ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮ
Team Udayavani, Feb 11, 2017, 1:09 PM IST
ಕುಂದಗೋಳ: 9 ತಿಂಗಳಿಂದ 15 ವರ್ಷ ವಯಸ್ಸಿನೊಳಗಿರುವ ಎಲ್ಲರಿಗೂ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ, ರಾಷ್ಟ್ರವನ್ನು ದಡಾರ ಮತ್ತು ರುಬೆಲ್ಲಾ ಮುಕ್ತವನ್ನಾಗಿಸಲು ಕುಟುಂಬಗಳು ಮುಂದೆ ಬರಬೇಕು ಎಂದು ತಹಶೀಲ್ದಾರ ಎಂ.ಎಸ್. ಬಣಸಿ ಕರೆ ನೀಡಿದರು.
ಪಟ್ಟಣದ ಶಂಭುಲಿಂಗ ದೇವಸ್ಥಾನದಲ್ಲಿ ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ ಈ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಾಮಾರಿ ದಡಾರ ಹಾಗೂ ರುಬೆಲ್ಲಾ ರೋಗಗಳನ್ನು ಹೋಗಲಾಡಿಸಲು ಮಕ್ಕಳಿಗೆ ಈ ಲಸಿಕೆಗಳನ್ನು ಹಾಕಿಸಬೇಕು ಎಂದರು.
ಪಪಂ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಅಧ್ಯಕ್ಷತೆ ವಹಿಸಿದ್ದರು. ಬಿಇಒ, ಸಿಡಿಪಿಒ, ಎಸ್ಡಿಎಂಸಿ ಸದಸ್ಯರು ಹಾಗೂ ವೈದ್ಯಾಧಿಕಾರಿಗಳು ಇದ್ದರು. ಒಟ್ಟು 295 ಲಸಿಕಾ ಸಿಬ್ಬಂಧಿದಿ ಭಾಗವಹಿಸಿದ್ದು, 44,058 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ರಾಮನಗೌಡ ದ್ಯಾವನಗೌಡ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.