ಬಡ್ತಿಯಲ್ಲಿ ಅಂಗವಿಕಲರಿಗೆ ಮೀಸಲು ಅಗತ್ಯ


Team Udayavani, Feb 13, 2017, 4:20 PM IST

21-KALA-4.gif

ಮಂಡ್ಯ: ರಾಜ್ಯಸರ್ಕಾರ ಬಡ್ತಿಯಲ್ಲಿ ಅಂಗವಿಕಲರಿಗೆ ಮೀಸಲು ನೀತಿ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್‌ ಉಪಸಭಾಪತಿ ಮರಿತಿಬ್ಬೇಗೌಡ ಒತ್ತಾಯಿಸಿದರು. ಭಾನುವಾರ ನಗರದ ಗಾಂಧಿಭವನದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು. 

ಈವರೆಗೆ ನೇಮ ಕಾತಿ ಪ್ರಕ್ರಿಯೆ ನಡೆಯದೇ ಇರುವ ಕಾರಣ ಅವರ ಪಾಲಿನ ಉದ್ಯೋಗಗಳನ್ನು ಬ್ಯಾಕ್‌ಲಾಗ್‌ ಎಂದು ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ವೇತನ ಸೇರಿದಂತೆ ಎಲ್ಲಾ ಬಗೆಯ ಭತ್ಯೆಗಳಲ್ಲಿ ಇವರಿಗೆ ಆದ್ಯತೆ ಕಲ್ಪಿಸುವಂತೆ ಸಲಹೆ ನೀಡಿದರು. ಸರ್ಕಾರದಿಂದ ಅಂಗವಿಕಲರಿಗೆ ಸೂಕ್ತ ಪ್ರಮಾಣದಲ್ಲಿ ಸವಲತ್ತು ಗಳನ್ನು ನೀಡುತ್ತಿಲ್ಲ. ಸಮಾಜದಲ್ಲಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಾದರೆ ಎಲ್ಲರಿಗೂ ನೀಡುವ ಸೌಲಭ್ಯ- ಸವಲತ್ತುಗಳನ್ನು ಅಂಗವಿಕಲರಿಗೂ ನೀಡುವಂತೆ ಆಗ್ರಹಪಡಿಸಿದರು.

