ಅಲ್ಪಸಂಖ್ಯಾತ ಸ್ಥಾನಮಾನ-ಮಂಡಳಿ ರಚಿಸಲು ಆಗ್ರಹ
Team Udayavani, Feb 11, 2017, 12:34 PM IST
ದಾವಣಗೆರೆ: ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿಗಾಗಿ ಅಲ್ಪಸಂಖ್ಯಾತ ಸ್ಥಾನಮಾನ, ಅಭಿವೃದ್ಧಿ ಮಂಡಳಿ ರಚನೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ವೀರಶೈವ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ವೀರಶೈವ ಲಿಂಗಾಯತ ಸಮಾಜವನ್ನು ಎಲ್ಲಾ ಸರ್ಕಾರ ಕಡೆಗಣಿಸುತ್ತಾ ಬಂದ ಪರಿಣಾಮ ಸಮಾಜ ಹಲವಾರು ಸಾಮಾಜಿಕ ಸೌಲಭ್ಯದಿಂದ ವಂಚಿತವಾಗುತ್ತಿದೆ. ವೀರಶೈವ ಲಿಂಗಾಯತ ಸಮಾಜ ಎಂದರೆ ಮುಂದುವರೆದವರು, ಆರ್ಥಿಕವಾಗಿ ಸದೃಢರು, ಉಳ್ಳವರು ಎಂಬ ಭಾವನೆ ಇದೆ. ಆದರೆ, ಭಾವನೆಗೂ ವಾಸ್ತವಕ್ಕೂ ಭಾರೀ ವ್ಯತ್ಯಾಸ ಇದೆ. ಇಂದಿಗೂ ವೀರಶೈವ ಲಿಂಗಾಯತ ಸಮಾಜದ ಅನೇಕ ಉಪ ಪಂಗಡಗಳು ಅತ್ಯಂತ ಬಡತನದಲ್ಲಿದ್ದಾರೆ.
ಶೈಕ್ಷಣಿಕ, ಆರ್ಥಿಕ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದ್ದಾರೆ. ಒಂದು ರೀತಿಯ ಅನಾಥಪ್ರಜ್ಞೆಯಲ್ಲಿದ್ದಾರೆ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿಯಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಪ್ರಾರಂಭಿಸುವ ಮೂಲಕ ಸರ್ಕಾರ ಸಮಾಜದ ನೆರವಿಗೆ ಧಾವಿಸಬೇಕು.
ಸಮಾಜದ ನೌಕರರ ಮೇಲೆ ನಡೆಯುತ್ತಿರುವ ಕಿರುಕುಳ, ದೌರ್ಜನ್ಯಕ್ಕೆ ಸರ್ಕಾರದ ಪರೋಕ್ಷ ಬೆಂಬಲ ಇದೆಯೇ ಎಂಬ ವಾತಾವರಣ ಕಂಡು ಬರುತ್ತಿದೆ. ಸರ್ಕಾರ ಕೂಡಲೇ ಕಿರುಕುಳ, ದೌರ್ಜನ್ಯ ನಿಲ್ಲಿಸುವ ಮೂಲಕ ಸಮಾಜದ ನೌಕರರ ನೆರವಿಗೆ ಬರಬೇಕು. ಆಂಗ್ಲರ ವಿರುದ್ಧ ಹೋರಾಟ ನಡೆಸಿದ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ದೇಶದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಎಂದು ಘೋಷಿಸುವಂತೆ ರಾಜ್ಯ ಸಚಿವ ಸಂಪುಟ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.
ಕಿತ್ತೂರು ರಾಣಿ ಚನ್ನಮ್ಮನನ್ನು ಬಂಧನದಲ್ಲಿಟ್ಟಿದ್ದ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆ, ಗೃಹ ಕೈಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಸಮಾಜದ ಮಹಿಳಾ ಸಂಘಗಳಿಗೆ ಧನ ಸಹಾಯ, ನೇಮಕಾತಿ ಅರ್ಜಿ ಶುಲ್ಕದಲ್ಲಿ ರಿಯಾಯತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸಮಿತಿ ರಾಜ್ಯ ಅಧ್ಯಕ್ಷ ಡಿ.ವಿ. ಪ್ರಶಾಂತ್, ಜಿ. ಶಿವಯೋಗಪ್ಪ, ಉಮೇಶ್ ಕತ್ತಿ, ಶಂಕರಗೌಡ ಬಿರಾದಾರ್, ಟಿ.ವಿ. ಗಣೇಶ್, ಶಿವನಗೌಡ ಪಾಟೀಲ್, ಎಚ್.ಎನ್. ಜಗದೀಶ್, ಚ್. ಅಜ್ಜಪ್ಪ, ದಾಕ್ಷಾಯಣಮ್ಮ, ಬಸವರಾಜ್ ಬಾವಿ, ಶ್ರೀಕಾಂತ್, ಟಿಂಕರ್ ಮಂಜಣ್ಣ, ಮಂಜುನಾಥ್ ಕತ್ತಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.