ವಿವೇಕಾನಂದರು ಭಾರತದ ಆತ್ಮ


Team Udayavani, Feb 13, 2017, 3:45 AM IST

12-LOC-13.jpg

ಮಂಗಳೂರು: ವಿವೇಕಾನಂದರು ಭಾರತದ ಆತ್ಮ ಇದ್ದಂತೆ. ದೇಶವನ್ನು ಸಾಂಸ್ಕೃತಿಕ, ಬೌದ್ಧಿಕ, ಆಧ್ಯಾತ್ಮಿಕವಾಗಿ ಮೇಲಕ್ಕೆತ್ತಿದ ಸಂತ ಸ್ವಾಮೀಜಿಯವರು ಎಂದು ಗುಜರಾತ್‌ನ ರಾಜಕೋಟ್‌ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಸರ್ವಸ್ಥಾನಂದಜೀ ಮಹಾರಾಜ್‌ ನುಡಿದರು.

ಯುವ ಬ್ರಿಗೇಡ್‌ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ಆಶ್ರಯಧಿದಲ್ಲಿ ನಗರದ ಕೇಂದ್ರ ಮೈದಾನದ ಗುಡ್ವಿನ್‌ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆದ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾಧಿರಂಭದಲ್ಲಿ ಅವರು ರವಿಧಿವಾರ ಮಾತನಾಡಿದರು. ವಿವೇಕಾನಂದರನ್ನು ಅರ್ಥೈಸಿಧಿಕೊಳ್ಳದೇ ಭಾರತವನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ದೇಶದ ಶ್ರೇಷ್ಠ ಪರಂಪರೆ, ಆಧ್ಯಾತ್ಮಿಕ ಸಂಸ್ಕೃತಿಯನ್ನು ಜಗತ್ತಿಗೇ ಬೋಧಿಸಿದ ಮಹಾನ್‌ ಪ್ರೇರಕ ಶಕ್ತಿ ಅವರು. ಯುವಕರ ಮೇಲೆ ಅವರು ಇಟ್ಟ ನಂಬಿಕೆ ಅಪಾರ. ಸ್ವಾಮೀಜಿಯವರ ಕನಸಿನಂತೆ ಸದೃಢ ಭಾರತ ಕಟ್ಟುವಲ್ಲಿ ಯುವ ಸಮೂಹ ಶ್ರಮಿಸಬೇಕು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಭಾರತವನ್ನು ಸಶಕ್ತವನ್ನಾಗಿಸಲು ಯುವಕರು ಮುಂದಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಸಾಹಿತ್ಯ ಸಾರ್ವಕಾಲಿಕ
ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ತಿರುವಣ್ಣಾಮಲೈ ಶ್ರೀ ಶಾರದಾ ಆಶ್ರಮದ ಮಾತಾಜಿ ಯತೀಶ್ವರಿ ಕೃಷ್ಣಪ್ರಿಯ ಅಂಬಾಜಿ ಅವರು ಮಾತನಾಡಿ, ಸ್ವಾಮೀಜಿ ಮತ್ತು ನಿವೇದಿತಾರ ಸಂದೇಶ, ಸಾಹಿತ್ಯಗಳು ಸಾರ್ವಕಾಲಿಕ. ಅವರ ಸಾಹಿತ್ಯಗಳಂತೆ ಬದುಕಿದರೆ ಜೀವನ ಸಾರ್ಥಕ್ಯ ಪಡೆಯುತ್ತದೆ. ಇಡೀ ವಿಶ್ವಕ್ಕೇ ಭಾರತೀಯ ಸಂಸ್ಕೃತಿಯ ಸಿರಿವಂತಿಕೆಯನ್ನು ಬೋಧಿಸಿದ ಅವರು ನಮ್ಮೆಲ್ಲರ ಆದರ್ಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ವಿವೇಕಾನಂದ ಕೊಲಾಜ್‌ ವಿಶ್ವ ದಾಖಲೆಗೆ ಪ್ರವೇಶ
ಮೂಲ್ಕಿಯ ಪಂಜಿನಡ್ಕ ಕೆಪಿಎಸ್‌ಕೆ ಪ್ರೌಢಶಾಲೆಯ ಕಲಾ ಶಿಕ್ಷಕ ವೆಂಕಿ ಪಲಿಮಾರ್‌ ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ 21×16 ಅಡಿ ಎತ್ತರದ ವಿವೇಕಾನಂದರ ಕೊಲಾಜ್‌ ಚಿತ್ರ ಮತ್ತು 10 ನಿಮಿಷದಲ್ಲಿ 108 ಸೂರ್ಯ ನಮಸ್ಕಾರ ಮಾಡಿದ ಯುವ ಬ್ರಿಗೇಡ್‌ ಕಾರ್ಯಕರ್ತ ನಿರಂಜನ್‌ ಶೆಟ್ಟಿ ಅವರ ಸಾಧನೆ ವಿಶ್ವ ದಾಖಲೆಗೆ ಪ್ರವೇಶ ಪಡೆದಿದೆ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಈ ವೇಳೆ ಪ್ರಕಟಿಸಿದರು.

