ಹೈಕದಲ್ಲಿ ಕಲಾ ವಿಮರ್ಶೆ ಕೊರತೆ: ಮಹೇಶ್ವರಯ್ಯ
Team Udayavani, Feb 11, 2017, 2:51 PM IST
ಕಲಬುರಗಿ: ಹೈದ್ರಾಬಾದ ಕರ್ನಾಟಕದಲ್ಲಿ ಕಲೆ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿನ ಸಾಧಕರ ಕೊರತೆ ಇಲ್ಲ, ಆದರೆ, ಇವೆಲ್ಲವುಗಳನ್ನು ವಿಮಶಾìತ್ಮಕ ನೆಲೆಯಲ್ಲಿ ಆಸ್ವಾದನೆ ಮಾಡುವರ ಕೊರತೆ ಇದೆ. ಇದು ನೀಗಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರೆಯುತ್ತದೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ| ಎಚ್.ಎಂ.ಮಹೇಶ್ವರಯ್ಯ ಹೇಳಿದರು.
ಶುಕ್ರವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿನ ದಿ ಐಡಿಯಲ್ ಫೈನ್ ಆರ್ಟ್ಸ್ ಸಂಸ್ಥೆಯ ಮಾತೋಶ್ರೀ ನೀಲಗಂಗಮ್ಮಾ ಗು. ಅಂದಾನಿ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯರ ನೆನಪು ಮತ್ತು 2015ನೇ ಸಾಲಿನ ದೃಶ್ಯಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕಲಾವಿದ ದಿ| ಶಾಂತಲಿಂಗಪ್ಪ ಪಾಟೀಲ ನಿಂಬಾಳ ಅವರ ಕಲಾಕೃತಿಗಳ ಪ್ರದರ್ಶನ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಕಲಾವಿದರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆದಾಗ್ಯೂ, ಅಂತಹ ಉನ್ನತ ಕಲಾವಿದರ ಕಲಾಕೃತಿಗಳನ್ನು ಆಸ್ವಾದಿಸುವ ಮತ್ತು ವಿಮರ್ಶಿಸುವ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ಇಲ್ಲಿನವರು ಹಿಂದೆ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಹಾಗೂ ಕಲಾಸಕ್ತರು ಅಂತಹ ಕೊರತೆ ನಿವಾರಿಸಬೇಕು ಎಂದು ಕರೆ ನೀಡಿದರು. ದೆಹಲಿ ಕನ್ನಡಿಗ ಕಲಾವಿದ ಜಿ.ಎಸ್. ಈರಣ್ಣ ಅವರಿಗೆ ದೃಶ್ಯಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಿರಿಯ ಕಲಾವಿದ ವಿಜಯ್ ಸಿಂಧನೂರ ದಿ. ಶಾಂತಲಿಂಗಪ್ಪ ಪಾಟೀಲ ಅವರ ಕಲಾಕೃತಿಗಳ ಕ್ಯಾಟಲಾಗ್ ಬಿಡುಗಡೆ ಮಾಡಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ದಯಾನಂದ ಅಗಸರ್, ಖ್ಯಾತ ಕಲಾವಿದ ಜಿ.ಆರ್. ಈರಣ್ಣ ಹಾಜರಿದ್ದರು. ಡಾ| ವಿ.ಜಿ. ಅಂದಾನಿ ಸ್ವಾಗತಿಸಿದರು. ಜಿ. ಪುನೀತಕುಮಾರ ಪ್ರಾರ್ಥನಾಗೀತೆ ಹಾಡಿದರು. ಹಣಮಂತ ಮಂತಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.