ಸಮಾಜದಲ್ಲಿ ಧಾರ್ಮಿಕ ಭಾವನೆ ಹೆಚ್ಚಲಿ
Team Udayavani, Feb 11, 2017, 12:16 PM IST
ಪಿರಿಯಾಪಟ್ಟಣ: ಆರೋಗ್ಯವಂತ ಸಮಾಜ ದಲ್ಲಿ ಜನರಲ್ಲಿ ಧಾರ್ಮಿಕ ಭಾವನೆಗಳು ಹೆಚ್ಚಾಗಬೇಕು ಎಂದು ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ವೆಂಕಟೇಶ್ ತಿಳಿಸಿದರು. ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಧರ್ಮದರ್ಶಿ ಮಂಡಳಿ ಸಂಯುಕ್ತವಾಗಿ 27 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಸಿದ್ದ ಮಲ್ಲಿಕಾರ್ಜುನಸ್ವಾಮಿ ಸಮೇತ ಭ್ರಮರಾಂಭ ಮತ್ತಿತರ ದೇವರ ರಥವನ್ನು ಅನಾವರಣ ಗೊಳಿಸಿ ನಂತರ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ರಥ ದುರಸ್ತಿ ಯಾಗದ ಬಗ್ಗೆ ಸಾರ್ವಜನಿಕರು ಹಾಗೂ ಮತ್ತಿತರ ಸಂಘಟನೆಗಳ ಪ್ರತಿ ಬಾರಿ ಪ್ರತಿಭಟನೆ ನಡೆಸುತ್ತಿವೆ. ಇದೀಗ ಭಕ್ತರ ಸಹಕಾರದಿಂದ ರಥ ನಿರ್ಮಾಣವಾಗಿರುವುದು ಸಾರ್ವ ಜನಿಕರಲ್ಲಿ ಇಂದಿಗೂ ಧಾರ್ಮಿಕ ಭಾವನೆ ಗಳು ಜಲ್ವಂತವಾಗಿವೆ ಎಂಬುದನ್ನು ತೋರ್ಪ ಡಿಸುತ್ತದೆ ಎಂದು ತಿಳಿಸಿದರು.
ನಂತರ ಅವರು ಬೆಟ್ಟದಪುರ ಗ್ರಾಮ ದಲ್ಲಿಯೇ ಮೂವರುವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿಗೆ ಹಾಗೂ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಚ್ಚುವರಿ ಕಟ್ಟಡಕ್ಕೆ ಗುದ್ದಲಿ ಪೂಜೆ ಮಾಡಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದೇವಸ್ಥನದ ಧರ್ಮದರ್ಶಿ ಮಂಡಳಿ ವತಿಯಿಂದ ಕೆ.ವೆಂಕಟೇಶ್ ಹಾಗೂ ಅವರ ಪತ್ನಿ ಭಾರತಿವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ರಥಕ್ಕೆ ಧನ ಸಹಾಯ ನೀಡಿದ ವಿವಿಧ ಸಾರ್ವಜನಿಕರನ್ನು ಕೂಡ ಸನ್ಮಾನಿಸಲಾಯಿತು.
3 ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ಪ್ರಥಮ ದರ್ಜೆ ಕಾಲೇಜು ನಡೆಯುತ್ತಿದ್ದು, ಈ ಕಟ್ಟಡ ನಿರ್ಮಾಣವಾಗುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ವಾಗಲಿದೆ. ನಮ್ಮದೆ ಸರ್ಕಾರ ರಾಜ್ಯದಲ್ಲಿ ಆಡಳಿತ ದಲ್ಲಿ ಇರುವುದರಿಂದ ಅಭಿವೃದ್ಧಿ ಗಾಗಿ ಅನುದಾನ ತಂದು ಮಾಡಲು ಸಹಕಾರಿ ಯಾಗಿದೆ. ಆದರೆ ನಮ್ಮ ವಿರೋಧಿಗಳು ತಾಲೂಕಿನಾದ್ಯಂತ ನೈತಿಕತೆ ಇಲ್ಲದೆ ನಾವು ಮಾಡುವ ಜನ ಪರ ಕಾರ್ಯಕ್ರಮಗಳನ್ನು ಮನಬಂದಂತೆ ದೂರುತ್ತಿರುವುದು ಬೇಸರದ ಸಂಗತಿ, ಇದಕ್ಕೆಲ್ಲ ತಕ್ಕ ಉತ್ತರವನ್ನು ಮತ ದಾರರು ನೀಡಲಿದ್ದಾರೆ ಎಂದು ತಿಳಿಸಿದರು.
ಇಂದಿನ ಚುನಾವಣೆಗಳಲ್ಲಿ ಹಣ ಹಾಗೂ ಜಾತಿ ಬಲ ಯಾರಿಗಿದೆಯೋ ಅಂತಹವರು ಜಯ ಸಾಧಿಸುವಂತಾಗಿದೆ, ಸಾಧನೆಗಳು ಲೆಕ್ಕಕ್ಕೆ ಬರುತ್ತಿಲ್ಲ. ನಾವು ತಾಲೂಕಿನಾದ್ಯಂತ ಮಾಡಿರುವ 25 ವರ್ಷಗಳ ಅಭಿವೃದ್ಧಿಯನ್ನು ಯಾವ ಜನ ಪ್ರತಿನಿಧಿಯು ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅವರು ಗ್ರಾಮದ ಎಪಿಎಂಸಿ ಆವರಣದಲ್ಲಿ ಮೇವು ಕೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಮಂಜುನಾಥ್, ತಾಪಂ ಅಧ್ಯಕ್ಷೆ ನಿರೂಪಾ ರಾಜೇಶ್, ಸದಸ್ಯರಾದ ಮಲ್ಲಿಕಾರ್ಜುನ, ಕುಂಜಪ್ಪ ಕಾರ್ನಾಡ್, ತಹಶೀಲ್ದಾರ್ ರಂಗರಾಜು, ತಪಂ ಮಾಜಿ ಅಧ್ಯಕ್ಷೆ ಸರಸ್ವತಿ, ಗ್ರಾಪಂ ಅಧ್ಯಕ್ಷೆ ಯಶೋಧಾ, ಮುಖಂಡರಾದ ಮಲ್ಲಯ್ಯ, ಪರಮೇಶ್, ಪಪಂ ಸದಸ್ಯ ಸುರೇಶ್, ಡಿ.ಟಿ.ಗಳಾದ ಕುಬೇರ, ಸಣ್ಣರಾಮಪ್ಪ, ಆರ್ಐ ರಮೇಶ್, ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ. ಚಾಮರಾಜ್, ಕೆ. ಹೊಲದಪ್ಪ, ಅನಿತಾ, ಎಇಇಗಳಾದ ಪ್ರಕಾಶ್, ರಘುನಂದನ್, ಜೆಇ ವರುಣ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.