ಮೋಡೆಲ್‌ ಬ್ಯಾಂಕ್‌ಗೆ ಪ್ರಥಮ ಉತ್ಕೃಷ್ಟ ಬ್ಯಾಂಕ್‌ ಪುರಸ್ಕಾರ


Team Udayavani, Feb 11, 2017, 5:22 PM IST

10011.jpg

ಮುಂಬಯಿ: ಮಹಾರಾಷ್ಟ್ರ ಸ್ಟೇಟ್‌ ಕೋ ಆಪರೇಟಿವ್‌ ಬ್ಯಾಂಕ್ಸ್‌  ಅಸೋಸಿಯೇಶನ್‌ ಲಿಮಿಟೆಡ್‌ ಮುಂಬಯಿ ಇದರ 2015-2016 ನೇ ಆರ್ಥಿಕ ಸಾಲಿನ  ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು, 500 ಕೋ. ರೂ. ಗಳ  ಮೇಲಿನ ಠೇವಣಿ ಸಂಗ್ರಹಣಾ ಸೇವೆಗಾಗಿ ಮುಂಬಯಿ ವಿಭಾಗದಲ್ಲೇ ಪ್ರಪ್ರಥಮ ಸ್ಥಾನದೊಂದಿಗೆ “ಉತ್ಕೃಷ್ಟ ಬ್ಯಾಂಕ್‌’ ಪುರಸ್ಕಾರವನ್ನು  ಮೋಡೆಲ್‌ ಬ್ಯಾಂಕಿಗೆ ಪ್ರದಾನಿಸಿ ಗೌರವಿಸಿದೆ.

ಅಸೋಸಿಯೇಶನ್‌ 21ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಫೆ. 10ರಂದು ಪೂರ್ವಾಹ್ನ ದಾದರ್‌ ಪಶ್ಚಿಮದ ಪ್ರಭಾದೇವಿಯ ರವೀಂದ್ರ ನಾಟ್ಯಮಂದಿರದ ಸಭಾಗೃಹದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಸಹಕಾರಿ ದಿಗ್ಗಜ ಪ್ರಥ್ವೀರಾಜ್‌ ಚವಾಣ್‌ ಅಧ್ಯಕ್ಷತೆಯಲ್ಲಿ ಜರಗಿದ್ದು, ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಲೋಕ್‌ಮತ್‌ ದೈನಿಕದ ಸಂಪಾದಕ ಗಿರೀಶ್‌ ಕುಬೇರ್‌, ಬ್ಯಾಂಕ್ಸ್‌ ಅಸೋಸಿಯೇಶನ್‌ನ ಕಾರ್ಯಾಧ್ಯಕ್ಷ ಸುಭಾಶ್‌ ರಾಮ್‌ದೇವ್‌ ಜೋಶಿ ಅವರು ಮೋಡೆಲ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಬ್ಲೂ Â.ಡಿ’ಸೋಜಾ ಅವರಿಗೆ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಸೋಸಿಯೇಶನ್‌ನ ಉಪ ಕಾರ್ಯಾಧ್ಯಕ್ಷ ಪ್ರಚೀತ್‌ ಎ. ಪೊರೆಡ್ಡಿವರ್‌, ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಸ್ವಾತಿ ಪಾಂಡೆ, ಮೋಡೆಲ್‌ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರ, ಬ್ಯಾಂಕ್‌ನ ಸಿಇಒ ಮತ್ತು ಮಹಾ ಪ್ರಬಂಧಕ ವಿಲಿಯಂ ಎಲ್‌.ಡಿ’ಸೋಜಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ಸ್‌ ಅಸೋಸಿಯೇಶನ್‌ನ ಸಂಚಾಲಕರುಗಳಾದ ಡಾ| ಶಶಿ ಬಿ. ಅಹಿರೆ, ಡಾ| ವಿನಾಯಕ್‌ ಯಶವಂತ್‌ ತರಾಳೆ, ಮಧುಕರ್‌ರಾವ್‌ ವಿ. ಜವಂಜಾಳ್‌, ವಿಕಾಸ್‌ ಬಾಲಚಂದ್ರ ಸಾವಂತ್‌, ವಿಶ್ವಾಸ್‌ ಠಾಕೂರ್‌ ವಸಂತ್‌ ವಿ. ಗುುಖೇಡ್ಕರ್‌, ಭರತ್‌ ಮಾಲಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ಕರಾವಳಿ ಮೂಲದ ಕ್ರೈಸ್ತ ಸಮುದಾಯದ ಮುಂದಾಳುಗಳಿಂದ ದಿ. ಮೆಂಗ್ಳೂರಿಯ ಕಥೋಲಿಕ್‌ ಕೋ  ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ನಿಯಮಿತ ಎಂದು ಸ್ಥಾಪಿಸಲ್ಪಟ್ಟು ಪ್ರಸ್ತುತ ಮೋಡೆಲ್‌ ಬ್ಯಾಂಕ್‌ ಕೋ. ಆಪರೇಟಿವ್‌ ಲಿಮಿಟೆಡ್‌ ಆಗಿ ಹೆಸರುವಾಸಿಯಾಗಿರುವ ಈ ಬ್ಯಾಂಕ್‌ ಕಳೆದ ವರ್ಷವಷ್ಟೇ ಶತಮಾನೋತ್ಸವವನ್ನು ಆಚರಿಸಿತ್ತು. ಬ್ಯಾಂಕ್‌ ಮುಂಬಯಿ, ಥಾಣೆ, ನವಿಮುಂಬಯಿ ಉಪ ನಗರವನ್ನೊಳಗೊಂಡು ಒಟ್ಟು 21 ಶಾಖೆಗಳ ಮೂಲಕ ಸೇವಾ ನಿರತವಾಗಿದೆ. 2015-2016ರ ಹಣಕಾಸು ಸಾಲಿನಲ್ಲಿ ಒಟ್ಟು 500  ಕೋ. ರೂ. ಗಳಿಗೂ ಅಧಿಕ ವ್ಯವಹಾರ ನಡೆಸಿ ಗ್ರಾಹಕರು ಮತ್ತು ಷೇರುದಾರರ ವಿಶ್ವಾಸಕ್ಕೆ ಪಾತ್ರವಾಗಿದೆ.
  ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.