ಜಾತಿವಾದಿಗಳಿಗೆ ಎಚ್ಚರಿಸಲು ತುಮಕೂರು ಸಮಾವೇಶ
Team Udayavani, Feb 15, 2017, 1:06 PM IST
ದಾವಣಗೆರೆ: ತುಮಕೂರು ಜಿಲ್ಲೆಯ ಗುಬ್ಬಿ ಒಳಗೊಂಡಂತೆ ರಾಜ್ಯದೆಲ್ಲೆಡೆ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಖಂಡಿಸಿ ಫೆ.16 ರಂದು ತುಮಕೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಜಿಲ್ಲಾ ಸಮಿತಿ ಗೌರವ ಅಧ್ಯಕ್ಷ ಅನೀಸ್ ಪಾಷಾ ತಿಳಿಸಿದ್ದಾರೆ.
ಮಂಗಳವಾರ ಪ್ರವಾಸಿ ಮಂದಿರದಲ್ಲಿ ನಡೆದ ತುಮಕೂರು ಚಲೋ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ದಲಿತ ದಮನಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಸಮಾಜದ ಬದಲಾವಣೆಗೆ ತುಮಕೂರು ಚಲೋ ಮಾನವತ ಸಮಾವೇಶ ಕೈಗೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ಫೆ. 15 ರ ಬುಧವಾರ ಬೆಳಗ್ಗೆ 11ಕ್ಕೆ ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಜ. 17ರಂದು ತುಮಕೂರು ಜಿಲ್ಲೆಯ ಗುಬ್ಬಿ, ಸಕಲೇಶಪುರದ ಹೊಸಕೋಟೆ, ಉಡುಪಿಯಲ್ಲಿ ನಡೆದಂತಹ ಪ್ರಕರಣಗಳು ಬೆಳಕಿಗೆ ಬಾರದಂತೆ ತಳಮಟ್ಟದಲ್ಲಿಯೇ ಮುಚ್ಚಿಹಾಕುವ ಹುನ್ನಾರ ಕೂಡ ನಡೆಯುತ್ತಿದೆ. ಸಂವಿಧಾನ ಜಾರಿಗೆ ಬಂದು 6 ದಶಕಗಳೇ ಕಳೆದಿವೆ. ಆದರೆ, ಸಂವಿಧಾನ ನೀಡಿದ ಎಲ್ಲಾ ರಕ್ಷಣೆಗಳನ್ನು ಲೆಕ್ಕಕ್ಕಿಲ್ಲದಂತೆ ಮಾಡಲಾಗುತ್ತಿದೆ.
ಶತಮಾನಗಳಿಂದ ಜಾರಿಯಲ್ಲಿರುವ ಜಾತೀಯತೆ ಎಂಬುದು ಇನ್ನೂ ಜನರ ಮನಸ್ಸನ್ನು ಆಳುತ್ತಿರುವುದೇ ಇದಕ್ಕೆಲ್ಲ ಕಾರಣವಾಗಿದೆ ಎಂದರು. ದಲಿತರು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯ ಬಗ್ಗೆ ಯಾವುದೇ ಜನಪ್ರತಿನಿಧಿಧಿಗಳು ಚಕಾರವೆತ್ತದೆ ಜಾತಿವಾದಿಗಳಿಗೆ ಬೆಂಬಲ ನೀಡುತ್ತಿದ್ದಾರೇಯೇ ವಿನಃ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿಯ ವಾತಾವರಣ ನಿರ್ಮಾಣ ಮಾಡುವಲ್ಲಿ ವಿಫಲರಾಗಿದ್ದಾರೆ.
ರಾಜಕಾರಣಿಗಳು ಹಾಗೂ ಜಾತಿವಾದಿಗಳಿಗೆ ಎಚ್ಚರಿಕೆ ಗಂಟೆಯಾಗಿ ತುಮಕೂರಿನಲ್ಲಿ ಮಾನವತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ಹೆಗ್ಗೆರೆ ರಂಗಪ್ಪ, ಕರ್ನಾಟಕ ಜನಶಕ್ತಿಯ ಎಸ್.ಕೆ. ಒಡೆಯರ್, ಸತೀಶ್ ಅರವಿಂದ್, ಮಾನವ ಬಂಧುತ್ವ ವೇದಿಕೆಯ ರಾಘು ದೊಡ್ಡಮನಿ, ಭಾರತೀಯ ಜನಕಲಾ ಸಮಿತಿಯ ಐರಣಿ ಚಂದ್ರು, ಬೀಡಿ ಕಾರ್ಮಿಕ ಸಂಘಟನೆಯ ಜಬೀನಾಖಾನಂ, ಉಚ್ಚಂಗಿ ಪ್ರಸಾದ್, ಟಿಪ್ಪುಸುಲ್ತಾನ್ ಟ್ರಸ್ಟ್ನ ಆದಿಲ್ಖಾನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.