ಕಲೆ ಮತ್ತು ಸಾಹಿತ್ಯಕ್ಕೆ ಸೃಜನಶೀಲತೆಯೇ ಮೂಲ


Team Udayavani, Feb 15, 2017, 11:42 AM IST

chandrasherkar-la.jpg

ಬೆಂಗಳೂರು: “ಚಿತ್ರಕಲೆ ಮತ್ತು ಸಾಹಿತ್ಯಕ್ಕೆ ಸೃಜನಶೀಲತೆಯೇ ಮೂಲ,” ಎಂದು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟಿದ್ದಾರೆ. “ಫೈನ್‌ ಆರ್ಟ್‌ ಕಾಲೇಜ್‌’ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಲಾವಿದರ ಶಿಬಿರದಲ್ಲಿ ಮಾತನಾಡಿದ ಅವರು, “ಸೃಜನಶೀಲತೆಯೇ ಕಲೆಯ ದೊಡ್ಡ ಸಂಪತ್ತು. ಅದು ಎಂದಿಗೂ ಸ್ವಂತಿಕೆಯನ್ನೇ ಅಪೇಕ್ಷಿಸುತ್ತದೆ. ಕಲಾವಿದರ ಪ್ರತಿಭೆ ಕಲಾಕೃತಿಗಳಲ್ಲಿ ಅಡಕವಾಗಿರುತ್ತದೆ,” ಎಂದು ಹೇಳಿದರು.

“ಕಲಾವಿದರ ಮನದಾಳದ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ಚಿತ್ರಕಲಾ ಪರಿಷತ್ತು ಅಂತಹ ವೇದಿಕೆ ಒದಗಿಸಿದ್ದು, ಅದರ ಸದುಪಯೋಗವಾಗಬೇಕು. ಬದುಕು ಮತ್ತು ಅದರ ಹಿನ್ನೆಲೆ ಕಟ್ಟಿಕೊಡುವ ಕಲಾವಿದರ ಕಲಾಕೃತಿಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ,” ಎಂದು ಹೇಳಿದರು. 

ರಾಜ್ಯಸಭಾ ಸದಸ್ಯ ಡಾ.ಎಂ.ವಿ.ರಾಜೀವ್‌ಗೌಡ ಮಾತನಾಡಿ, “ಕಲಾವಿದರು ಕಲಾಕೃತಿಗಳ ಮೂಲಕ ಸಮಾಜಕ್ಕೆ ನೀಡುವ ಸಂದೇಶ ಕಾನೂನಿಗಿಂತ ಮಿಗಿಲಾದದ್ದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಕಲಾವಿದರ ಕೊಡುಗೆ ದೊಡ್ಡದು,” ಎಂದರು.  ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌, “ಕಲಾವಿದರು ರಚಿಸುವ ಕಲಾಕೃತಿಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.

ಕಲಾಕೃತಿ ಮತ್ತು ಕಲಾವಿದರು ಕರ್ನಾಟಕದ ಆಸ್ತಿ,” ಎಂದರು.  ಕಾರ್ಯಕ್ರಮದಲ್ಲಿ ಪರಿಷತ್ತಿನ ಕಾರ್ಯದರ್ಶಿ ಪ್ರೊ.ಎಂ.ಜೆ.ಕಮಲಾಕ್ಷಿ, ಸಹಾಯಕ ಕಾರ್ಯದರ್ಶಿ ಪ್ರೊ.ಕೆ.ಎಸ್‌.ಅಪ್ಪಜಯ್ಯ ಉಪಸ್ಥಿತರಿದ್ದರು. ಮಂಗಳವಾರದಿಂದ ಆರಂಭವಾಗಿರುವ ರಾಷ್ಟ್ರೀಯ ಕಲಾ ಶಿಬಿರದಲ್ಲಿ ವಿವಿಧ ರಾಜ್ಯಗಳ 16 ಕಲಾವಿದರು ಭಾಗವಹಿಸಿದ್ದರು.  

ಫೆ.25ರಿಂದ ನ್ಯಾಷನಲ್‌ ಕಲಾ ಶಿಬಿರ: “ಫೆ.25ರಿಂದ 10 ದಿನಗಳ ಕಾಲ ನ್ಯಾಷನಲ್‌ ಕಲಾ ಶಿಬಿರ ಆಯೋಜಿಸಲು ಸಿದ್ಧತೆ ನಡೆಸುತ್ತಿದ್ದೇವೆ. ವಿವಿಧ ರಾಜ್ಯಗಳ ಸುಮಾರು 111 ಕಲಾವಿದರು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಆಂತರಿಕ ದೃಷ್ಟಿ ಇರುವ ಕಲಾವಿದರಿಗೆ ತಮ್ಮ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ಬೆಂಗಳೂರಿನಲ್ಲಿ ಅವಕಾಶಗಳು ಬಹಳಷ್ಟಿವೆ. ವಿವಿಧ ಸಮುದಾಯದ, ವಿವಿಧ ಪ್ರಜ್ಞೆಯ ಜನರಿದ್ದು, ಅದರ ಲಾಭ ಪಡೆಯಬಹುದಾಗಿದೆ,” ಎಂದು ಕೇಂದ್ರ ಲಲಿತಕಲಾ ಅಕಾಡೆಮಿ ಆಡಳಿತಾಧಿಕಾರಿ ಚಿ.ಸು.ಕೃಷ್ಣಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.