ಭದ್ರತೆ ನೆರಳಲ್ಲಿ ಪರಪ್ಪನ ಅಗ್ರಹಾರ


Team Udayavani, Feb 15, 2017, 11:44 AM IST

parappana-agrrahara.jpg

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿದ ಪ್ರಕರಣದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಸೇರಿ ಮೂವರಿಗೆ ಸುಪ್ರೀಂ ಕೋರ್ಟ್‌ ನಾಲ್ಕು ವರ್ಷ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮೂವರು ಪರಪ್ಪನ ಅಗ್ರಹಾರ ವಿಶೇಷ ನ್ಯಾಯಾಲಯದ ಎದುರು ಬುಧವಾರ ಹಾಜರಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕೇಂದ್ರ ಕಾರಾಗೃಹ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪು ಹಿನ್ನೆಲೆಯಲ್ಲಿ ಶಶಿಕಲಾ, ಅವರ ಸ್ನೇಹಿತೆ ಇಳವರಸಿ, ಜಯಲಲಿತಾ ದತ್ತುಪುತ್ರ ಸುಧಾಕರನ್‌ ವಿಶೇಷ ಕೋರ್ಟ್‌ನ ನ್ಯಾಯಾಧೀಶರ ಎದುರು ಶರಣಾಗ ಬೇಕಿದೆ. ಬಳಿಕ ಕೋರ್ಟ್‌ನ ನಿಯಮಗಳು ಮುಗಿದ ಬಳಿಕ ಮೂವರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ರವಾನಿಸಲಾಗುತ್ತದೆ. 

 ಮುಂಜಾಗೃತ ಕ್ರಮವಾಗಿ ಆಗ್ನೇಯ ವಿಭಾಗ ಡಿಸಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕ್ರಮ ಕೈಗೊಂಡಿದ್ದು, ಕಾರಾಗೃಹಕ್ಕೆ ಕರೆತರುವಾಗ ಯಾವುದೇ ಭದ್ರತಾ ಲೋಪವಾಗದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ ಸೂದ್‌ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. 

ಕೇಂದ್ರ ಕಾರಾಗೃಹದ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ಹಾಗೂ ಹೊಸೂರು ಚೆಕ್‌ಪೋಸ್ಟ್‌ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ವಿಶೇಷ ಭದ್ರತೆ ಇಲ್ಲ: ಈ ಹಿಂದೆ ಜಯಲಲಿತಾ ಅವರಿಗೆ ವಿಶೇಷ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದ್ದ ವೇಳೆ ಅವರು 2014ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ 21 ದಿನ ಸೆರೆಮನೆ ವಾಸ ಅನುಭವಿಸಿದ್ದರು. ಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕಾರಣಿಯಾಗಿದ್ದ ಅವರಿಗೆ ಪ್ರಾಣ ಬೆದರಿಕೆ ಇದ್ದ ಕಾರಣ “ಝಡ್‌ ಪ್ಲಸ್‌’ ಭದ್ರತೆ ಇತ್ತು.

ಹೀಗಾಗಿ, ಭಾರೀ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಶಶಿಕಲಾ ಅವರಿಗೆ ಅಷ್ಟು ಭದ್ರತೆ ಕೊಡಲಾಗದು. ಆದರೆ ಅವರು ಇಲ್ಲಿ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಾರಾಗೃಹದ ಬಳಿ ಭದ್ರತೆ ಕಲ್ಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

ಭದ್ರತೆಯಲ್ಲಿ ದಾಖಲೆ: ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕರಣಟವಾದಾಗ ಶಾಂತಿ- ಸುವ್ಯವಸ್ಥೆ ಮತ್ತು ಭದ್ರತೆಗಾಗಿ ಪರಪ್ಪನ ಅಗ್ರಹಾರ ಸುತ್ತಮುತ್ತ ಐದು ಸಾವಿರ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ರು. ಈ ಬೆಳವಣಿಗೆ ಭದ್ರತೆ ವಿಚಾರದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು.

ಯಡಿಯೂರಪ್ಪ ವಿರುದ್ಧದ ಡಿನೋಟಿಕೇಷನ್‌ ಪ್ರಕರಣದ ತೀರ್ಪು ಪ್ರಕಟವಾಗಿದ್ದ ವೇಳೆ ಒದಗಿಸಿದ್ದ ಭದ್ರತೆ ಇದುವರೆಗಿನ ಅತಿ ಹೆಚ್ಚಿನ ಭದ್ರತೆಯ ತೀರ್ಪಾಗಿತ್ತು. ಆದರೆ, ಜಯಲಲಿತಾ ಪ್ರಕರಣದಲ್ಲಿ ಸುಮಾರು ಐದು ಸಾವಿರ ಪೊಲೀಸ್‌ ಸರ್ಪಗಾವಲಿನ ನಡುವೆ ತೀರ್ಪು ಪ್ರಕಟಗೊಂಡು ಹೊಸ ಇತಿಹಾಸ ಬರೆದಿತ್ತು. 

ಜಯಲಲಿತಾ ಇದ್ದ ಕೊಠಡಿಗೆ ಶಶಿಕಲಾ
ಶಶಿಕಲಾ ಸೇರಿ ಮೂವರನ್ನು ಕಾರಾಗೃಹಕ್ಕೆ ಒಪ್ಪಿಸುವ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ನಾವು ನಮ್ಮ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಕಾರಗೃಹದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಈ ಹಿಂದೆ ಜಯಲಲಿತಾ ಅವರಿದ್ದ ಕೊಠಡಿಯಲ್ಲೇ ಶಶಿಕಲಾ ಹಾಗೂ ಇಳವರಸಿಯನ್ನು ಇಡುವ ಸಾಧ್ಯತೆ ಇದೆ. ಜಯಲಲಿತಾ ಸಾಕುಮಗ ಸುಧಾಕರ್‌ ಅವರನ್ನು 2ನೇ ಮಹಡಿಯಲ್ಲಿರುವ ವಿಐಪಿ ಸೆಲ್‌ನಲ್ಲಿ ಇರಿಲಾಗುತ್ತದೆ ಎಂದು ಕೇಂದ್ರ ಕಾರಾಗೃಹದ ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.