ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ
Team Udayavani, Feb 14, 2017, 1:05 PM IST
ಹರಪನಹಳ್ಳಿ: ಭಾರತ್ ಕಮ್ಯೂನಿಷ್ಟ್ ಪಕ್ಷ(ಎಂ) ಕಾರ್ಯಕರ್ತರು ಪಟ್ಟಣದ ಇಜಾರಿ ಶಿರಸಪ್ಪ ಸರ್ಕಲ್ನಲ್ಲಿ ಸೋಮವಾರ ನೋಟು ಅಮಾನ್ಯ ಮಾಡಿರುವುದನ್ನು ಖಂಡಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ರಾಜ್ಯ ಸಮಿತಿ ಸದಸ್ಯ ಕೆ. ಮಹಾಂತೇಶ ಮಾತನಾಡಿ, ಫೆ. 6 ರಿಂದ 14ರ ವರೆಗೆ ಪ್ರಚಾರಾಂದೋಲನ ರಾಜ್ಯಾದ್ಯಂತ ನಡೆಯಲಿದೆ.
ದೇಶದಲ್ಲಿ ನೋಟು ಬ್ಯಾನ್ ಮಾಡಿರುವುದು ಕಪ್ಪು ಹಣದ ವಿರುದ್ಧ ಸಮರವಲ್ಲ, ಜನಸಾಮಾನ್ಯರ ವಿರುದ್ಧ ನಗದು ಸಮರವಾಗಿದೆ. ನೋಟು” ರದ್ದತಿಯಿಂದ ಅತೀ ಹೆಚ್ಚು ಕಷ್ಟಪಟ್ಟವರು ಜನ ಸಾಮಾನ್ಯರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಳ್ಳವರ ಪರವಾಗಿದೆ ಎಂದು ದೂರಿದರು. ರಾಜ್ಯದಲ್ಲಿ ತೀವ್ರ ಬರ ಆವರಿಸಿದೆ.
ಆದರೆ ಕಾಂಗ್ರೆಸ್ಸರ್ಕಾರ ಮಾತ್ರ ಕೇಂದ್ರದಿಂದ ಬರ ಪರಿಹಾರ ಹಣ ನೀಡುತ್ತಿಲ್ಲ ಎನ್ನುವ ನೆಪವೊಡ್ಡಿ ಬರ ಕಾಮಗಾರಿ ಕೈಗೊಳ್ಳುತ್ತಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ದುಪ್ಪಟ್ಟು ಹಣ ಮೀಸಲಿರಿಸಬೇಕು. ರೈತರ ಎಲ್ಲ ಸಾಲಗಳನ್ನು ಕೂಡಲೇ ಮನ್ನಾ ಮಾಡಬೇಕು.
ಎಲ್ಲ ನೋಂದಾಯಿತರಿಗೂ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಎಲ್. ಭಟ್ ಮಾತನಾಡಿ, ಕಪ್ಪುಹಣ, ಭ್ರಷ್ಟಾಚಾರ, ಭಯೋತ್ಪಾದನೆ ನಿಗ್ರಹ ದೃಷ್ಟಿಯಿಂದ ನೋಟ್ ಬ್ಯಾನ್ ಮಾಡಿದ ಮೋದಿ ಸರ್ಕಾರದಿಂದ ಜನ ಸಾಮಾನ್ಯರು ಪರಿತಪಿಸುವಂತಾಗಿದೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಾಲ್ಕು ಪೂರೈಸುತ್ತಿದೆ. ಎರಡು ಸರ್ಕಾರಗಳು ರೈತ, ಕಾರ್ಮಿಕರು, ಜನ ಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆಪಾದಿಸಿದರು. ಮುಖಂಡರಾದ ಹುಲಿಕಟ್ಟೆ ರಹಮತ್ವುಲ್ಲಾ, ಕೆ. ರಾಜಪ್ಪ, ದೇವದಾಸಿ ಮಹಿಳಾ ವಿಮೋಚನಾ ಸಂಘದ ಜಿಲ್ಲಾ ಕಾರ್ಯದರ್ಶಿ ಟಿ.ವಿ. ರೇಣುಕಮ್ಮ, ಧರ್ಮಪ್ಪ, ನಾಗರಾಜ್, ಹಾಗೂ ಎಲ್ಐಸಿ ಸಂಘಟನೆ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.