ಮೀನುಗಾರರಿಗೆ ಸಹಾಯಧನ: ಕೇಂದ್ರದ ಅನುದಾನಕ್ಕೆ  ಪತ್ರ


Team Udayavani, Feb 13, 2017, 3:45 AM IST

12-LOC-1.jpg

ಉಡುಪಿ: ಮೀನುಗಾರರಿಗೆ ಸಹಾಯ ಧನ ಮಂಜೂರು ಮಾಡಲು ಮೀನುಗಾರಿಕೆ ದೋಣಿಗಳು ಬಳಸುವ ಡೀಸೆಲ್‌ ಮೇಲೆ 100 ಕೋ.ರೂ. ಹಾಗೂ ಸೀಮೆ ಎಣ್ಣೆ ಮೇಲೆ 50 ಕೋ.ರೂ. ಸಹಾಯಾನುದಾನವನ್ನು ಕೇಂದ್ರ ಸರಕಾರ ದಿಂದ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.

ಮೀನುಗಾರರಿಗೆ ಸಹಾಯಕವಾಗಲು ಹಾಗೂ ಸುಗಮ ಆಡಳಿತ ವ್ಯವಸ್ಥೆಗಾಗಿ ಉಡುಪಿಯಲ್ಲಿ ಮೀನುಗಾರಿಕೆ ಉಪನಿರ್ದೇಶಕರ ಕಚೇರಿಯನ್ನು ಸೃಷ್ಟಿಸಿ ಆದೇಶವನ್ನು ಹೊರಡಿಸಲಾಗಿದೆ. ಮೀನುಗಾರರು ವಾಣಿಜ್ಯ ಬ್ಯಾಂಕ್‌ಗಳಿಂದ ಪಡೆದ ಸಾಲದ ಮೇಲಿನ ಶೇ. 2ಕ್ಕಿಂತ ಹೆಚ್ಚಿನ ಬಡ್ಡಿ ಯನ್ನು ಪಾವತಿಸುವ ಯೋಜನೆಯಲ್ಲಿ 2016- 17ನೇ ಸಾಲಿನಲ್ಲಿ 100 ಲ.ರೂ.ಗಳನ್ನು ಮೀನು
ಗಾರರ ಪರವಾಗಿ ಬ್ಯಾಂಕ್‌ಗಳಿಗೆ ಪಾವತಿಸಲಾಗಿದೆ.  ಸರಕಾರ ಪುನಃ 596.51 ಲ.ರೂ. ಅನುದಾನ ಒದಗಿಸಿದ್ದು ಇದನ್ನು ಮೀನುಗಾರರ ಬ್ಯಾಂಕ್‌ ಸಾಲಕ್ಕೆ ಪಾವತಿಸಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಮೀನುಗಾರಿಕೆ ದೋಣಿಗಳಿಗೆ ಡೀಸೆಲ್‌ ಮಾರಾಟ ತೆರಿಗೆ ಮರುಪಾವತಿ ಯೋಜನೆಯಡಿ 2016-17ನೇ ಸಾಲಿಗೆ  10,050 ಲ.ರೂ. ಅನುದಾನ ನಿಗದಿಗೊಳಿಸಲಾಗಿದೆ. ಇದರಲ್ಲಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಇತರ  ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಮೊತ್ತ ಹೊರತುಪಡಿಸಿ 9,552 ಲ.ರೂ. ಡೀಸೆಲ್‌ ಮಾರಾಟ ತೆರಿಗೆ ಮರುಪಾವತಿ ಗಾಗಿ ಲಭ್ಯವಾಗಿದೆ. ಆದರೆ 2016 ಎಪ್ರಿಲ್‌ನಿಂದ ಅನ್ವಯವಾಗುವಂತೆ ಡೀಸೆಲ್‌ ಮೇಲಿನ ಮಾರಾಟ ಕರವನ್ನು ಹೆಚ್ಚಿಸಿದ ಕಾರಣ ಹಾಗೂ ಡೀಸೆಲ್‌ ದರದಲ್ಲಿ ಹೆಚ್ಚಳವಾದ ಕಾರಣ ಪ್ರಸ್ತುತ ಪ್ರತಿ ಲೀಟರ್‌ ಡೀಸೆಲ್‌ ಮೇಲೆ 9.27 ರೂ. ಮಾರಾಟ ಕರವನ್ನು ಮರುಪಾವತಿ ಮಾಡಬೇಕಾಗಿದೆ. ಈ ವರೆಗೆ ಲಭ್ಯವಿರುವ ಅನುದಾನದಲ್ಲಿ 7,143 ಲ.ರೂ. ಸಹಾಯಧನವನ್ನು ಮೀನುಗಾರರ ಖಾತೆಗಳಿಗೆ ಜಮಾ ಮಾಡಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಬಾಕಿ ಇದ್ದ ಹಾಗೂ ನವೆಂಬರ್‌ ತಿಂಗಳ ಸಹಾಯಧನ ಪಾವತಿಗಾಗಿ ಒಟ್ಟು 2,363 ಲ.ರೂ. ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲಾಗಿದೆ. ಇದರಿಂದ ನವೆಂಬರ್‌ ಅಂತ್ಯದವರೆಗೆ ಒಟ್ಟು 1.15 ಲ.ಕಿ.ಲೀ. ಡೀಸೆಲ್‌ ಮೇಲೆ ಒಟ್ಟು
9,523 ಲ.ರೂ. ಸಹಾಯಧನವನ್ನು ಮೀನುಗಾರ ರಿಗೆ ಪಾವತಿ ಮಾಡಿದಂತಾಗುತ್ತದೆ. ಡಿಸೆಂಬರ್‌, ಜನವರಿ, ಫೆಬ್ರವರಿಯ ಡೀಸೆಲ್‌ ಸಹಾಯಧನ ಪಾವತಿಗಾಗಿ ಹೆಚ್ಚುವರಿಯಾಗಿ 33 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲು ಸರಕಾರವನ್ನು ಕೋರಲಾಗಿದೆ.

ಡೀಸೆಲ್‌ ಮತ್ತು ಸೀಮೆಎಣ್ಣೆ ದರಗಳು ತೀವ್ರವಾಗಿ ಹೆಚ್ಚುತ್ತಿದ್ದು ಮೀನುಗಾರರಿಗೆ ಮೀನುಗಾರಿಕೆ ನಡೆಸಲು ವೆಚ್ಚವು ಹೆಚ್ಚಳವಾಗುತ್ತಿದೆ. ವಾರ್ಷಿಕ ಸುಮಾರು 1.80 ಲ.ಕಿ.ಲೀ. ಡೀಸೆಲ್‌ ಹಾಗೂ ಸುಮಾರು 28,000 ಕಿ.ಲೀ. ಸೀಮೆಎಣ್ಣೆ ಮೀನುಗಾರಿಕೆ ದೋಣಿಗಳಿಗೆ ಬೇಕಾಗುತ್ತದೆ. ಆದ್ದರಿಂದ ಮೀನುಗಾರರಿಗೆ ಅನುದಾನ ಮಾಡಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.