ವೇದಿಕೆಯಲ್ಲಿ ಕೆಲವೇ ನಿಮಿಷಗಳಲ್ಲಿ ವಿವೇಕಾನಂದರ ಚಿತ್ರ ರಚಿಸಿದ ಮತ್ತು ಸಮ್ಮೇಳನ ಪ್ರಚಾರಾರ್ಥವಾಗಿ ಪಣಂಬೂರು ಕಡಲ ಕಿನಾರೆಯಲ್ಲಿ ವಿವೇಕ, ನಿವೇದಿತಾರ ಚಿತ್ರವನ್ನು ಮರಳಿನಲ್ಲಿ ರಚಿಸಿದ ಕಲಾವಿದ ಮಹೇಂದ್ರ ಅವರನ್ನು ಈ ವೇಳೆ ಗೌರವಿಸಲಾಯಿತು.

ವಿವೇಕಾನಂದ, ನಿವೇದಿತಾರ ಸಾಹಿತ್ಯ ಪುಸ್ತಕಗಳನ್ನು ಪುತ್ತೂರು ವಿವೇಕಾನಂದ ತಾಂತ್ರಿಕ ಕಾಲೇಜಿನಲ್ಲಿರುವ ವಿವೇಕ, ನಿವೇದಿತಾರ ಸಾಹಿತ್ಯ ರ್ಯಾಕ್‌ಗೆ ನೀಡುವ ಸಲುವಾಗಿ ಸಾಂಕೇತಿಕವಾಗಿ ಯುವ ಬ್ರಿಗೇಡ್‌ ಮಂಗಳೂರು ವಿಭಾಗ ಸಂಚಾಲಕ ಮಂಜಯ್ಯ ನೇರಂಕಿ ಅವರಿಗೆ ಹಸ್ತಾಂತರಿಸಲಾಯಿತು. ವಿವೇಕಾನಂದರ ಲೋಗೋ ಹೊಂದಿರುವ ಟೀಶರ್ಟ್‌ಗಳನ್ನು ಈ ವೇಳೆ ಬಿಡುಗಡೆಗೊಳಿಸಲಾಯಿತು.

ಸಮ್ಮೇಳನದ ಸಂಚಾಲಕ ಗಿರಿಧರ ಶೆಟ್ಟಿ ಉಪಸ್ಥಿತರಿದ್ದರು. ಯುವ ಬ್ರಿಗೇಡ್‌ ರಾಜ್ಯ ಸಂಚಾಲಕ ನಿತ್ಯಾನಂದ ವಿವೇಕವಂಶಿ ಸ್ವಾಗತಿಸಿಧಿದರು. ಸೋದರಿ ನಿವೇದಿತಾ ಪ್ರತಿಧಿಷ್ಠಾನದ ಸ್ವಾತಿ ಮಂಗಳೂರು ನಿರೂಪಿಸಿದರು.

ಯುವ ಬ್ರಿಗೇಡ್‌ ನಿರ್ಣಯಗಳು
ಸೋದರಿ ನಿವೇದಿತಾ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ರಾಜ್ಯಾದ್ಯಂತ 150 ಸಮ್ಮೇಳನಗಳ ಆಯೋಜನೆ ಮತ್ತು ಇದರ ಸಮಾರೋಪದ ಅಂಗವಾಗಿ ಸೆ. 11, 12ರಂದು ಬೆಳಗಾವಿಯಲ್ಲಿ  ಸಾಹಿತ್ಯ ಸಮ್ಮೇಳನ ಏರ್ಪಡಿಸುವುದು, ಫೆ. 14ರಂದು ಪೌರ ಕಾರ್ಮಿಕರ ಕಾಲನಿಗಳಿಗೆ ಅಥವಾ ವೃದ್ಧಾಶ್ರಮಗಳಿಗೆ ಭೇಟಿ ನೀಡುವ ನಿರ್ಣಯಗಳನ್ನು ಯುವ ಬ್ರಿಗೇಡ್‌ ಕೈಗೊಂಡಿದೆ.

ನಿರ್ಣಯ ಪ್ರಕಟಿಸಿದ ಯುವಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನಿವೇದಿತಾ 150ನೇ ವರ್ಷಾಚರಣೆ ಪ್ರಯುಕ್ತ ವಿವೇಕಾನಂದರ ಚಿಂತನೆಗಳನ್ನು ಮತ್ತು ನಿವೇದಿತಾ ಅವರ ಕಲ್ಪನೆಗಳನ್ನು ಸಮಾಜಕ್ಕೆ ಮುಟ್ಟಿಸುವ ಕಾರ್ಯಕ್ಕಾಗಿ ಸಮ್ಮೇಳನಗಳು ಮಹತ್ವ ಪಡೆಯಲಿವೆ ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.