ಬಾಂಗ್ಲಾ ಗಡಿ ಮೂಲಕ 2000 ದ ನಕಲಿ ನೋಟು ಕಳುಹಿಸುತ್ತಿರುವ ಪಾಕ್‌ ! 


Team Udayavani, Feb 14, 2017, 9:53 AM IST

new notes.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಧಿಡೀರ್‌ ನೋಟು ಅಪನಗದೀಕರಣ ಗೊಳಿಸಿದ ಬಳಿಕ ಪಾಕಿಸ್ಥಾನದಿಂದ ಭಾರತಕ್ಕೆ ಬರುತ್ತಿದ್ದ ನಕಲಿ ನೋಟುಗಳ ಹರಿವು ನಿಂತುಹೋಗಿತ್ತು.ಆದರೆ ಇದೀಗ 3 ತಿಂಗಳ ಬಳಿಕ  ಪಾಕ್‌ ಮತ್ತೆ ನರಿ ಬುದ್ದಿ ತೋರಿದ್ದು  2000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ  ಬಾಂಗ್ಲಾ ಗಡಿಯ ಮೂಲಕ ಭಾರತಕ್ಕೆ ಕಳ್ಳಸಾಗಾಣಿಕೆ ಮಾಡುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 

 ಪಾಕ್‌ನಲ್ಲಿ ಮುದ್ರಣಗೊಂಡಿರುವ ನೋಟುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿರುವವರನ್ನು ಬಿಎಸ್‌ಎಫ್ ವಶಕ್ಕೆ ಪಡೆದು ಎನ್‌ಐಎ ವಶಕ್ಕೆ ನೀಡಿರುವುದನ್ನು  ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಈ ವರದಿ ಮಾಡಿದೆ. 

ಫೆಬ್ರವರಿ 8 ರಂದು ಬಂಗಾಲದ ಮುರ್ಶಿದಾಬಾದ್‌ನಲ್ಲಿ  2000ದ 40 ನಕಲಿ ನೋಟುಗಳ ಸಮೇತ ಅಜೀಜ್‌ ಉರ್‌ ರೆಹಮಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ವೇಳೆ ಆತ ನೋಟುಗಳು ಪಾಕಿಸ್ಥಾನದಲ್ಲಿ ಪ್ರಿಂಟ್‌ ಆಗಿದ್ದು, ಇದಕ್ಕೆ ಐಎಸ್‌ಐ ಬೆಂಬಲ ನೀಡುತ್ತಿರುವುದಾಗಿ  ಬಾಯ್ಬಿಟ್ಟಿದ್ದ. 

ಅಪನಗದೀಕರಣದ  ಹಿಂದೆಯೂ ಬಾಂಗ್ಲಾ ಗಡಿಯ ಮೂಲಕ ಅಪಾರ ಪ್ರಮಾಣದ ನಕಲಿ ನೋಟುಗಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸುತ್ತಿದ್ದವು ಎಂಬ ಅಂಶ ಬೆಳಕಿಗೆ ಬಂದಿತ್ತು.  ಇದೀಗ ವಶಕ್ಕೆ ಪಡೆದಿರುವ ನೋಟುಗಳ ಪೇಪರ್‌ ಗುಣಮಟ್ಟವೂ ಕಳಪೆಯಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವ್ಯಾಪಕ ತಪಾಸಣೆ ಮತ್ತು ಬ್ಯಾಂಕ್‌ ,ಕಚೇರಿಗಳಲ್ಲಿ ನೋಟುಗಳನ್ನು  ಸೂಕ್ತ ಪರಿಶೀಲನೆ ನಡೆಸಿಯೆ ಪಡೆಯಲಾಗುತ್ತಿದೆ.

ಹೊಸ ನೋಟಿನಲ್ಲಿ ಭದ್ರತಾ ವೈಶಿಷ್ಟ್ಯಗಳೆಂಬಂತೆ  ಪಾರದರ್ಶಕ ಪ್ರದೇಶ, ವಾಟರ್‌ ಮಾರ್ಕ್‌,  ಅಶೋಕ ಸ್ತಂಭದ ಲಾಂಛನ, ಎಡ, ಆರ್‌ಬಿಐ ಗವರ್ನರ್ ಸಹಿ, ಗ್ಯಾರಂಟಿ ಷರತ್ತು ಮತ್ತು ಮುಂಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ  ಮುಖಬೆಲೆಯ ಮೇಲೆ ‘ರೂ 2000 ಅಕ್ಷರಗಳನ್ನು ಸೂಕ್ಷ್ಮವಾಗಿ ಗಮನಿಸಲು ಸಲಹೆ ನೀಡಿದೆ. 

ನೋಟು ಪರಿಶೀಲನೆ ವೇಳೆ ಚಂದ್ರಯಾನದ ವಿಶಿಷ್ಟ ಚಿತ್ರ, ಸ್ವಚ್ಛ  ಭಾರತ್ ಲೋಗೋ ಮತ್ತು ಹಿಂಭಾಗದಲ್ಲಿರುವ ಮುದ್ರಣದ ವರ್ಷ ಪರಿಶೀಲಿಸಿದಾಗ ನೋಟು ನಕಲಿ ಎಂದು ತಿಳಿಯುವುದಾಗಿ ತಜ್ಞರು ಸಲಹೆ ನೀಡಿದ್ದಾರೆ. 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.