ಲೈಂಗಿಕ ದಮನಿತರ ಕುರಿತು ವರದಿ ಸಲ್ಲಿ ಕೆ
Team Udayavani, Feb 14, 2017, 7:12 AM IST
ಬೆಂಗಳೂರು: ಲೈಂಗಿಕ ದಮನಿತರ ಬದುಕಿನ ಸ್ಥಿತಿಗತಿ ಕುರಿತಂತೆ ದೇಶದಲ್ಲೇ ಪ್ರಥಮ ಬಾರಿಗೆ ಅಧ್ಯಯನ ನಡೆಸಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದರು.
ಲೈಂಗಿಕ ಕಾರ್ಯ ಕರ್ತೆಯರ ಸ್ಥಿತಿಗತಿಗಳ ಅಧ್ಯಯನ ಸಮಿತಿಯ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯೆ ಡಾ.ಜಯಮಾಲಾ
ಅವರು ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಲ್ಲಿಸಿದ ಸಮಿತಿ ವರದಿ ಸ್ವೀಕರಿಸಿ ಅವರು ಮಾತನಾಡಿದರು.
ಇದಕ್ಕೂ ಮೊದಲು ಜಯಮಾಲಾ ಮಾತನಾಡಿ, ಬುದ್ದದೇವ್ ಕರ್ಮಾಸ್ಕರ್ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಡುವಿನ ಪ್ರಕರಣ ಆಧರಿಸಿ ಸುಪ್ರೀಂಕೋರ್ಟ್ ಆದೇಶದಂತೆ ಲೈಂಗಿಕ ದಮನಿತರ ಬದುಕಿನ ಸ್ಥಿತಿಗತಿ ಕುರಿತಂತೆ ಅಧ್ಯಯನ ನಡೆಸಿದ ಮೊದಲ
ರಾಜ್ಯ ಕರ್ನಾಟಕವಾಗಿದೆ. ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳಿಗೂ ಭೇಟಿ ನೀಡಿ ಲೈಂಗಿಕ ಕಾರ್ಯಕರ್ತೆಯರನ್ನು
ಭೇಟಿ ಮಾಡಿ ಮಾಹಿತಿ ಪಡೆದು ಅಧ್ಯಯನ ನಡೆಸಿ ವಸ್ತುನಿಷ್ಠ ವರದಿ ಸಿದ್ಧಪಡಿಸಲಾಗಿದೆ. ಎಲ್ಲ ಜಿಲ್ಲೆಗಳಿಗೆ 17,600
ಪ್ರಶ್ನಾವಳಿಗಳನ್ನು ಕಳು ಹಿಸಿ 11,300 ಉತ್ತರ ಪಡೆಯಲಾಗಿದೆ. 3000 ದಮನಿತರಿಂದ ನೇರವಾಗಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
ಪ್ರಮುಖ ಶಿಫಾರಸು: ರಾಜ್ಯದಲ್ಲಿ 8000 ಎಚ್ಐವಿ ಸೋಂಕಿತರು ಪೌಷ್ಠಿಕ ಆಹಾರ ಪಡೆಯಲು ಅನುಕೂಲವಾಗುವಂತೆ
ಅಂತ್ಯೋದಯ ಪಡಿತರ ಚೀಟಿ ನೀಡಬೇಕು. ಏಕ ಗವಾಕ್ಷಿ ಪದ್ಧತಿಯಡಿ ಲೈಂಗಿಕ ದಮನಿತರಿಗೆ ಪುನರ್ವಸತಿ ಯೋಜನೆ ಕಲ್ಪಿಸಿ ಉದ್ಯೋಗಕ್ಕೆ ಆರ್ಥಿಕ ನೆರವು ನೀಡಬೇಕು. ಮಾನವ ಕಳ್ಳ ಸಾಗಣೆ ತಡೆಯಲು ಕಾನೂನು ಜಾರಿಗೊಳಿ ಸಬೇಕು ಎಂದು ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.