯಾಸ ಕೌಲಗಿ, ಹುಡಾ ಅಧ್ಯಕ್ಷ ಅನ್ವರ ಮುಧೋಳ, ವಾಕಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿದರು. ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ವಸಂತ ಲದವಾ, ಅರವಿಂದ ಕಟಗಿ, ಪ್ರಕಾಶ ಘಾಟಗೆ, ಆರ್‌.ಕೆ.ಪಾಟೀಲ ಇನ್ನಿತರರು ಇದ್ದರು. ಎಚ್‌.ಎಫ್‌.ಜಕ್ಕಪ್ಪನವರ ಸ್ವಾಗತಿಸಿದರು. ಪ್ರೊ| ಎಸ್‌.ಬಿ. ಸಣಗೌಡರ ನಿರೂಪಿಸಿದರು. ಎಂ.ಎಂ. ಗೌಡರ ವಂದಿಸಿದರು.  

ಟಾಪ್ ನ್ಯೂಸ್

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.