ಮೀಟರ್ ಬಡ್ಡಿ-ಮಟ್ಕಾ ದಂಧೆ ಕಡಿವಾಣಕ್ಕೆ ಕಟ್ಟುನಿಟ್ಟಿನ ಸೂಚನೆ
Team Udayavani, Feb 11, 2017, 12:57 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಮೀಟರ್ ಬಡ್ಡಿ, ಮಟ್ಕಾ ಸೇರಿದಂತೆ ಅನಧಿಕೃತ ದಂಧೆಗಳಿಗೆ ಕಡಿವಾಣ ಹಾಕಲು, ಅಂತಹ ದಂಧೆಯಲ್ಲಿ ಭಾಗಿಯಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜಿಲ್ಲಾ, ತಾಲೂಕುಗಳಲ್ಲಿ ಅಕ್ರಮ ವಹಿವಾಟುಗಳು ನಡೆಯುತ್ತಿರುವ ಬಗ್ಗೆ ಸಾಕಷ್ಟು ರುಗಳು ಕೇಳಿ ಬಂದಿವೆ. ಇದನ್ನು ಮಟ್ಟ ಹಾಕಲು ಸರಕಾರ ಮುಂದಾಗಿದೆ. ಮೀಟರ್ ಬಡ್ಡಿದಾರರಿಂದ ಸಾಲಗಾರರು ಶೋಷಣೆ, ದೌರ್ಜನ್ಯಕ್ಕೊಳಗಾಗಿರುವ ಬಗ್ಗೆ ದೃಢಪಟ್ಟರೆ ಅಂಥವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಮೀಟರ್ ಬಡ್ಡಿ, ಮಟ್ಕಾ ಸೇರಿದಂತೆ ಇತರೆ ಎಲ್ಲ ಅಕ್ರಮವಾದ, ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಮಾಡುವಂಥವರು ಯಾರೇ ಆಗಿರಲಿ ಅವರನ್ನು ಕಾನೂನು ಚೌಕಟ್ಟಿನೊಳಗೆ ತರಬೇಕು. ಅದನ್ನು ಸಮರ್ಪಕವಾಗಿ ನಿಭಾಯಿಸಲು ಇಲಾಖೆ ಅಧಿಕಾರಿಗಳು ಇಂತಹದರಲ್ಲಿ ಭಾಗಿಯಾಗಬಾರದು, ಉತ್ತೇಜನ ನೀಡಬಾರದೆಂದು ಸೂಚಿಸಲಾಗಿದೆ.
ಸಿಐಡಿ ವರದಿ ಬಂದ ನಂತರ ಕ್ರಮ: ಲಕ್ಷ್ಮೇಶ್ವರದಲ್ಲಿ ಪೊಲೀಸ್ ಠಾಣೆ ಮೇಲೆಯೇ ಸಾರ್ವಜನಿಕರು ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಅದರ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಬಾಹಿರ ಮರಳು ಮಾμಯಾ ಹತ್ತಿಕ್ಕಲು ಎಲ್ಲ ಅಗತ್ಯ ಪ್ರಯತ್ನ ತೆಗೆದುಕೊಳ್ಳಲಾಗುವುದು.
ಯಾರು ಇದಕ್ಕೆ ಪ್ರೋತ್ಸಾಹ, ಕೈವಾಡವಿದೆ ಅವರನ್ನು ಕಾನೂನು ಚೌಕಟ್ಟಿನಲ್ಲಿ ತರಲಾಗುವುದು. ಲಕ್ಷ್ಮೇಶ್ವರದಲ್ಲಿ ಈ ಘಟನೆ ನಡೆದಿದ್ದು ದುರದೃಷ್ಟಕರ. ಪೊಲೀಸ್ ಇಲಾಖೆಯಲ್ಲಿ ತಪ್ಪು ಆಗಿದ್ದರೆ ಅಂಥವರಿಗೆ ಶಿಕ್ಷೆ ಕೊಡಲು ವಿಧಿ ವಿಧಾನಗಳಿವೆ. ಅನುಪಮಾ ಶೆಣೈ ಪೊಲೀಸ್ ಇಲಾಖೆಯಲ್ಲಿ ಇಲ್ಲ. ಹೀಗಾಗಿ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದರು.
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡ ಕೊಲೆಗೆ ಸಂಬಂಧಿಸಿ ಪ್ರಾಥಮಿಕ ತನಿಖೆ ನಡೆದಿದೆ. ಅದರಲ್ಲಿ ಫಲಿತಾಂಶ ಬರಲಿ. ಎಲ್ಲವನ್ನೂ ಸಿಬಿಐಗೆ ವಹಿಸಲು ಆಗಲ್ಲ. ಸಚಿವರ ಮೇಲೆ ಅನೇಕ ಸಂದರ್ಭಗಳಲ್ಲಿ ಆರೋಪಗಳು ಬರುವುದು ಸಹಜ. ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಫಲಿತಾಂಶ ಸಿಗದಿದ್ದಾಗ ಸಿಬಿಐಗೆ ಆದೇಶಿಸುವ ಕುರಿತು ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್
Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ
Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್ಡಿಕೆ
Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.