ರಂಗ ತರಬೇತಿ ಸಮಾರೋಪ
Team Udayavani, Feb 13, 2017, 2:23 PM IST
ಧಾರವಾಡ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಮಾಜದತ್ತ ಬಹಿಮುಖವಾಗಿ ಕೆಲಸ ಮಾಡಲು ರಂಗಭೂಮಿ ನೆರವಾಗುತ್ತದೆ ಎಂದು ಕವಿವಿ ಗಾಂಧಿಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ಶಿವಾನಂದ ಶೆಟ್ಟರ ಹೇಳಿದರು.
ನಗರದ ಕವಿಸಂನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರುಹಾಗೂ ಬಸವರೆಡ್ಡಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಬಸವರಡ್ಡಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಸವರೆಡ್ಡಿ ಮಾತನಾಡಿ, ರಂಗಭೂಮಿಯು ಜಾನಪದ ಕಲೆಯ ವಿವಿಧ ಮಜಲುಗಳನ್ನು ಮೈಗೂಡಿಸಿಕೊಂಡು ಸರ್ವ ಶಕ್ತಿಯನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದರು.
ಸಾಹಿತಿ ಮೋಹನ ನಾಗಮ್ಮನವರ ಮಾತನಾಡಿ, ಜಾತಿ-ಮತ, ಪಂಥವನ್ನು ಮೀರಿ ರಂಗಭೂಮಿಯು ತನ್ನದೇ ಆದ ಪಾವಿತ್ರತೆ ಕಾಯ್ದುಕೊಂಡು ಬಂದಿದೆ ಎಂದರು. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮಹಾದೇವ ದೊಡಮನಿ ಮಾತನಾಡಿ, ಉತ್ತರ ಕರ್ನಾಟಕದ ಕಲಾವಿದರಿಗೆ ಸಮರ್ಪಕ ನ್ಯಾಯ ಒದಗಿಸುವ ಜವಾಬ್ದಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಕಾಡೆಮಿಗಳದ್ದಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಮಾತನಾಡಿದರು. ನಾಟಕ ಅಕಾಡೆಮಿ ಸದಸ್ಯ ಕೆ.ಜಗುಚಂದ್ರ ಅಧ್ಯಕ್ಷತೆ ವಹಿಸಿದ್ದರು. ನಂತರ ರಂಗ ತರಬೇತಿ ಶಿಬಿರದಲ್ಲಿ ನಿರ್ಮಾಣವಾದ ಡಾ| ಚಂದ್ರಶೇಖರ ಕಂಬಾರ ರಚಿತ, ಅಮೃತಾ ತಳವಾರ ನಿರ್ದೇಶನದ “ನಾಯಿ ಕಥೆ’ ನಾಟಕ ಪ್ರದರ್ಶನಗೊಂಡಿತು. ಎನ್.ಎಂ. ಗಡೆಣ್ಣವರ ಸ್ವಾಗತಿಸಿದರು. ಎಫ್.ಬಿ. ಕಣವಿ ನಿರೂಪಿಸಿದರು. ಹೇಮಂತ ಲಮಾಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.