ಶಾಂತಿ ಕದಡಿದರೆ ರೌಡಿಗಳ ವಿರುದ್ಧ ಕ್ರಮ


Team Udayavani, Feb 14, 2017, 3:03 PM IST

gul1.jpg

ಕಲಬುರಗಿ: ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಪರೇಡ್‌ನ‌ಲ್ಲಿ ಜಿಲ್ಲೆಯ ವಿವಿಧ ಪೊಲೀಸ ಠಾಣೆಗಳಲ್ಲಿನ ಸುಮಾರು 500 ರೌಡಿಗಳು ಭಾಗವಹಿಸಿದ್ದರು. ಭಾಗವಹಿಸಿದ್ದ ರೌಡಿಗಳಿಗೆ ಅಪರಾಧ ಪ್ರಕರಣದಲ್ಲಿ ತೊಡಗದಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎನ್ನುವ ಎಚ್ಚರಿಕೆಯನ್ನು ಎಸ್‌ಪಿ ಎನ್‌. ಶಶಿಕುಮಾರ ನೀಡಿದರು. 

ನಗರದ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ 226 ರೌಡಿಗಳು ಹಾಗೂ ಹೊಸದಾಗಿ ರೌಡಿ ಪಟ್ಟಿಗೆ ಸೇರ್ಪಡೆಯಾದವರನ್ನು ಪರೇಡ್‌ ಮೈದಾನಕ್ಕೆ ಕರೆಸಿ  ಅವರ ಕಾರ್ಯಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಪಡೆದುಕೊಂಡರು. ರೌಡಿಗಳ ಪರೇಡ್‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಶಶಿಕುಮಾರ, 2016ನೇ ಸಾಲಿನಲ್ಲಿ ರೌಡಿಗಳ ಪಟ್ಟಿಗೆ ಹೊಸದಾಗಿ 430 ಜನರನ್ನು ಸೇರ್ಪಡೆಮಾಡಲಾಗಿದೆ.

80 ಕೊಲೆ ಪ್ರಕರಣ, 70 ಅಟ್ರಾಸಿಟಿ ಪ್ರಕರಣ, 60 ಅತ್ಯಾಚಾರ ಪ್ರಕರಣ, 60 ಸುಲಿಗೆ ಪ್ರಕರಣ, 8 ದರೋಡೆ ಪ್ರಕರಣ, 2150 ಹಲ್ಲೆ ಪ್ರಕರಣಗಳು ವರದಿಯಾಗಿವೆ. 1987 ರೌಡಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿದಂತಾಗಿದೆ ಎಂದರು. ರೌಡಿ ಪಟ್ಟಿಯಲ್ಲಿರುವವರು ಸಮಾಜಘಾತುಕ ಕೃತ್ಯಗಳಲ್ಲಿ ಮುಂದುವರಿದರೆ ಅಂಥವರನ್ನು ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಸಿದರು. ಪರೇಡ್‌ ಸಂದರ್ಭದಲ್ಲಿ ಹೆಚ್ಚುವರಿ ಎಸ್‌ಪಿ ಜಯಪ್ರಕಾಶ, ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಠಾಣೆಗಳ ಅಧಿಕಾರಿಗಳು ಇದ್ದರು. 

ಶಹಾಬಾದ: ನಗರ ಪೊಲೀಸ್‌ ಠಾಣೆಯಲ್ಲಿ ಸೋಮವಾರ ರೌಡಿಗಳ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಡಿವೈಎಸ್‌ಪಿ ಮಹೇಶ ಮೇಗಣ್ಣನವರ್‌ ನೇತೃತ್ವದಲ್ಲಿ ಪೊಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಚಿತ್ತಾಪುರ,ವಾಡಿ, ಶಹಾಬಾದ, ಮಾಡಬೂಳ, ಕಾಳಗಿ ಸೇರಿದಂತೆ ಇತರ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸುಮಾರು 65 ರೌಡಿಗಳನ್ನು ಠಾಣೆಗೆ  ಕರೆಯಿಸಿ ಸಿಪಿಐ ಶಂಕರಗೌಡ ಪಾಟೀಲ ರೌಡಿಗಳ ಪರೇಡ್‌ ನಡೆಸಿದ್ದಾರೆ. 

ಈ ವೇಳೆ ಮಾತನಾಡಿದ ಡಿವೈಎಸ್‌ಪಿ ಮಹೇಶ ಮೇಗಣ್ಣನವರ್‌, ರೌಡಿಗಳು ಶಾಂತಿ ಕದಡುವುದು ಅಥವಾ ಪ್ರೇರಣೆ ನೀಡುವುದು ಕಂಡುಬಂದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು.ಕೆಲವರು ಬೇಲ್‌ ಮೇಲೆ ಹೊರಹೋಗಿದ್ದೀರಿ,ಯಾವುದೇ ಕಾರಣಕ್ಕೂ ಬೇಲ್‌ ಷರತ್ತು ಮುರಿಯಬಾರದು ಎಂದು ಹೇಳಿದರು. ಚಿತ್ತಾಪುರ ಸಿಪಿಐ ಶಂಕರಗೌಡ ಪಾಟೀಲ ಮಾತನಾಡಿ, ಬೇರೆಯವರಿಗಾಗಿ ಪೈರಸಿ  ಮಾಡುವುದನ್ನು ನಿಲ್ಲಿಸಬೇಕು.

ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ, ಸಮಾಜ ಘಾತುಕ ಚಟುವಟಿಕೆಗಳಲ್ಲಿ ತೊಡಗದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದರು. ಚಿತ್ತಾಪುರ ಪಿಎಸ್‌ಐ ಜಗದೇವಪ್ಪ ಪಾಳಾ, ವಾಡಿ ಪಿಎಸ್‌ಐ ನಟರಾಜ ಲಾಡೆ, ಮಾಡಬೂಳ ಪಿಎಸ್‌ಐ ಹುಸೇನ ಭಾಷಾ, ಎಎಸ್‌ಐ ಕಲ್ಯಾಣರಾವ್‌, ಯಾದವ ರಾಠೊಡ, ಸುಭಾಷ ರಾಠೊಡ, ನಾಗೇಂದ್ರ ತಳವಾರ, ಗುಂಡಪ್ಪ ಕೊಗನೂರ್‌,ಜಮೀಲ್‌, ಎಜಿಕಲ್‌ ಇದ್ದರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.