ಅಂಗವಿಕಲರು ತಮಗೆ ಬೇಕಾದ ಸವಲತ್ತುಗಳನ್ನು ಈವರೆಗೆ ಹೋರಾಟ ಮಾಡಿಕೊಂಡೇ ಪಡೆದುಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಸಿ ಮತ್ತು ಡಿ ಗ್ರೂಪ್‌ ನೌಕರರ ನೇಮಕಾತಿ ವೇಳೆ ಶೇ.5ರಷ್ಟು ಮೀಸಲನ್ನು ಅಂಗವಿಕಲರಿಗೆ ಕಲ್ಪಿಸಿದ್ದರು. ಈಗ ನೇಮಕಾತಿ ಪ್ರಕ್ರಿಯೆಗಳೇ ನಡೆಯುತ್ತಿಲ್ಲ. ಆದ್ದರಿಂದ ಇವರು ನೌಕರಿಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ರೇಣುಕಾರಾಧ್ಯ ಮಾತನಾಡಿ, ಅಂಗವಿಕಲರ ಅಭಿವೃದ್ಧಿ ಆಗದ ಹೊರತು ದೇಶ ಸಂಪೂರ್ಣ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಅಂಗವಿಕಲರಿಗೆ ಸವಲತ್ತು ಹಾಗೂ ಕಾನೂನುಗಳನ್ನು ರೂಪಿಸಿ 20 ವರ್ಷ ಕಳೆದರೂ ಅವರ ಸವಲತ್ತುಗಳು ಅನುಷ್ಠಾನಕ್ಕೆ ಬಂದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ರ್‍ಯಾಂಪ್‌ ಅಳವಡಿಸಿಲ್ಲ. ಅಂಗವಿಕಲರಿಗೆ ಪ್ರತ್ಯೇಕವಾದ ಶೌಚಾಲಯ ಗಳಿಲ್ಲ. ಅನೇಕ ತಂತ್ರಜಾnನಗಳು ಬೆಳವಣಿಗೆ ಆಗಿದ್ದರೂ ಅಂಗವಿಕಲರಿಗೆ ಇವುಗಳು ಈವರೆಗೆ ತಲುಪಿಲ್ಲ. ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಿ ಪ್ರಾಮಾಣಿಕವಾಗಿ ಅಂಗವಿಕಲರ ಅಭಿವೃದ್ಧಿಗೆ ದುಡಿಯಬೇಕು ಎಂದು ಕರೆ ನೀಡಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದ್ರೇಶ್‌ ಮಾತನಾಡಿ, ಸರ್ಕಾರ ಅಂಗವಿಕಲರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆಶಾ ದಾಯಕ ಭರವಸೆ ನೀಡಿದೆ. ಮುಂದಿನ ಬಜೆಟ್‌ನಲ್ಲಿ ಅಂಗವಿಕಲರ ತಿದ್ದುಪಡಿ ಕಾಯ್ದೆಗೆ ಮಾರ್ಗಸೂಚಿಯನ್ನು ರೂಪಿಸುವ ಭರವಸೆ ನೀಡಿದೆ ಎಂದು ತಿಳಿಸಿದರು. ಅಂಗವಿಕಲರನ್ನು ಹೀಯ್ನಾಳಿಸುವುದು, ಅನುಕರಿಸಿ ಮೂದಲಿ ಸುವುದು ಕಾನೂನುಬದ್ಧ ಅಪರಾಧ. ಈ ಕಾಯ್ದೆಯನ್ನು ಇತ್ತೀಚೆಗೆ ತರಲಾಗಿದೆ.

ಕೆಲಸ ಮಾಡುವ ಸ್ಥಳಗಳಲ್ಲಿ ದೌರ್ಜನ್ಯ ಎಸಗಿದರೆ ಜೈಲು ಶಿಕ್ಷೆಹಾಗೂ ದಂಡ ವಿಧಿಸಲಾಗುತ್ತದೆ. ಈ ಎಲ್ಲಾ ಕಾಯ್ದೆಗಳು ಸಮರ್ಥವಾಗಿ ಅನುಷ್ಠಾನಕ್ಕೆ ಬಂದಾಗ ಅಂಗವಿಕಲರ ಅಭಿವೃದ್ಧಿ ಸಾಧ್ಯ ಎಂದರು.ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್‌ ಮಾತನಾಡಿ, ಜಿಲ್ಲೆಯಲ್ಲಿ ಕನಿಷ್ಠ 500ಕ್ಕೂ ಹೆಚ್ಚು ಮಂದಿ ಅಂಗವಿಕಲ ನೌಕರರಿದ್ದಾರೆ.

ಎಲ್ಲರೂ ಈ ಸಂಘಕ್ಕೆ ಸದಸ್ಯರಾಗಬೇಕು. ನಿಮ್ಮ ಸಂಘ ಕೈಗೊಳ್ಳುವ ಎಲ್ಲಾ ಕೆಲಸಕ್ಕೆ ಹಾಗೂ ಹೋರಾಟಕ್ಕೆ ತಾವು ಸದಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಸಂಘದ ರಾಜಾಧ್ಯಕ್ಷ ವೆಂಕಟರಮಣಪ್ಪ, ಜಿಲ್ಲಾಧ್ಯಕ್ಷ ವಿ.ಎಂ.ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಬಿ.ವಿ.ಶ್ರೀನಿವಾಸಮೂರ್ತಿ, ಗೌರವಾಧ್ಯಕ್ಷ ಜಯರಾಮು, ಬಸವರಾಜು, ಶಿವಾನಂದ್‌ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.