ಸರ್ಕಾರಗಳೇ ರೈತರ ಸಮಸ್ಯೆಗೆ ಸ್ಪಂದಿಸಿ


Team Udayavani, Feb 10, 2017, 3:00 PM IST

gul4.jpg

ಮಾದನಹಿಪ್ಪರಗಿ: ರೈತರು ಪ್ರತಿವರ್ಷ ಒಂದಿಲ್ಲೊಂದು ಸಮಸ್ಯೆಗಳಿಂದ ಬಳಲುತ್ತಾರೆ. ಒಮ್ಮೆ ಬರಗಾಲದಿಂದ ತತ್ತರಿಸಿದರೆ ಇನ್ನೊಮ್ಮೆ ಬೆಳೆದಂತ ಬೆಳೆಗೆ ಬೆಂಬಲ ಬೆಲೆ ಸಿಗದೆ ಕಂಗಾಲುತ್ತಾರೆ. ಇಂತಹ ಸಂದರ್ಭದಲ್ಲಿ ಆಳುವ ಸರಕಾರಗಳು ರೈತರ ಬೆನ್ನಿಗೆ ನಿಂತರೆ, ರೈತ ದೇಶದ ಬೆನ್ನಲೆಬು ಆಗುತ್ತಾನೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಸರಕಾರಗಳದ್ದು ಎಂದು ಶಿವಲಿಂಗೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಲಿಂಗ ಸ್ವಾಮೀಜಿ ಹೇಳಿದರು.

ಗ್ರಾಮದಲ್ಲಿ ನಡೆದ ಹೈದ್ರಾಬಾದ ಕರ್ನಾಟಕ ರೈತ ಸಂಘದ ಹೋಬಳಿ ಘಟಕ ಹಾಗೂ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಪ್ರಕೃತಿ ರೈತರಿಗೆ ಸಾತ್‌ ನೀಡಿತ್ತಿಲ್ಲ. ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. ಕಿಸಾನ್‌ ಮತ್ತು ಜವಾನ್‌ ದೇಶದ ನಿಜವಾದ ದೇವರಾಗಿದ್ದು, ಸರಕಾರ ಸದಾ ಕಾಲ ಇವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು. 

ಸಮಾರಂಭ ಉದ್ಘಾಟಿಸಿದ ಹೈದ್ರಾಬಾದ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ರೈತರ ಬದುಕು ಇಂದು ಕೂಲಿ ಕಾರ್ಮಿಕರಿಗಿಂತ ಕಡೆಯಾಗಿದೆ. ಅವರ ನೋವಿಗೆ ಸ್ವಂದಿಸುವಲ್ಲಿ ಸರಕಾರಗಳು ಸಂಪೂರ್ಣ ವಿಫಲವಾಗಿದೆ. ರೈತರ ಸಾಲ ಮನ್ನಾ, ತೊಗರಿ ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್‌ ವರದಿ ಜಾರಿ ಮುಂತಾದ ಬೇಡಿಕೆಗಳನ್ನು ಇಟ್ಟಿಕೊಂಡು ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗವುದು.

ಅದಕ್ಕಾಗಿ ರೈತರು ಸಂಘಟಿತರಾಗವುದು ಅವಶ್ಯಕವಾಗಿದೆ ಎಂದರು. ರೈತ ಮುಖಂಡ ವಿಶ್ವನಾಥ ಸರಸಂಬಿ ಮಾತನಾಡಿ, ರೈತರು ಇಂದು ಸರಕಾರ ನೀಡುವ ಸೌಲತ್ತುಗಳನ್ನು ಬೇಡಿ ಪಡೆಯುವಂತಾಗಿದೆ. ನಾವು ಸಂಘಟಿತರಾಗಿ ಹೋರಾಟ ಮಾಡಿ ನಮಗೆ ಸಿಗಬೇಕಾದ ಹಕ್ಕುಗಳನ್ನು ಪಡೆಯೋಣ ಎಂದರು. ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಶ್ರೀಕಂಠ ದೇವರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಧುಮತಿ ದೇಶಮುಖ, ನಾಗಮ್ಮಾ ದೇಸಾಯಿ, ಬಿ.ಜಿ. ಪಾಟೀಲ ಮಾತನಾಡಿದರು.

ರೈತ ಮುಖಂಡರಾದ ಮಲ್ಲಯ್ನಾ ಸ್ವಾಮಿ ಮದಗುಣಕಿ, ಸಿದ್ದರಾಮ ಪಾಟೀಲ, ರಾಜಶೇಖರ ಹರಿಹರ, ಮಲ್ಲಿನಾಥ ಎಳಮೇಲಿ, ಅಡವಯ್ನಾ ಸ್ವಾಮಿ ಶರಣಪ್ಪಾ ಪಾಟೀಲ, ಸೀತಾರಾಮ ಜಮಾದಾರ, ರಾಜಕುಮಾರ ಪಾಟೀಲ, ಮಲ್ಲಿನಾಥ ವಿ.ಪರೇಣಿ, ಸಿದ್ದರಾಮ ಕಿರನಳ್ಳಿ, ಬಸವರಾಜ ಪಾಟೀಲ ಹಾಜರಿದ್ದರು. ಇದೇ ಸಂದರ್ಭದಲ್ಲಿ ಗ್ರಾಮ ಘಟಕಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಮಹಾಂತಯ್ನಾ ಸ್ವಾಮಿ ಸ್ವಾಗತಿಸಿದರು. ಕಲ್ಯಾಣಪ್ಪಾ ಗುಳಗಿ ನಿರೂಪಿಸಿದರು.  

ಟಾಪ್ ನ್ಯೂಸ್

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.