ಕೆಲಸ ಮಾಡದವರ ಕಾಯಂ ಬೇಡ: ಮನವಿ
Team Udayavani, Feb 11, 2017, 12:41 PM IST
ದಾವಣಗೆರೆ: ಒಂದೇ ಒಂದು ದಿನವೂ ಕೆಲಸ ಮಾಡದೇ ಇದ್ದಂಥಹವರ ಕಾಯಮಾತಿಗೆ ಹಣ ಪಡೆದ ಕೆಲವು ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ನಿಗಾವಹಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಾನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದವರು ಶುಕ್ರವಾರ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಎಂ.ಆರ್. ವೆಂಕಟೇಶ್ಗೆ ಮನವಿ ಸಲ್ಲಿಸಿದರು.
ಹಲವಾರು ವರ್ಷದಿಂದ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕಾಯಮಾತಿಗೆ ಒತ್ತಾಯಿಸಿ ಸಂಘ ನಡೆಸಿದ ಸುಧೀರ್ಘ ಹೋರಾಟದ ಪರಿಣಾಮ ಸರ್ಕಾರ ಯಾವಾಗ ಕಾಯಂ ಪ್ರಕ್ರಿಯೆಗೆ ಮುಂದಾಯಿತೋ ಕೆಲವು ಸದಸ್ಯರು ಈಗಾಗಲೇ ಕೆಲಸ ಮಾಡುತ್ತಿರುವರನ್ನು ಕೆಲಸದಿಂದ ಬಿಡಿಸಿ, ಒಂದೇ ಒಂದು ದಿನವೂ ಕೆಲಸ ಮಾಡದೇ ಇದ್ದವರನ್ನು ಹೊರ ಗುತ್ತಿಗೆ ನೌಕರರ ಪಟ್ಟಿಯಲ್ಲಿ ಸೇರಿಸಲು ಅಧಿಕಾರಿಗಳ ಮೇಲೆ ಇನ್ನಿಲ್ಲದ ಒತ್ತಡ ಹೇರುತ್ತಿದ್ದಾರೆ.
ಕೆಲಸ ಖಾಯಂ ಮಾಡಿಸುವುದಾಗಿ 50 ಸಾವಿರದಿಂದ ಲಕ್ಷದವರೆಗೆ ಹಣ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷ ಎಲ್.ಎಂ. ಹನುಮಂತಪ್ಪ ಆಯೋಗದ ಅಧ್ಯಕ್ಷರ ಗಮನ ಸೆಳೆದರು. ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ 287 ಹೊರ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪೈಕಿ 86 ಜನರನ್ನು ಕೆಲಸದಿಂದ ಬಿಡಿಸಿ, ಅವರ ಜಾಗದಲ್ಲಿ ಬೇರೆಯವರನ್ನು ಸೇರಿಸುವ ಹುನ್ನಾರ ನಡೆಯುತ್ತಿದೆ. ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಇಂಥಹ ಪ್ರಕರಣಗಳ ಬಗ್ಗೆ ಗಮನ ಹರಿಸಿ, ಕೂಲಂಕುಷವಾಗಿ ಪರಿಶೀಲಿಸಿ, ತಡೆಗಟ್ಟಬೇಕು.
ಮೊದಲಿನಿಂದಲೂ ಕೆಲಸ ಮಾಡುತ್ತಿರುವರನ್ನ ಗುರುತಿಸಿ, ಕೆಲಸವನ್ನು ಕಾಯಂಗೊಳಿಸಬೇಕು. 5ನೇ ತಾರೀಖೀನೊಳಗೆ ವೇತನ, ಗುರುತಿನ ಚೀಟಿ, ಆಶ್ರಯಮನೆ, ಉಪಾಹಾರದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಘದ ಎಲ್.ಎಚ್. ಸಾಗರ್, ಬಿ. ಲೋಹಿತ್, ಎಂ. ಓಮೇಶ್, ಎಚ್. ರವಿವರ್ಧನ್, ಕೆ.ವಿ. ಚಂದ್ರಶೇಖರ್, ಅರವಿಂದ್ ಕುಮಾರ್, ಮೂರ್ತಿ, ಶಿವರಾಜ್, ಚೇತನ್, ನಿಖೀಲ್, ಮತ್ತೂರಮ್ಮ, ಮಂಜಮ್ಮ, ರೇಣುಕಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.